ರಾಯಚೂರು ಕೃಷಿ ವಿವಿ ಕ್ಯಾಂಪಸ್‌ನಲ್ಲಿ ಸೈಕಲ್‌ ಸವಾರಿ


Team Udayavani, Nov 9, 2019, 3:08 AM IST

rayachuru

ರಾಯಚೂರು: ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿ ರುವ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಈಗ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಆದ್ಯತೆ ನೀಡುತ್ತಿದೆ. ಕ್ಯಾಂಪಸ್‌ ಒಳಗೆ ವಾಹನಗಳ ಓಡಾಟಕ್ಕೆ ಬ್ರೇಕ್‌ ಹಾಕಿ ಸೈಕಲ್‌ ಬಳಸಲು ಸಜ್ಜಾಗಿದೆ.  ಕೆಲ ದಿನಗಳ ಹಿಂದೆ ಹಸಿರು ಪದವೀಧಾರಣೆ ಕಾರ್ಯಕ್ರಮ ಜಾರಿಗೊಳಿಸಿ ಪ್ರತಿ ವಿದ್ಯಾರ್ಥಿಗೆ ಒಂದು ಗಿಡ ಬೆಳೆಸುವ ಹೊಣೆ ನೀಡಲಾಗಿತ್ತು.

ಈಗ ಕ್ಯಾಂಪಸ್‌ ಒಳಗೆ ಪರಿಸರ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಕುಲಪತಿ ಡಾ| ಕೆ.ಎನ್‌.ಕಟ್ಟಿಮನಿ ಸೈಕಲ್‌ಗ‌ಳ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ವಿವಿ ಸಿಬ್ಬಂದಿ, ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ತೋರಿಸಿ ಸೈಕಲ್‌ ಪಡೆಯ ಬಹುದು. ಇದರಿಂದ ಆಡಳಿತ ಭವನ, ಕಾಲೇಜ್‌, ಬ್ಯಾಂಕ್‌, ಪ್ರಯೋಗಾಲಯ, ದೂರದಲ್ಲಿರುವ ವಿವಿಯ ಹೊಲಗಳಿಗೆ ಭೇಟಿಗೆ ತೆರಳಬಹುದು. ಇದ ರಿಂದ ಮಾಲಿನ್ಯ ನಿಯಂತ್ರಣದ ಜತೆಗೆ ಆರೋಗ್ಯಕ್ಕೂ ಒಳ್ಳೆಯದು ಎನ್ನುವುದು ಸಿಬ್ಬಂದಿ ವಿವರಣೆ. ಆರಂಭದಲ್ಲಿ ಪ್ರಯೋಗಾತ್ಮಕವಾಗಿ 10 ಸೈಕಲ್‌ ಖರೀದಿಸಲಾಗಿದೆ.

ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗ್ಗೆಯಿಂದ ಸಂಜೆವರೆಗೂ ಸೈಕಲ್‌ಗ‌ಳು ಬ್ಯುಸಿಯಾಗುತ್ತಿವೆ. ಅಲ್ಲದೇ, ಒಬ್ಬರಾಗುತ್ತಿದ್ದಂತೆ ಒಬ್ಬರು ಸೈಕಲ್‌ ತೆಗೆದುಕೊಂಡು ಹೋಗಲು ಕಾಯುತ್ತಿದ್ದಾರೆ. ಇದರಿಂದ ಶೀಘ್ರವೇ 30 ಸೈಕಲ್‌ ಖರೀದಿಗೆ ಚಿಂತನೆ ನಡೆಸಲಾಗಿದೆ. ಎಲ್ಲ ವಿಭಾಗಗಳು, ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಪ್ರತ್ಯೇಕ ಸೈಕಲ್‌ ನೀಡುವ ಉದ್ದೇಶ ಇದೆ ಎನ್ನುತ್ತಾರೆ ಕುಲಪತಿ ಡಾ|ಕಟ್ಟಿಮನಿ. ಅಲ್ಲದೇ ನಿತ್ಯ ಬೆಳಗ್ಗೆ ಹಾಗೂ ಸಂಜೆ ವಿವಿ ವಾಯು ವಿಹಾರಕ್ಕೆ ಬರುವ ನೂರಾರು ಜನ ಬೈಕ್‌ಗಳನ್ನು ತರುತ್ತಿದ್ದು, ಅವರಿಗೂ ಈ ಯೋಜನೆ ಪ್ರೇರಣೆಯಾಗುತ್ತಿದೆ.

ದೊಡ್ಡ ಮೈದಾನ: ಸುಮಾರು 700 ಎಕರೆ ಪ್ರದೇಶದಲ್ಲಿ ರಾಯಚೂರು ಕೃಷಿ ವಿವಿ ಸ್ಥಾಪನೆಗೊಂಡಿದೆ. ಒಂದು ತುದಿಯಿಂದ ಮತ್ತೂಂದು ತುದಿಗೆ ತೆರಳಬೇಕಾದರೆ ವಾಹನಗಳನ್ನೇ ಬಳಸಲಾಗುತ್ತಿದೆ. ಆಡಳಿತಾತ್ಮಕ ಪ್ರದೇ ಶವೇ ಏನಿಲ್ಲವೆಂದರೂ 250-300 ಎಕರೆ ಪ್ರದೇಶವಿದೆ. ಇನ್ನು ಉಳಿದೆಲ್ಲ ಪ್ರದೇಶಗಳಲ್ಲಿ ವಿವಿಯಿಂದ ಸಂಶೋಧನಾ ತಳಿಗಳನ್ನು ಬೆಳೆಯಲಾಗುತ್ತಿದೆ. ಹೀಗೆ ನಾನಾ ಕೆಲಸಗಳಿಗೆ ನಿತ್ಯ ಒಂದೆರಡು ಬಾರಿ ಓಡಾಟ ಇದ್ದೇ ಇರುತ್ತದೆ. ಇದನ್ನು ಮನಗಂಡ ಆಡಳಿತ ಮಂಡಳಿ ಇಂಥ ಪ್ರಯೋಗಕ್ಕೆ ಮುಂದಾಗಿದೆ. ಕೃಷಿ ವಿವಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಶೀಘ್ರವೇ ಎಲೆಕ್ಟ್ರಿಕಲ್‌ ವಾಹನ: ಇಷ್ಟು ಮಾತ್ರವಲ್ಲದೇ ಅಧಿ ಕಾರಿಗಳು ಕೂಡ ಪರಿಸರ ಸ್ನೇಹಿ ವಾಹನ ಬಳಸು ವಂತಾಗಬೇಕು ಎಂಬ ಕಾರಣಕ್ಕೆ ಎಲೆಕ್ಟ್ರಿಕಲ್‌ ವಾಹನ ಖರೀದಿಗೆ ಆಡಳಿತ ಮಂಡಳಿ ಮುಂದಾಗಿದೆ. ಸುಮಾರು 7-8 ಜನ ಏಕಕಾಲಕ್ಕೆ ಓಡಾಡಬಹು ದಾದ ಎಲೆಕ್ಟ್ರಿಕಲ್‌ ವಾಹನವನ್ನು ಮುಂದಿನ ತಿಂಗಳು ನಡೆಯಲಿರುವ ಕೃಷಿ ಮೇಳದ ವೇಳೆ ತರುವ ಚಿಂತನೆ ಮಾಡಲಾಗಿದೆ. ವಿವಿಗೆ ಒಂದಲ್ಲ ಒಂದು ನಿಯೋಗ, ಉನ್ನತ ಮಟ್ಟದ ಅಧಿ ಕಾರಿಗಳ ತಂಡ ವೀಕ್ಷಣೆಗೆ ಬರುತ್ತಲೇ ಇರುತ್ತದೆ. ಆಗೆಲ್ಲ ಅವರನ್ನು ಕಾರುಗಳಲ್ಲೇ ಓಡಾಡಿಸಲಾಗುತ್ತಿದೆ. ಅದಕ್ಕಿಂತ ಎಲೆಕ್ಟ್ರಿಕಲ್‌ ವಾಹನ ಬಳಸಿದರೆ ಉತ್ತಮ ಎಂಬ ಚಿಂತನೆ ಮಾಡಲಾಗಿದೆ.

ಕೃಷಿ ವಿವಿ ಕ್ಯಾಂಪಸ್‌ ಮಾಲಿನ್ಯ ಮುಕ್ತವಾಗಬೇಕು ಎಂಬುದೇ ನಮ್ಮ ಧ್ಯೇಯ. ಆ ನಿಟ್ಟಿನಲ್ಲಿ ಗಿಡ-ಮರ ಗಳನ್ನು ಹೆಚ್ಚಾಗಿ ಬೆಳೆಸುವ ಯೋಜನೆ ಈಗಾಗಲೇ ಶುರುವಾಗಿದೆ. ಅದರ ಜತೆಗೆ ಕ್ಯಾಂಪಸ್‌ ಒಳಗೆ ಓಡಾಡಲು ಸೈಕಲ್‌ಗ‌ಳನ್ನು ನೀಡಲಾಗಿದೆ. ಸೈಕಲ್‌ಗ‌ಳ ಬೇಡಿಕೆ ಹೆಚ್ಚಾಗಿದೆ. ಶೀಘ್ರ 30 ಸೈಕಲ್‌ ಖರೀದಿಸುವ ಚಿಂತನೆ ಇದೆ.
-ಡಾ| ಕೆ.ಎನ್‌.ಕಟ್ಟಿಮನಿ, ಕೃಷಿ ವಿವಿ ಕುಲಪತಿ

* ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.