ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷ ರಾಜೀನಾಮೆ
Team Udayavani, Nov 8, 2019, 6:37 PM IST
ಮಂಗಳೂರು: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವರುಣ್ ರಾಜ್ ಅಂಬಟ್ ಹಾಗೂ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಅರುಣ್ ಕುವೆಲ್ಲೋ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಹುದ್ದೆಗೆ ಶುಕ್ರವಾರದಂದು ರಾಜೀನಾಮೆ ನೀಡಿರುತ್ತಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಕಾರ್ಯಗಳನ್ನು ಮಾಡಿರುತ್ತೇನೆ. ಆದರೆ ಈಗ ಕೆಲವು ಜಾತೀವಾದಿ ಹಾಗೂ ವಲಸೆ ನಾಯಕರುಗಳಿಂದ ಕಾಂಗ್ರೆಸ್ ಪಕ್ಷವು ಹೊರಳುತ್ತಿದ್ದು, ಇಂತಹ ನಾಯಕರ ಸೊತ್ತಾಗುತ್ತಿದೆ. ಇದರಿಂದ ನನ್ನಂತಹಾ ಕಾರ್ಯಕರ್ತನಿಗೆ ಅನ್ಯಾಯವಾಗಿದ್ದು,ಈ ವಿಚಾರದಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ವರುಣ್ ರಾಜ್ ಅಂಬಟ್ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರಿಗೆ ಬರೆದ ಪತ್ರದಲ್ಲಿ ರಾಜೀನಾಮೆಗೆ ಕಾರಣವನ್ನು ವಿವರಿಸಿದ್ದಾರೆ.
ಅರುಣ್ ಕುವೆಲ್ಲೋ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ನಾನು ಹಿರಿಯ ನಾಯಕ ಜನಾರ್ಧನ ಪೂಜಾರಿಯವರ ಅಭಿಮಾನಿಯಾಗಿದ್ದು, ಅವರನ್ನು ಕಾಂಗ್ರೆಸ್ ಪಕ್ಷದ ವಲಸೆ ನಾಯಕರು ಕಡೆಗಣಿಸಿರುವುದರಿಂದ ಬೇಸರಿಸುತ್ತೇನೆ. ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಜಾತಿವಾದಿಯತ್ತ ಹೊರಳುತ್ತಿದ್ದು, ವಲಸೆ ಕಾಂಗ್ರೆಸಿಗರ ಸೊತ್ತಾಗುತ್ತಿದೆ. ಜ್ಯಾತ್ಯಾತೀತ ನಾಯಕರಿಗೆ ಇಲ್ಲಿ ಉಸಿರು ಕಟ್ಟುವ ವಾತಾವರಣವಿರುತ್ತದೆ. ಈ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!