ಅಯೋಧ್ಯೆ ಸಹಸ್ರ ಪುಣ್ಯಗಳ ಧಾಮ


Team Udayavani, Nov 10, 2019, 4:08 AM IST

ayodhya

ಅಯೋಧ್ಯೆ! ಭಾರತದ ಪ್ರಾಚೀನ ನಗರ; ಹಿಂದೂಗಳ ಶ್ರದ್ಧಾಕೇಂದ್ರ. ಈ ಶ್ರದ್ಧೆಗೆ ಕಾರಣ ಅಯೋಧ್ಯೆ ಎಂಬ ನಗರವಲ್ಲ. ಅಲ್ಲಿ ಜನಿಸಿದ ಶ್ರೀರಾಮ. ಏಕೆಂದರೆ, ಈ ರಾಮ ಕೇವಲ ಎರಡಕ್ಷರವಲ್ಲ; ಮಹಿಮೆ. ರಾಮನೆಂದರೆ, ಆದರ್ಶ. ರಾಮನೆಂದರೆ, ಶೌರ್ಯದ ಪ್ರತೀಕ. ರಾವಣನಂಥ ರಾವಣನೇ ಎತ್ತಲಾಗದ ಶಿವಧನುಸ್ಸನ್ನು ಮುರಿದು ಬಿಸುಟ ಮಹಾಶೂರ. ಶಿಷ್ಟಸಮಾಜದ ಪರಿಕಲ್ಪನೆಯನ್ನು ಕಟ್ಟಿಕೊಟ್ಟ ಮಹಾರಾಜ. ದುಷ್ಟರ ಪಾಲಿಗೆ ಯಮ. ಬೆಳಕು (ಸಜ್ಜನಿಕೆ) ಮತ್ತು ಕತ್ತಲೆ (ದುಷ್ಟಶಕ್ತಿ) ಒಂದೇ ಕಡೆ ಒಂದೇ ಕಾಲಕ್ಕೆ ಇರಲು ಸಾಧ್ಯವಿಲ್ಲ ಎಂದು ತೋರಿಸಿಕೊಟ್ಟ ಮಹಾನುಭಾವ.

ಕರೆದರೆ ಸಾವಿರ ರಾಜಕುಮಾರಿಯರು ಬರುವಂಥ ಚಕ್ರವರ್ತಿ ಪೀಠದಲ್ಲಿದ್ದರೂ ಏಕಪತ್ನಿವ್ರತಸ್ಥ. ವಿಷ್ಣುವಿನ ಏಳನೆಯ ಅವತಾರ. ರಾಮನ ಆಡಳಿತದಲ್ಲಿ ಅಯೋಧ್ಯೆಯ ಮನೆಗಳಿಗೆ ಬಾಗಿಲುಗಳೇ ಇರಲಿಲ್ಲವಂತೆ. ಇದ್ದರೂ ತೆರೆದೇ ಇರುತ್ತಿದ್ದವಂತೆ. ಏಕೆಂದರೆ, ಅವನ ರಾಜ್ಯದಲ್ಲಿ ಕಳ್ಳರಿರಲಿಲ್ಲ. ವಂಚನೆಯ ಚಿಂತೆ ಇರಲಿಲ್ಲ. ಅದು ರಾಮ ಇಟ್ಟುಹೋದ ಸುಖೀರಾಜ್ಯದ ಮಾದರಿ. ಸಜ್ಜನ ದುರ್ಜನ ಸಂಗ್ರಾಮ ರಾಮನಿಗೆ ಯಾವುದೇ ವ್ಯಕ್ತಿಯೊಡನೆ ವೈರತ್ವವಿರಲಿಲ್ಲ. ಅಧರ್ಮ, ಅತ್ಯಾಚಾರ, ಪಾಪ ಇವುಗಳ ವಿರುದ್ಧ ಅವನು ಶಸ್ತ್ರ ಎತ್ತುತ್ತಿದ್ದ. ರಾಕ್ಷಸರ ಮೇಲೆ ದಾಳಿ ಮಾಡುವಾಗಲೂ ಅವನಿಗೆ ಬೇರೆ ಉದ್ದೇಶವಿರ ಲಿಲ್ಲ.

ಗೆದ್ದ ರಾಜ್ಯಗಳನ್ನು ಅವನು ಸ್ವಾ ಧೀನಪಡಿ ಸಿಕೊಂಡವನಲ್ಲ. ತಾನು ವಾಲಿಯಿಂದ ಗೆದ್ದ ಕಿಷ್ಕಿಂಧೆಯನ್ನು ಸುಗ್ರೀವನಿಗೆ ಕೊಟ್ಟ. ಹಾಗಿದ್ದೂ ಅಂಗದನಿಗೆ ಯುವರಾಜಪಟ್ಟ ಕಟ್ಟಿ ವಾಲಿಯ ವಂಶಕ್ಕೇ ರಾಜ್ಯವನ್ನು ಉಳಿಸಿದ. ಲಂಕೆಯನ್ನು ವಿಭೀಷಣನಿಗೆ ಬಿಟ್ಟುಕೊಟ್ಟ. ಹಾಗೆ ನೋಡಿದರೆ, ರಾಮಾಯಣದಲ್ಲಿ ನಡೆದಿದ್ದೆಲ್ಲ ಸಜ್ಜನ ದುರ್ಜನ ಸಂಗ್ರಾಮಗಳೇ. ರಾಮ ಮರ್ಯಾದಾ ಪುರುಷೋತ್ತಮ. ಸಜ್ಜನ ನಾಯಕತ್ವ ಹೇಗಿರಬೇಕೆಂಬುದಕ್ಕೆ ಉದಾಹರಣೆ. ಅವನಲ್ಲಿ ಶ್ರೀಕೃಷ್ಣನ ರಾಜಕಾರಣವಿರಲಿಲ್ಲ. ಶ್ರೀಕೃಷ್ಣ ಮಹಾಭಾರತದ ಪ್ರಮುಖ ಶಕ್ತಿ ಅಷ್ಟೇ. ಯಾರೂ ಕೃಷ್ಣ ರಾಜ್ಯದ ಮಾತನಾಡುವುದಿಲ್ಲ. ಆದರೆ, ರಾಮನೊಬ್ಬನೇ ರಾಮಾಯಣ. ಅಲ್ಲಿ ರಾಮನೇ ಎಲ್ಲ. ಸೀತಾ ಪರಿತ್ಯಾಗದಂಥ ಒಂದೆರಡು ಸಂದರ್ಭ ಬಿಟ್ಟರೆ ರಾಮನ ನಿರ್ಣಯಗಳು ಎಲ್ಲೂ ಪ್ರಶ್ನಾರ್ಥಕವೆನಿಸುವುದೇ ಇಲ್ಲ. ಹೀಗಾಗಿ, ಇಡೀ ರಾಮನ ಬದುಕನ್ನು ಅವಲೋಕಿಸಿದರೆ ಅವನೇ ಒಂದು ರಾಷ್ಟ್ರವಾಗಿ ನಿಲ್ಲುತ್ತಾನೆ.

ಅವನು ಆದರ್ಶ ಪುತ್ರ, ಆದರ್ಶ ಬಂಧು, ಆದರ್ಶ ಮಿತ್ರ, ಆದರ್ಶ ಪತಿ, ಆದರ್ಶ ರಾಜ. ಇಷ್ಟೇ ಅಲ್ಲ ಆದರ್ಶ ಶತ್ರು ಕೂಡ. ಅವನ ಬದುಕೆಂದರೆ ಭಾವನೆ ಹಾಗೂ ಕರ್ತವ್ಯಗಳ ಅಪೂರ್ವ ಸಂಘರ್ಷ. ಭಾವನೆಯ ಮೇಲೆ ಕರ್ತವ್ಯದ ವಿಜಯ. ರಾಮ ರಾಜ್ಯ ಜನರ ಅಂತಃಕರಣದಿಂದ ಸ್ವಾರ್ಥ ಮತ್ತು ವ್ಯಕ್ತಿವಾದವನ್ನು ನಿರ್ಮೂಲ ಮಾಡಿತು. ಅದೇ ಕಾರಣಕ್ಕೆ ಆ ರಾಜ್ಯಸಂಸ್ಥೆ ಇಂದಿಗೂ ಆದರ್ಶವಾಗಿದೆ. ಆ ಜೀವನ ದೃಷ್ಟಿ ಉದಯಿಸಲು “ಕೃಣ್ವಂತೋ ವಿಶ್ವಮಾರ್ಯಂ’ ಎನ್ನುವ ಮನಸ್ಸುಗಳು ಬೇಕು. ಕೋದಂಡದ ಸುಧಾರಣೆ ಮತ್ತು ವಿಶ್ವ ಬಂಧುತ್ವದ ಸುಸಂಸ್ಕೃತಿ- ಇವೆರಡರ ಸಮನ್ವಯ ರಾಮ. ಇಂಥ ಮಹಾಮಹಿಮ ಹುಟ್ಟಿದ ಸ್ಥಳ ಅಯೋಧ್ಯೆ. ಸೂರ್ಯವಂಶದ ಮಹಾಪುರುಷರು ಆಳಿದ ಸಾಮ್ರಾಜ್ಯದ ರಾಜಧಾನಿ
ಅಯೋಧ್ಯೆ.

ಅಯೋಧ್ಯೆ ರಾಮಾಯಣ: ರಾಜಧಾನಿ ದಿಲ್ಲಿಯಿಂದ 555 ಕಿಲೋಮೀಟರ್‌, ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 133 ಕಿ.ಮೀ. ದೂರದಲ್ಲಿರುವ ಅಯೋಧ್ಯೆ ಹಿಂದೂಗಳ ಪವಿತ್ರ ಸ್ಥಳ. ಇದು ಕಾಶಿಯಿಂದ 200 ಕಿ.ಮೀ. ದೂರದಲ್ಲಿದೆ. ಒಂದೊಂದು ಪುರಾಣಗಳಲ್ಲಿ ಅಯೋಧ್ಯೆಯ ಕುರಿತು ವಿಭಿನ್ನ ರೀತಿಯ ವರ್ಣನೆ ಕಾಣಬಹುದಾಗಿದೆ.

ಎಲ್ಲಿದೆ? ಅಲ್ಲೇನಿದೆ?: ಅಯೋಧ್ಯೆಯು ಜಗತ್ತಿನ ಆದಿ ಕಾವ್ಯವಾದ ರಾಮಾಯಣದಲ್ಲಿ ವಾಲ್ಮೀಕಿ ಋಷಿಗಳು ವರ್ಣಿಸಿದ ಪವಿತ್ರ ನಗರ. ಈಗ ಅದು ಉತ್ತರ ಪ್ರದೇಶದ ಫೈಜಾಬಾದ್‌ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ರಾಮಾಯಣದಲ್ಲಿ ಅದು ರಾಮನ ಜನ್ಮಸ್ಥಳ ಎಂದು ಹೇಳಿರುವುದರಿಂದ ಬಹಳ ಕಾಲದಿಂದಲೂ ಅದು ಪವಿತ್ರ ಯಾತ್ರಾ ಸ್ಥಳವಾಗಿದೆ. ಕಾಲನೇ ಸ್ವತಃ ಬಂದು ಸೂಚನೆ ನೀಡಿದ ನಂತರ ರಾಮ ಈ ಭೂಮಿಯಿಂದ ನಿರ್ಗಮಿಸಿದ್ದು ಸರಯೂ ನದಿಯ ಮೂಲಕ. ನೀರಿನಲ್ಲಿ ಇಳಿಯುತ್ತ ಸರಯೂ ನದಿಯೊಂದಿಗೆ ಲೀನವಾಗಿ ರಾಮ ನಿರ್ಯಾಣ ಹೊಂದುತ್ತಾನೆ ಎಂಬ ಕಥೆಯಿದೆ. ಅದೇ ಸರಯೂ ನದಿಯ ತೀರದಲ್ಲಿದೆ ಈ ಅಯೋಧ್ಯೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.