ಸ್ತ್ರೀ ಹೊರತಾದ ಸಾಹಿತ್ಯ ಅಸಾಧ್ಯ: ಚಂದ್ರಕಲಾ
Team Udayavani, Nov 10, 2019, 1:15 PM IST
ಶೃಂಗೇರಿ: ಸಾಹಿತ್ಯದ ಯಾವುದೇ ವಿಷಯ ತೆಗೆದುಕೊಂಡರೂ ಅದರಲ್ಲಿ ಸ್ತ್ರೀ ಸಂವೇದನೆಯನ್ನು ಕಾಣಬಹುದಾಗಿದೆ ಎಂದು ಕೊಪ್ಪದ ಸಾಹಿತಿ ಚಂದ್ರಕಲಾ ಹೇಳಿದರು.
ಮೆಣಸೆಯ ರಾಜೀವ್ ಗಾಂಧಿ ಸಂಸ್ಕೃತ ಕಾಲೇಜಿನಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಎಸ್.ವಿ. ರಾಮಚಂದ್ರ ಭಟ್ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಸಾಹಿತ್ಯದಲ್ಲಿ ಮಹಿಳಾ ಚಿಂತನೆ ಮತ್ತು ಸ್ಥಾನಮಾನ’ ಕುರಿತು ಮಾತನಾಡಿದರು. ಆದಿ ಮಾನವನ ಕಾಲದಿಂದಲೂ ಭಾಷೆ ಮತ್ತು ಸಾಹಿತ್ಯ ಒಂದಲ್ಲೊಂದು ರೀತಿಯಲ್ಲಿ ಅಸ್ತಿತ್ವದಲ್ಲಿದೆ. ನಾಗರೀಕತೆ ಬೆಳೆದಂತೆ ಸಾಹಿತ್ಯ ಪ್ರಾಕಾರಗಳಲ್ಲೂ ಅನೇಕ ಬದಲಾವಣೆ ಕಾಣಬಹುದು ಎಂದರು. ಮಹಿಳೆಯನ್ನು ಹೊರತುಪಡಿಸಿದ ಸಾಹಿತ್ಯವನ್ನು ಕಾಣಲು ಸಾಧ್ಯವಿಲ್ಲ. ಕನ್ನಡ ಸಾಹಿತ್ಯದ ವಿವಿಧ ಕಾಲಘಟ್ಟಗಳಾದ ಜಾನಪದ ಸಾಹಿತ್ಯ, ಹಳೆಗನ್ನಡ, ಹೊಸಗನ್ನಡ, ನಡುಗನ್ನಡ, ವಚನ ಸಾಹಿತ್ಯ, ದಾಸ ಸಾಹಿತ್ಯ, ನವ್ಯ, ನವೋದಯ, ಬಂಡಾಯ ಸಾಹಿತ್ಯಗಳ ಕಥೆ, ಕವನ, ಕಾದಂಬರಿ, ನಾಟಕ ಹೀಗೆ ಸಾಹಿತ್ಯದ ವಿವಿಧ ಪ್ರಾಕಾರಗಳಲ್ಲಿ ಮಹಿಳಾ ಶೋಷಣೆ ಅಥವಾ ಸಮಾನತೆ ಕಾಣಬಹುದು ಎಂದರು.
ಮಹಿಳಾ ಶಿಕ್ಷಣ ವಿಚಾರಗಳ ಕುರಿತು ಸಾಹಿತಿಗಳು ಮತ್ತು ಕವಿಗಳು ಬಹಳ ಆಕರ್ಷಕವಾಗಿ ಚಿತ್ರಿಸಿದ್ದಾರೆ. ಹಿಂದೆ ಮಹಿಳೆಯರಿಗೆ ಅವಕಾಶ ಕಡಿಮೆ ಇದ್ದು, ಈಗ ಅವಕಾಶ ಹೆಚ್ಚಾಗಿದೆ. ಅದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸ್ಥಾನಮಾನ ಪಡೆದುಕೊಳ್ಳಬೇಕು. ಸತತ ಪ್ರಯತ್ನ ಹಾಗೂ ಪರಿಶ್ರಮದಿಂದ ಉತ್ತಮ ಅವಕಾಶವನ್ನು ಹಾಗೂ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಹೇಳಿದರು.
ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಚಾಲಕನಿಂದ ಹಿಡಿದು ಬಾಹ್ಯಾಕಾಶ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆ ಕುಟುಂಬ ಹಾಗೂ ಸಮಾಜದಲ್ಲಿ ಮಡದಿಯಾಗಿ, ತಾಯಿ, ಅತ್ತೆ, ಸಹೋದರಿಯಾಗಿ, ಚಿಕ್ಕಮ್ಮ, ದೊಡ್ಡಮ್ಮ ಹೀಗೆ ವಿವಿಧ ಪಾತ್ರ ನಿರ್ವಹಿಸುತ್ತಿದ್ದಾಳೆ. ಆದ್ದರಿಂದ ಸಾಹಿತ್ಯದಲ್ಲಿ ಪುರುಷನಿಗಿಂತ ಮಹಿಳಾ ವಸ್ತು ವಿಷಯಗಳು ಹೇರಳವಾಗಿ ಚಿತ್ರಿಸಲ್ಪಟ್ಟಿವೆ. ಇದನ್ನು ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತದಲ್ಲೂ ಕಾಣಬಹುದೆಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ
ಅಧ್ಯಕ್ಷ ಡಾ| ಶ್ರೀಮಂದಾರ, ಸಾಹಿತ್ಯ ಕ್ಷೇತ್ರದ ಉಳಿವಿಗೆ ಕನ್ನಡದ ನಿರಂತರ ಕಾರ್ಯಕ್ರಮ ಅಗತ್ಯವಾಗಿದೆ. ದತ್ತಿ ಉಪನ್ಯಾಸವಲ್ಲದೇ ವರ್ಷವಿಡೀ ಕನ್ನಡ ಸಾಹಿತ್ಯದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ| ಎ.ಸಚ್ಚಿದಾನಂದ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಕಸಾಪ ಸದಸ್ಯ ರಾದ ಎ.ಎಸ್.ನಯನ, ಬೇಗಾನೆ ವಿವೇಕ್, ದಿನೇಶ್ಹೆಗ್ಡೆ, ಲತಾ ಶ್ರೀನಿವಾಸ್, ಪೂರ್ಣಿಮಾ ಸಿದ್ಧಪ್ಪ, ಗಾಯತ್ರಿ ಆರ್.ಭಟ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ