ಹೆಚ್ಚಿದ ಬೀದಿ ನಾಯಿ ಹಾವಳಿ: ವಾಹನ ಸವಾರರ ಪರದಾಟ
ಹುಚ್ಚು ನಾಯಿ ಕಂಡು ಬಂದಲ್ಲಿ ತಕ್ಷಣ ಕ್ರಮ: ಭರವಸೆ
Team Udayavani, Nov 7, 2019, 3:38 PM IST
ಕೆ. ದಿನೇಶ ಗಾಂವ್ಕರ
ಕುಮಟಾ: ಪಟ್ಟಣದ ಹಲವು ಕಡೆಗಳಲ್ಲಿ ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ ವಾಹನ ಸವಾರರು ಸೇರಿದಂತೆ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಸಾರ್ವಜನಿಕರಿಗೆ ಕಾಟ ನೀಡುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಿಸುವುದು ಅಥವಾ ಅವುಗಳ ಸಂತಾನ ಶಕ್ತಿ ಹರಣದಂತಹ ಶಸ್ರ¤ಚಿಕಿತ್ಸೆಗೆ ಪುರಸಭೆ ಕ್ರಮಕೈಗೊಳ್ಳುತ್ತಿಲ್ಲ ಎಂಬುದು ಬೇಸರದ ಸಂಗತಿ.
ಹೊಸ ಬಸ್ ನಿಲ್ದಾಣದ ಸುತ್ತಮುತ್ತಲೂ, ಉಪ್ಪಾರಕೇರಿ ರಸ್ತೆ, ಹಳೆ ಮೀನು ಮಾರುಕಟ್ಟೆ, ಬಸ್ತಿಪೇಟೆ ಹಾಗೂ ಹೊಸ ಹೆರವಟ್ಟಾ ರಸ್ತೆ ಸೇರಿದಂತೆ ಪಟ್ಟಣದ ಹಲವು ಕಡೆಗಳಲ್ಲಿ ದಿನದಿಂದ ದಿನಕ್ಕೆ ನಾಯಿಗಳ ದಂಡು ಹೆಚ್ಚುತ್ತಲೇ ಇವೆ. ಆರು ವರ್ಷಗಳ ಹಿಂದೆ ಪುರಸಭೆ ಬೀದಿನಾಯಿಗಳ ನಿಯಂತ್ರಣದ ಬಗ್ಗೆ ಕೆಲ ಕ್ರಮ ಕೈಗೊಂಡಿದ್ದನ್ನು ಹೊರತುಪಡಿಸಿದರೆ, ಇತ್ತಿಚಿನ ದಿನಗಳಲ್ಲಿ ಯಾವುದೇ ಸೂಕ್ತ ಯೋಜನೆ ಜಾರಿಗೆ ತಂದಿಲ್ಲ ಎಂಬುದು ಪಟ್ಟಣ ನಿವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಪುರಸಭೆ ಅಧಿಕಾರಿಗಳ ವಾದ: ಪಟ್ಟಣದ ಎಲ್ಲಾ ವಲಯಗಳ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು ಸಾಕಷ್ಟು ಹಣದ ಅವಶ್ಯಕತೆಯಿದೆ. ಶಸ್ತ್ರಚಿಕಿತ್ಸೆ ನಂತರವೂ ನಾಯಿಗಳ ಸಂತಾನ ನಿಲ್ಲುತ್ತದೆ ಎನ್ನಲು ಸಾಧ್ಯವಿಲ್ಲ ಮತ್ತು ಕಚ್ಚುವುದಿಲ್ಲ ಎಂದು ಹೇಳಲಾಗುವುದಿಲ್ಲ.
ಇದೊಂದು ರಾಜ್ಯ ವ್ಯಾಪಿ ಸಾಮಾಜಿಕ ಸಮಸ್ಯೆ. ಕೇವಲ ಪುರಸಭೆ ವತಿಯಿಂದ ನಾಯಿಗಳ ಹಾವಳಿ ನಿಯಂತ್ರಿಸಲು ಸಾಧ್ಯವಿಲ್ಲ. ಹುಚ್ಚು ಹಿಡಿದ ಹಾಗೂ ಅತೀ ವ್ಯಾಘ್ರವಾಗಿ ವರ್ತಿಸುವ ನಾಯಿಗಳ ಬಗ್ಗೆ ಮಾಹಿತಿ ದೊರೆತರೆ ತಕ್ಷಣ ನಾಶ ಪಡಿಸುವ ಯೋಜನೆ ಹಮ್ಮಿಕೊಂಡಿದ್ದೇವೆ.
ಕಚ್ಚಿದ ಬಳಿಕವೇ ಕಾರ್ಯಾಚರಣೆಗೆ ಮುಂದಾಗಬೇಕೆ?: ಜನರಿಗೆ ಕಚ್ಚಿದ ಸುದ್ದಿಯಾದಾಗ ಮಾತ್ರವೇ ಕಾರ್ಯಾಚರಣೆ ಪ್ರಾರಂಭಿಸಲು ಮುಹೂರ್ತ ಕೂಡಿಬರುತ್ತದೆಯೆ ಎಂಬ ಸಾರ್ವಜನಿಕರ ಪ್ರಶ್ನೆಗೆ ಪುರಸಭೆಯವರು ಉತ್ತರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ