ಹುತಾತ್ಮ ಯೋಧ ರಾಹುಲ್ ಪಾರ್ಥಿವ ಶರೀರ ತವರಿಗೆ ಆಗಮನ
Team Udayavani, Nov 9, 2019, 2:53 PM IST
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ವೀರ ಯೋಧ ರಾಹುಲ್ ಸುಳಗೇಕರ ಪಾರ್ಥಿವ ಶರೀರ ತವರಿಗೆ ಬಂದಿಳಿದಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ವಿಶೇಷ ವಿಮಾನದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂದ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಮರಾಠಾ ಲಘು ಪದಾತಿ ದಳದ ಸೈನಿಕರು ಗೌರವ ವಂದನೆ ಸಲ್ಲಿಸಿದರು. ಅರ್ಧ ಗಂಟೆಗಳ ಕಾಲ ವಿಮಾನ ನಿಲ್ದಾಣ ಸಂಪೂರ್ಣ ಸ್ತಬ್ಧವಾಗಿತ್ತು.
ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಎಂಎಲ್ಐಆರ್ ಸಿ ಬ್ರಿಗೇಡಿಯರ್ ಗೋವಿಂದ ಕಾಲವಾಡ, ಪೊಲೀಸ್ ಕಮೀಷನರ್ ಲೋಕೇಶ ಕುಮಾರ್, ವಿಮಾನ ನಿಲ್ದಾಣ ಅಧಿಕಾರಿ ರಾಜೇಶ ಕುಮಾರ್ ಮೌರ್ಯ ಸೇರಿದಂತೆ ಇತರರು ವೀರ ಯೋಧನಿಗೆ ನಮನ ಸಲ್ಲಿಸಿದರು.
ಮೆರವಣಿಗೆಯೊಂದಿಗೆ ಬೆಳಗಾವಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ವಿವಿಧ ಸಂಘ- ಸಂಸ್ಥೆಗಳು, ಮಾಜಿ ಸೈನಿಕರು ಹೂ ಹಾರ ಹಾಕಿ ರಾಹುಲ್ ಸುಳಗೇಕರ ಅಮರ್ ರಹೇ ಎಂದು ಜೈ ಘೋಷ ಹಾಕಿದರು. ಸ್ವಗ್ರಾಮ ಉಚಗಾಂವದತ್ತ ಮೆರವಣಿಗೆ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು