ಆರು ದಶಕಗಳ ಬಳಿಕ ಕಿ.ಪ್ರಾ. ಹಂತದಿಂದ ಮೇಲೇರಿದ ಶಾಲೆ

ಶತಮಾನ ಕಂಡ ಬೊಳಂತೂರು ಮಾದರಿ ಹಿ.ಪ್ರಾ. ಶಾಲೆ

Team Udayavani, Nov 8, 2019, 4:54 AM IST

cc-46

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1911 ಶಾಲೆ ಆರಂಭ
ಬಡ ಮಕ್ಕಳ ವಿದ್ಯಾರ್ಜನೆಗೆ ಆರಂಭಗೊಂಡ ಶಾಲೆ

ಬಂಟ್ವಾಳ: ಬೊಳಂತೂರು ಪರಿಸರದ ಬಡ ಮಕ್ಕಳ ವಿದ್ಯಾರ್ಜನೆಗಾಗಿ ಬೊಳಂತೂರಿನ ಮಾಡದಾರು (ಮಾಡದ ಬಳಿ)ಯಲ್ಲಿ ಮುಳಿಹುಳ್ಳಿನ ಛಾವಣಿಯೊಂದಿಗೆ ಆರಂಭಗೊಂಡ ಬೋಳಂತೂರು ಶಾಲೆ ಕಿ.ಪ್ರಾ. ಹಂತದಿಂದ ಮೇಲಕ್ಕೇರಿದ್ದು ಬರೋಬ್ಬರಿ 6 ದಶಕಗಳ ಬಳಿಕ. ಪ್ರಸ್ತುತ ದ.ಕ. ಜಿ.ಪಂ. ಮಾದರಿ ಹಿ.ಪ್ರಾ. ಶಾಲೆಯಾಗಿ ಬೆಳೆದಿದೆ.

1911ರಲ್ಲಿ ಸ್ಥಳೀಯ ಪ್ರಗತಿಪರ ಕೃಷಿಕ ದಿ| ಉಗ್ಗಪ್ಪ ರೈ ಅವರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂದು ತನ್ನ ಉಸ್ತುವಾರಿಯಲ್ಲೇ ಈ ಶಾಲೆ ಯನ್ನು ಪ್ರಾರಂಭಿಸಿದ್ದರು. 27 ವರ್ಷಗಳ ಕಾಲ ಶಾಲೆ ಅವರ ಉಸ್ತುವಾರಿಯಲ್ಲೇ ಮುನ್ನಡೆದಿದ್ದು, ಮುಕ್ಕಾರು ಅನಂತಯ್ಯ ಪ್ರಾರಂಭದ ಹಂತದಲ್ಲಿ
ಶಿಕ್ಷಕರಾಗಿ ದುಡಿದಿದ್ದರು.

ಪ್ರಾರಂಭದಲ್ಲಿ 1-5ರ ವರೆಗೆ
14 ವಿದ್ಯಾರ್ಥಿಗಳ ಮೂಲಕ ಪ್ರಾರಂಭಗೊಂಡ ಶಾಲೆಯಲ್ಲಿ 1ರಿಂದ 5ನೇ ತರಗತಿ ವರೆಗೆ ಮಾತ್ರ ಶಿಕ್ಷಣ ನೀಡಲಾಗುತ್ತಿತ್ತು. 6ನೇ ಪ್ರಾರಂಭ ಗೊಂಡಿದ್ದು 62 ವರ್ಷಗಳ ಬಳಿಕ 1973-74ರಲ್ಲಿ. ಮುಂದೆ ಸರಕಾರದ ಅನುದಾನದೊಂದಿಗೆ ಅಭಿವೃದ್ಧಿ ಹೊಂದಿದೆ. ಪ್ರಸ್ತುತ 1ರಿಂದ 8ನೇ ತರಗತಿಯವರೆಗೆ 175 ವಿದ್ಯಾರ್ಥಿಗಳಿದ್ದು, ಒಟ್ಟು 8 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬೊಳಂತೂರಿಗೆ ಸೀಮಿತವಾಗಿದ್ದ ಶಾಲೆ ಬಳಿಕ ಕೊಕ್ಕಪುಣಿ, ಗುಂಡಿಮಜಲು, ಬಂಡೆಸಾಲೆ, ಚನಿಲ, ಮಾಡದಬಳಿ, ನಾಡಾಜೆ, ದಂಡೆಮಾರು ಪ್ರದೇಶಕ್ಕೆ ವಿಸ್ತರಣೆಗೊಂಡಿತ್ತು. ಪ್ರಸ್ತುತ ಇದು ಬೊಳಂತೂರು ಗ್ರಾಮದಲ್ಲಿರುವ ಏಕೈಕ ಸರಕಾರಿ ಶಾಲೆಯಾಗಿದೆ.

ರಾಷ್ಟ್ರಮಟ್ಟದ ಸಾಧನೆ
ಪ್ರಸ್ತುತ 1.84 ಎಕ್ರೆ ನಿವೇಶನವು ಶಾಲೆಯ ಸುಪರ್ದಿಯಲ್ಲಿದ್ದು, ವ್ಯವಸ್ಥಿತ ಕಟ್ಟಡದೊಂದಿಗೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒಳಗೊಂಡಿದೆ. ವಿಶಾಲವಾದ ಆಟದ ಮೈದಾನ ಹಾಗೂ ರಂಗಮಂದಿರವಿದೆ. ಶಾಲೆಯ ಸುತ್ತ ತೆಂಗಿನ ಮರಗಳ ಜತೆಗೆ ಇತರ ಕೆಲವೊಂದು ಮರಗಳಿವೆ. ವಿದ್ಯಾರ್ಥಿಗಳ ಸಾಧನೆಯನ್ನು ನೋಡುವುದಾದರೆ, 2010ರಲ್ಲಿ ಈ ಶಾಲೆಯ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ
ಆಡಿದ್ದಾರೆ. 2003-04ರಲ್ಲಿ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟವನ್ನೂ ಪ್ರತಿನಿಧಿಸಿರುವುದು ವಿಶೇಷವಾಗಿದೆ.
ತಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರು

ಬೊಳಂತೂರು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ನೂರಾರು ಮಂದಿ ಇಂದು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿ ಸಾಧನೆ ಮಾಡಿದ್ದಾರೆ. ಪ್ರಾಧ್ಯಾಪಕರು, ಎಂಜಿನಿಯರ್‌ಗಳು ಹಾಗೂ ವೈದ್ಯರಾಗಿಯೂ ದುಡಿಯುತ್ತಿದ್ದಾರೆ. ರಾಜಕೀಯ ಕ್ಷೇತ್ರ ನೋಡುವುದಾದರೆ, ಹಿಂದೆ ಬಂಟ್ವಾಳ ತಾಲೂಕು ಪಂಚಾಯತ್‌ನ ಅಧ್ಯಕ್ಷರಾಗಿದ್ದ ಚಂದ್ರಹಾಸ ಶೆಟ್ಟಿ ಬೊಳಂತೂರು ಅವರು ಇಲ್ಲಿನ ಹಳೆ ವಿದ್ಯಾರ್ಥಿಯಾಗಿದ್ದು, ಜತೆಗೆ ತಾಲೂಕು ಪಂಚಾಯನ ಹಾಲಿ ಉಪಾಧ್ಯಕ್ಷ ಬಿ.ಎಂ.ಅಬ್ಟಾಸ್‌ ಆಲಿ ಅವರೂ ಇದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದಾರೆ.

108 ವರ್ಷಗಳ ಇತಿಹಾಸವಿರುವ ಬೊಳಂತೂರು ಶಾಲೆ ಮುಳಿಹುಲ್ಲಿನ ಛಾವಣಿಯಲ್ಲಿ ಆರಂಭವಾಗಿ ಪ್ರಸ್ತುತ ಮೂಲ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿದೆ. ಪಠ್ಯೇತರ ಚಟುವಟಿಕೆ ಗಳಲ್ಲೂ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲಾಗುತ್ತಿದೆ.
-ಶಾಲಿನಿ ಪಿ., ಮುಖ್ಯ ಶಿಕ್ಷಕಿ

ಸಮಾಜದ ಜತೆ ಹೇಗೆ ಬೆರೆಯಬೇಕು ಎಂಬುದನ್ನು ಬೊಳಂತೂರು ಶಾಲೆ ಕಲಿಸಿದೆ. ಇದು ಬದುಕಿಗೆ ಅನುಕೂಲ ವಾಗಿದೆ. ಎಲ್ಲರೊಳಗೊಂದಾಗಿ ಬದುಕುವ ತತ್ತ್ವವನ್ನು ಅಂದಿನ ಶಿಕ್ಷಕರು ಕಲಿಸಿ ದ್ದರು. ಬೊಳಂತೂರು ಶಾಲೆಯ ಅಂದಿನ ಗುಣಮಟ್ಟದ ಶಿಕ್ಷಣ ಇಂದಿಗೂ ಮುಂದುವರಿದಿರುವುದು ಹೆಮ್ಮೆಯ ವಿಚಾರ.
-ಬಿ.ಎಂ. ಅಬ್ಟಾಸ್‌ ಆಲಿ, ಉಪಾಧ್ಯಕ್ಷರು, ತಾ.ಪಂ. ಬಂಟ್ವಾಳ, ಹಳೆ ವಿದ್ಯಾರ್ಥಿ

-  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.