ಕಬಡ್ಡಿ ಕ್ಯಾಪ್ಟನ್‌


Team Udayavani, Nov 8, 2019, 4:26 AM IST

cc-15

ಸಾಂದರ್ಭಿಕ ಚಿತ್ರ

ಇಂಜಿನಿಯರಿಂಗ್‌ ಕಾಲೇಜ್‌ ಅಂದ್ರೆ ಹಾಗೇ. ಎಡೆಬಿಡದೆ ನಡೆಯುವ ಕ್ಲಾಸುಗಳು. ಹೇಗೋ ಆಗುತ್ತಿವೆ ಎನ್ನುವ ಲ್ಯಾಬ್‌ಗಳು, ವರ್ಕ್‌ಶಾಪ್‌, ಲೆಕ್ಚರರ್, ಅಟೆಂಡೆನ್ಸ್‌- ಇತ್ಯಾದಿ ಇತ್ಯಾದಿಗಳಿಂದ ಸದಾ ರೆಸ್ಟ್‌ಲೆಸ್‌ ಆಗಿರುವ ಜೀವನ. ಇಂತಹ ಸಮಯದಲ್ಲಿ ನಮಗೆಲ್ಲಾ ಒಂಚೂರು ರೆಸ್ಟ್‌ ಸಿಗುವುದೇ ಕಾಲೇಜ್‌ ಡೇ ಹತ್ತಿರ ಬಂದಾಗ.

ಕಾಲೇಜ್‌ ಡೇ ಅಂದ ಮೇಲೆ ಸಾಂಸ್ಕೃತಿಕ ಚಟುವಟಿಕೆಗಳು, ಕ್ರೀಡಾ ಸ್ಪರ್ಧೆಗಳು, ಪ್ರೋತ್ಸಾಹ- ಇವೆಲ್ಲಾ ಸಾಮಾನ್ಯ. ಇತ್ತೀಚೆಗೆ ಒಂದು ದಿನ ಕಾಲೇಜ್‌ ಡೇಗಾಗಿ ಕಬಡ್ಡಿ ಸ್ಪರ್ಧೆ ನಡೆಯುತ್ತಿತ್ತು. ಅದನ್ನು ವೀಕ್ಷಿಸುತ್ತ ಒಂದು ಸಲ ನನ್ನ ಫ್ಲ್ಯಾಶ್‌ಬ್ಯಾಕ್‌ ಕಡೆಗೆ ಸಾಗಿದೆ.

ಹೌದು, ತೀರಾ ಸಣ್ಣಗಿರುವ ನನ್ನನ್ನು ನೋಡಿದರೆ ನಾನು ಕಬಡ್ಡಿ ಆಡಿದ್ದೆ ಅನ್ನುವುದನ್ನು ಯಾರೂ ನಂಬುವುದಿಲ್ಲ. ಆದರೆ, ಆಡಿದ್ದಂತೂ ಸತ್ಯ, ಅದೂ ಕ್ಯಾಪ್ಟನ್‌ ಆಗಿ! ಇವೆಲ್ಲದರ ಹಿಂದೆ ಒಂದು ದೊಡ್ಡ ಕಥೆಯೇ ಇದೆ.

ಆರನೆಯ ತರಗತಿಯಲ್ಲಿ ಎಕ್ಸ್‌ಟ್ರಾ ಪ್ಲೇಯರ್‌ ಆಗಿದ್ದ ನನಗೆ ಮುಂದಿನ ವರ್ಷ ಮತ್ತೆ ನನ್ನನ್ನು ಆಡಿಸಬಹುದೆಂಬ ನಂಬಿಕೆ ಇರಲಿಲ್ಲ. ಆದರೆ ನಡೆದಿದ್ದೇ ಬೇರೆ. ಚೌತಿಗಾಗಿ ನಡೆದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಖರ ದಾಳಿಗಾರ ಸಂತೋಷ್‌ ಎದುರಾಳಿ ತಂಡದ ನಾಯಕ. ನಮ್ಮದು ಅವರೆದುರು ಏನೂ ಅಲ್ಲದ ದುರ್ಬಲ ತಂಡ. ನಮ್ಮ ಸೋಲು ಖಚಿತವೆಂದೇ ಎಲ್ಲರೂ ಭಾವಿಸಿದ್ದರು. ಆದರೆ, ಆಗಿದ್ದಾಗಲಿ ಎಂದು ಮುನ್ನುಗ್ಗಿದ್ದ ನಾನು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಅಭೂತಪೂರ್ವ ಗೆಲುವೊಂದನ್ನು ದೊರಕಿಸಿಕೊಟ್ಟಿದ್ದೆ! ಯಾರೂ ನಿರೀಕ್ಷಿಸದಿದ್ದ ಆ ಸಾಧನೆ ನನ್ನ “ನಾಯಕತ್ವ’ಕ್ಕೆ ಮುನ್ನುಡಿ ಬರೆದಿತ್ತು.

ಮುಂದಿನ ವಲಯ ಮಟ್ಟದ ಕಬಡ್ಡಿಗೆ ಅಭ್ಯಾಸ ಆರಂಭವಾಯಿತು. ದಿನವಿಡೀ ಕಬಡ್ಡಿ, ಅದನ್ನು ಬಿಟ್ಟರೆ ಬೇರೇನಿಲ್ಲ. ಕೊನೆಗೂ ನಾನು, ಸಂತೋಷ್‌, ಮುಖೇಶ್‌, ಸುಮಂತ್‌ ಅವರನ್ನೊಳಗೊಂಡ ಸುಸಜ್ಜಿತ ತಂಡ ವೊಂದನ್ನು ಟೀಚರ್‌ ಸಿದ್ಧಪಡಿಸಿದರು. ನಿರೀಕ್ಷೆಯಂತೆಯೇ ನಾನು ಕ್ಯಾಪ್ಟನ್‌ ಆಗಿ ತಂಡವನ್ನು ಮುನ್ನಡೆಸಲು ತಯಾರಾಗಿದ್ದೆ.

ಉಜಿರೆಯಲ್ಲಿ ನಡೆದ ವಿಭಾಗ ಮಟ್ಟದ ಪಂದ್ಯಾಟದಲ್ಲಿ ಮೊದಲ ಪಂದ್ಯ ನಮ್ಮದೇ. ಹತ್ಯಡ್ಕದಂತಹ ಸಾಮಾನ್ಯ ಹಳ್ಳಿಯ ಶಾಲೆಯಿಂದ ಬಂದಿದ್ದ ನಮಗೆ ಆತಿಥೇಯ ತಂಡದೆದುರು ಆಡುವುದೇ ಒಂದು ಹೆಮ್ಮೆ ಅನಿಸಿತ್ತು.

ಅಂತೂ ಮೊದಲ ಪಂದ್ಯ ಆರಂಭವಾಯಿತು. ಅತ್ಯುತ್ಸಾಹದಿಂದ ಆಡಲು ಇಳಿದ ನಮ್ಮ ತಂಡ ಒಗ್ಗಟ್ಟಾಗಿ ಆಡಿ ಎರಡೇ ನಿಮಿಷದಲ್ಲಿ ಎದುರಾಳಿ ತಂಡವನ್ನು ಆಲೌಟ್‌ ಮಾಡಿತ್ತು! ಈ ಸಾಧನೆ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದ್ದಲ್ಲದೆ ಗೆಲುವು ಸುಲಭವಾಗಿಯೇ ದೊರಕಬಹುದೆಂದು ಭಾವಿಸಿದ್ದೆವು. ಆದರೆ, ಕೆಲವೇ ಕ್ಷಣಗಳಲ್ಲಿ ಪಂದ್ಯದ ದಿಕ್ಕೇ ಬದಲಾಯಿತು.

ರೈಡಿಂಗ್‌ ಸಂದರ್ಭದಲ್ಲಿ ನಾನು ಮತ್ತು ಸಂತೋಷ್‌ ಗಾಯಗೊಂಡು ಹೊರನಡೆದಿದ್ದರಿಂದ ತಂಡದ ಭಾರ ಸುಮಂತ್‌ನ ಮೇಲೆ ಬಿತ್ತು. ಎದುರಾಳಿ ತಂಡವೂ ಅವಕಾಶವನ್ನು ಉಪಯೋಗಿಸಿ ಮುನ್ನುಗ್ಗತೊಡಗಿತು. ತಂಡ ಸೋಲಿನತ್ತ ಮುಖ ಮಾಡಿದಾಗ ಮತ್ತೆ ನಾನು ತಂಡವನ್ನು ಸೇರಿಕೊಂಡರೂ ಒತ್ತಡ ನಿಭಾಯಿಸಲಾಗದೆ ಸೋಲನುಭವಿಸಬೇಕಾಯಿತು. ಸೋಲು ಸಣ್ಣ ಅಂತರದ್ದಾದರೂ ಅವಸರದಿಂದ ತೆಗೆದುಕೊಂಡ ನಿರ್ಧಾರಗಳೇ ಅದಕ್ಕೆ ಕಾರಣ ಎಂಬುದು ಸ್ಪಷ್ಟವಾಗಿತ್ತು. ವೈಯಕ್ತಿಕವಾಗಿ ನಾಯಕತ್ವ ವಿಚಾರದಲ್ಲಿ ನನಗೆದುರಾದ ಮೊದಲ ಸೋಲು ಅದಾಗಿತ್ತು.

ದಿನವಿಡೀ ಮಾಡಿದ ಅಭ್ಯಾಸಗಳು, ಕೈ-ಕಾಲುಗಳಲ್ಲಿ ತರಚಿದ ಗಾಯ, ಮನೆಯಲ್ಲಿ ಅಜ್ಜಿಯ ದಿನನಿತ್ಯದ ಬೈಗುಳ, ಅಪ್ಪನ ಎಚ್ಚರಿಕೆ, ಮಳೆಯಲ್ಲೂ ಕೆಸರಲ್ಲೂ ಆಡಿದ ನೆನಪು- ಎಲ್ಲವೂ ಅಂದೇ ಕೊನೆಯಾಗಿತ್ತು. ಮುಂದಿನ ವರ್ಷ ಹೈಸ್ಕೂಲ್‌ಗೆ ತೆರಳಲಿದ್ದ ನಮಗೆ ಅದು ಕೊನೆಯ ಅವಕಾಶವಾಗಿತ್ತು.

ಅದೇನೇ ಇರಲಿ, ಕಾಲೇಜ್‌ಡೇ ಕಬಡ್ಡಿ ನೋಡುತ್ತ ನೋಡುತ್ತ ಹಳೆಯ ನೆನಪು ಸ್ಮತಿಪಟಲದಲ್ಲಿ ಹಾದುಹೋಗಿ ಮತ್ತೆ ಕಬಡ್ಡಿ ಆಡಬೇಕು ಎಂಬ ಆಸೆ ಚಿಗುರಿದ್ದಂತೂ ನಿಜ.

ತುಳಸೀಧರ ಎಂ.
ನಿಕಟಪೂರ್ವ ವಿದ್ಯಾರ್ಥಿ ಎಸ್‌ಡಿಎಂಐಟಿ, ಉಜಿರೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.