ಕಬಕ: ಬೆಳ್ಳಂಬೆಳಗ್ಗೆ ಅನಧಿಕೃತ ಅಂಗಡಿಗಳ ತೆರವು ಕಾರ್ಯ
Team Udayavani, Nov 7, 2019, 11:01 AM IST
Representative Image used
ಪುತ್ತೂರು: ಪುತ್ತೂರು -ವಿಟ್ಲ ರಸ್ತೆಯ ಕಬಕದಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಗುರುವಾರ ಬೆಳ್ಳಂಬೆಳಗ್ಗೆ ನಡೆಯುತ್ತಿದೆ.
ಅನಧಿಕೃತ ಅಂಗಡಿಗಳ ತೆರವು ಕುರಿತು ಗ್ರಾಮ ಪಂಚಾಯತ್ ನಿಂದ ಈ ಹಿಂದೆ ನೋಟೀಸ್ ನೀಡಲಾಗಿತ್ತು. ಆದರೆ ಇದಕ್ಕೆ ಅಂಗಡಿಗಳನ್ನು ತೆರವು ಮಾಡದ ಹಿನ್ನೆಲೆಯಲ್ಲಿ ಕೋರ್ಟ್ನಲ್ಲೂ ಪ್ರಕರಣ ದಾಖಲಾಗಿ ಇದೀಗ ಕೋರ್ಟ್ ಆದೇಶದಂತೆ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಪುತ್ತೂರು ತಹಶೀಲ್ದಾರ್ರವರ ಉಪಸ್ಥಿತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನೊಂದಿಗೆ ಜೆಸಿಬಿಯಿಂದ ಅಂಗಡಿಗಳ ತೆರವು ಕಾರ್ಯಾಚರಣೆ ಬೆಳಿಗ್ಗೆ ಗಂಟೆ ಆರಕ್ಕೆ ನಡೆಯಿತು. ಸುಮಾರು 12 ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.
ಹೈಕೋರ್ಟ್ ಸ್ಟೇ ಆರ್ಡರ್
ಅಂಗಡಿ ತೆರವಿಗೆ ಸಂಬಂಧಿಸಿ ಬಂದಿರುವ ನೋಟೀಸ್ ಮೇಲೆ ಅಂಗಡಿ ಹೊಂದಿರುವವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಗಡಿಗಳ ತೆರವಿಗೆ ತಡೆಯಾಜ್ಣೆ ನೀಡಿ ಆದೇಶ ಹೊರಡಿದೆ. ಈ ಆದೇಶ ಪತ್ರವನ್ನು ಈ ಹಿಂದೆಯೂ ನೀಡಲಾಗಿದ್ದು, ಇದೀಗ ಇಂದು ಬೆಳಿಗ್ಗೆ ಅಂಗಡಿಗಳ ತೆರವು ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತೊಮ್ಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ತಡೆಯಾಜ್ಣೆ ನೋಟೀಸ್ ನೀಡುವ ವೇಳೆ ಬಹುತೇಕ ಅಂಗಡಿಗಳ ತೆರವು ಆಗಿದ್ದು, ಇನ್ನೂ ಕೂಡ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ