ಎಲ್ಲೆಡೆ ಈಗ ಬಿರುಸಿನ ಪ್ರಚಾರ
ಅಭ್ಯರ್ಥಿಗಳ ಪರ ಮುಖಂಡರ ಓಡಾಟಮತದಾರರ ಮನ ಗೆಲ್ಲಲು ಹರಸಾಹಸ
Team Udayavani, Nov 8, 2019, 11:14 AM IST
ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಸಿಪಿಐ ಮುಖಂಡರು, ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸಿದರು.
ಗುರುವಾರ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕೆ.ಟಿ.ಜೆ. ನಗರ- ವಾರ್ಡ್ನ ಬಿಜೆಪಿ ಅಭ್ಯರ್ಥಿ ಯಶೋಧಾ ಯೋಗೇಶ್ ಪರ ಪ್ರಚಾರ ನಡೆಸಿದರು. ಮನೆ ಮನೆಗೆ ತೆರಳಿ, ಕೇಂದ್ರ, ರಾಜ್ಯ ಸರ್ಕಾರದ ಸರ್ಕಾರದ ಸಾಧನೆ ತಿಳಿಸಿ, ದಾವಣಗೆರೆ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.
ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್, ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಇತರರು ಭಗತ್ಸಿಂಗ್ ನಗರ ವಾರ್ಡ್ನ ಬಿಜೆಪಿ ಅಭ್ಯರ್ಥಿ ಆರ್. ಲಕ್ಷ್ಮಣ್ ಪರ ವಿವಿಧ ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿ, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಜಾಲಿನಗರ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ವಿನಾಯಕ ಪೈಲ್ವಾನ್ ಪರ ಪ್ರಚಾರ ನಡೆಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ತಮ್ಮ ಪುತ್ರ, 10ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ರಾಕೇಶ್ ಜಾಧವ್ ಪರ ವಿವಿಧ ಭಾಗದಲ್ಲಿ ಪ್ರಚಾರ ನಡೆಸಿದರು.
ಮಾಜಿ ಮೇಯರ್ ಅನಿತಾ ಮಾಲತೇಶ್ ತಮ್ಮ ಪತಿ, 10ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಮಾಲತೇಶ್ ಜಾಧವ್ ಪರ ಪ್ರಚಾರ ನಡೆಸಿದರು. ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ. ಗಣೇಶ್ ದಾಸಕರಿಯಪ್ಪ 14ನೇ ವಾರ್ಡ್ನ ಸಾದತ್ ಮುಬಾರಕ್ ಪರ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.
17ನೇ ವಾರ್ಡ್ನ ಸಿಪಿಐ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್, 16ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಎಚ್. ದಿವಾಕರ್ ಇತರರು ಪ್ರಚಾರ ನಡೆಸಿದರು. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಬೂಬಜಾರ್ ಮತ್ತು ಶೇಖರಪ್ಪ ನಗರದಲ್ಲಿ 19ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಕೆ.ಎಂ. ಬಸವರಾಜ್ ಪರ ಚುನಾವಣಾ ಪ್ರಚಾರ ನಡೆಸಿದರು. ಬಂಬೂಬಜಾರ್ ಮತ್ತು ಶೇಖರಪ್ಪ ನಗರದ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ದಾವಣಗೆರೆ ನಗರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಪಿ. ವಾಗೀಶ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಎಸ್.ಸುಶೀಲಮ್ಮ, ವೈ. ಮಲ್ಲೇಶ್, ಕುಮಾರ್ಸ್ವಾಮಿ, ಗೌತಮ್ ಜೈನ್, ಟಿ.ವಿ. ರಾಜು, ಮರುಳಪ್ಪ, ಸಿದ್ದೇಶ್, ಗಂಗಾಧರನಾಯ್ಕ, 14ನೇ ವಾರ್ಡ್ ಅಭ್ಯರ್ಥಿ ವೇಣು, ಎನ್.ಎಚ್. ಹಾಲೇಶ್, ಯಲ್ಲೇಶ್, ಶಾಂತಕುಮಾರ, ಕಂಚಿಕೆರೆ ರುದ್ರೇಶ್, ಶಿವರಾಜ್, ಚಂದ್ರು, ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.