ಸಾಲ ಮನ್ನಾ: ಸಾಫ್ಟ್‌ವೇರ್‌ ಮತ್ತೆ 3 ದಿನ ತೆರೆಯಲು ನಿರ್ಧಾರ


Team Udayavani, Nov 8, 2019, 5:27 AM IST

cc-54

ಸುಳ್ಯ: ಕೃಷಿಕರ ಸಾಲ ಮನ್ನಾ ಹಣ ಪಾವತಿಗೆ ಸಂಬಂಧಿಸಿ ಉಳಿತಾಯ ಖಾತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಈ ಹಿಂದೆ ತೆರೆಯಲಾಗಿದ್ದ ಸಾಫ್ಟ್‌ವೇರನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ನ. 11ರಿಂದ ಮತ್ತೆ ಮೂರು ದಿನಗಳ ಕಾಲ ತೆರೆಯಲು ನಿರ್ಧರಿಸಲಾಗಿದೆ.

ಜಿಲ್ಲೆಯ 17,744 ಫಲಾನುಭವಿಗಳ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಉಳಿತಾಯ ಖಾತೆ ಸಮರ್ಪಕವಾಗಿಲ್ಲದ ಕಾರಣ 128.22 ಕೋ.ರೂ. ಡಿಸಿಸಿ ಬ್ಯಾಂಕ್‌ನಿಂದ ಅಪೆಕ್ಸ್‌ ಬ್ಯಾಂಕ್‌ಗೆ ವಾಪಸಾಗಿತ್ತು. ಹಣ ವಾಪಸಾಗಿರುವ ಫಲಾನುಭವಿಗಳ ಖಾತೆಯ ಮಾಹಿತಿ ಸರಿಪಡಿಸಲು ಕಳೆದ ತಿಂಗಳು ಸುಧಾರಿತ ಆನ್‌ಲೈನ್‌ ಸಾಫ್ಟ್ ವೇರ್‌ ಆಪ್ಶನ್‌ ತೆರೆಯಲಾಗಿತ್ತು. ಆದರೆ ಅದು ಮೂರೇ ದಿನಗಳಲ್ಲಿ ಸ್ಥಗಿತಗೊಂಡ ಕಾರಣ ಶೇ. 70ರಷ್ಟು ಫಲಾನುಭವಿಗಳು ಮತ್ತೆ ಅತಂತ್ರರಾಗಿದ್ದರು. ಅಲ್ಲಲ್ಲಿ ಪ್ರತಿಭಟನೆಗಳೂ ನಡೆದವು. ಪರಿಣಾಮವಾಗಿ ಎರಡನೆ ಬಾರಿಗೆ ಸಾಫ್ಟ್‌ವೇರ್‌ ತೆರೆಯಲು ಅವಕಾಶ ದೊರೆತಿದೆ. ಡಿಸಿಸಿ ಬ್ಯಾಂಕ್‌ ಶಾಖೆಗಳಲ್ಲಿ ರೈತರ ಕೆಸಿಸಿ ಉಳಿತಾಯ ಖಾತೆಯ ವಿವರಗಳನ್ನು ಅಪ್‌ಲೋಡ್‌ ಮಾಡಿ ದೃಢೀಕರಿಸುವ ಕಾರ್ಯ ಈ ಮೂರು ದಿನಗಳಲ್ಲಿ ನಡೆಯಲಿದೆ.

ಸಮಸ್ಯೆ ಏನಾಗಿತ್ತು?
ಈ ಹಿಂದೆ ಆಯಾ ಸಹಕಾರ ಬ್ಯಾಂಕ್‌ ವ್ಯಾಪ್ತಿಯ ಡಿಸಿಸಿ ಬ್ಯಾಂಕ್‌ ಶಾಖೆಗಳಲ್ಲಿ ಅ. 23ರಿಂದ ಅ. 25ರ ತನಕ ಅಪ್‌ಡೇಟ್‌ಗೆ ಅವಕಾಶ ನೀಡಲಾಗಿತ್ತು. ಆದರೆ 3 ದಿನಗಳಲ್ಲಿ ಶೇ. 30ರಷ್ಟು ಮಾತ್ರ ಅಪ್‌ಡೇಟ್‌ ಆಗಿ ಶೇ. 70ರಷ್ಟು ಬಾಕಿ ಇತ್ತು. ಈಗಾಗಲೇ ಅಪ್‌ಡೇಟ್‌ ಮಾಡಲಾದ ಫಲಾನುಭವಿಗಳ ಪೈಕಿ ಕೆಲವರಿಗೆ ಮನ್ನಾ ಹಣ ಜಮೆ ಆಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಸಮಸ್ಯೆ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಭೂಮಿ ಆಯುಕ್ತರು ಅಪ್‌ಡೆೇಟ್‌ ಸಾಫ್ಟ್‌ ವೇರನ್ನು ಮತ್ತೆ ಮೂರು ದಿನ ತೆರೆಯುವುದಾಗಿ ತಿಳಿಸಿದ್ದಾರೆ. ಈ ವೇಳೆ ಬಾಕಿ ಇರುವ ಉಳಿತಾಯ ಖಾತೆ ಸಮಸ್ಯೆ ಬಗೆಹರಿಸಲಾಗುವುದು. ಬೇಡಿಕೆ, ಮಂಜೂರಾತಿ ಹಂತದಲ್ಲಿ ತಿರಸ್ಕೃತವಾದ ಫಲಾನುಭವಿಗಳ ಸಮಸ್ಯೆಯನ್ನು ಬಗೆಹರಿಸಿ ಅವರಿಗೂ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ 1 ತಿಂಗಳೊಳಗೆ ಸಾಲ ಮನ್ನಾ ಎಲ್ಲರಿಗೂ ಸಿಗುವಂತೆ ಮಾಡುವುದು ನಮ್ಮ ಗುರಿ. – ಮಂಜುನಾಥ ಸಿಂಗ್‌, ಉಪ ನಿಬಂಧನಾಧಿಕಾರಿ, ಸಹಕಾರ ಇಲಾಖೆ, ಪುತ್ತೂರು

ಉದಯವಾಣಿ ನಿರಂತರ ವರದಿ
ಸಾಲಮನ್ನಾ ಸೌಲಭ್ಯದಿಂದ ಅವಿಭಜಿತ ಜಿಲ್ಲೆಯ ಫಲಾನುಭವಿಗಳು ಸಮಸ್ಯೆಗೆ ಒಳಗಾಗಿರುವ ಕುರಿತು ಉದಯವಾಣಿ ನಿರಂತರ ವರದಿ ಪ್ರಕಟಿಸುವ ಮೂಲಕ ಆಡಳಿತ ಮತ್ತು ಇಲಾಖೆಯ ಗಮನ ಸೆಳೆದಿತ್ತು. ಪೂರಕವಾಗಿ ಶಾಸಕ ಅಂಗಾರ ಅವರು ಸಚಿವರಿಗೆ ಮನವಿ ಸಲ್ಲಿಸಿ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದ್ದರು. ರೈತರ ಪ್ರತಿಭಟನೆಯೂ ನಡೆದಿತ್ತು. ಸಹಕಾರ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸಮಸ್ಯೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಇವೆಲ್ಲದರ ಫ‌ಲವಾಗಿ ಸಾಫ್ಟ್ವೇರ್‌ ಮತ್ತೆ ಮೂರು ದಿನ ಕಾರ್ಯಾಚರಿಸಲಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.