ಪಾಳುಬಿದ್ದಿರುವ ಕಸಾಪ ಕಚೇರಿಗೆ ಬೇಕು ಕಾಯಕಲ್ಪ


Team Udayavani, Nov 10, 2019, 5:28 PM IST

kolar-tdy-2

ಮುಳಬಾಗಿಲು: ಕನ್ನಡ ನಾಡು ನುಡಿ, ಸಾಹಿತ್ಯವನ್ನು  ತಾಲೂಕಿನಲ್ಲಿ ಪಸರಿಸಲು ಕನ್ನಡ ಸಾಹಿತ್ಯ ಪರಿಷತ್‌ ಘಟಕವು ತನ್ನ ಕಾರ್ಯಚಟುವಟಿಕೆಗಳಿಗೆ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ ಕಚೇರಿ ಪದಾಧಿಕಾರಿಗಳ ನಿರ್ಲಕ್ಷ್ಯದಿಂದ ಪಾಳುಬಿದ್ದಿದೆ. ಸುತ್ತಲೂ ಗಿಡ ಗಂಟಿಗಳು ಬೆಳೆದು ಮಲಮೂತ್ರ ವಿಸರ್ಜನಾ ತಾಣವಾಗಿದೆ.

ಆಂಧ್ರದಂಚಿನಲ್ಲಿರುವ ತಾಲೂಕಿನ 30 ಕಿ.ಮೀ. ವ್ಯಾಪ್ತಿಯಲ್ಲಿ 350 ಹಳ್ಳಿಗಳಲ್ಲಿ 3ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದೆ. ಇಲ್ಲಿನ ಜನರ ಮಾತೃ ಭಾಷೆ ಮತ್ತು ಆಡಳಿತ ಭಾಷೆ ಕನ್ನಡವೇ ಆದರೂ, ಆಡು ಭಾಷೆ ಮಾತ್ರ ತೆಲುಗು. ಹೀಗಾಗಿ ತಾಲೂಕಿನಲ್ಲಿ ಕನ್ನಡ ಅಭಿವೃದ್ಧಿ ಪಡಿಸಲು ಸಂಘಟನೆಗಳ ಹೋರಾಟಗಾರರಲ್ಲದೆ, ಸರ್ಕಾರಿ ನೌಕರಿಯಲ್ಲಿರುವ ಉದ್ಯೋಗಿಗಳು ಮತ್ತು ಭಾಷಾ ಜ್ಞಾನವಿರುವ ಮೇಧಾವಿಗಳು ಕಸಾಪದಲ್ಲಿ ಸದಸ್ಯತ್ವ ಹೊಂದಿ, ಕನ್ನಡ ಸಾಹಿತ್ಯ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಕನ್ನಡದ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ.

ಮೇನಲ್ಲಿ ಉದ್ಘಾಟನೆ: ಇಂತಹ ಧ್ಯೇಯೋದ್ದೇಶಗಳಿಗಾಗಿ ಕಸಾಪ ಘಟಕವು ಒಂದೂವರೆ ವರ್ಷಗಳ ಹಿಂದೆ ಕನ್ನಡ ಕಾರ್ಯ ಚಟುವಟಿಕೆ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೇರಿದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೊಂದಿಕೊಂಡಿರುವ ಕಟ್ಟಡ ವನ್ನು ಪಡೆದುಕೊಂಡಿದೆ. ಅಂತೆಯೇ ತಾಲೂಕು ಕಸಾಪ ಅಧ್ಯಕ್ಷ ಜಯರಾಮ್‌ ರೆಡ್ಡಿ ಈ ಕಟ್ಟಡವನ್ನು ಮೇ ತಿಂಗಳಿನಲ್ಲಿ ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಗಂಗಿರೆಡ್ಡಿ ಅವರ ಮೂಲಕ ಉದ್ಘಾಟನೆ ಮಾಡಿಸಿದ್ದರು.

ಮಲಮೂತ್ರ ವಿಸರ್ಜನೆ ತಾಣ: ಆದರೆ, ಕಸಾಪ ಘಟಕದ ಪದಾಧಿಕಾರಿಗಳು ಯಾವ ಉದ್ದೇಶಕ್ಕಾಗಿ ಈ ಕಟ್ಟಡವನ್ನು ಶಿಕ್ಷಣ ಇಲಾಖೆಯಿಂದ ಪಡೆದುಕೊಂಡರೋ ಆ ಒಂದು ಉದ್ದೇಶವನ್ನು ಮರೆತಿದ್ದಾರೆ. ಇದಕ್ಕೆ ಕಸಾಪ ಕಚೇರಿಯಲ್ಲಿ ಹಾಕಿರುವ ಬೀಗವೇ ಸಾಕ್ಷಿ. ಕಚೇರಿ ತೆರೆದು ಅದರಲ್ಲಿ ಯಾವುದೇ ಕನ್ನಡ ಕಾರ್ಯಕ್ರಮ, ಸಭೆ ನಡೆಸದೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದೆ. ಇದ ರಿಂದ ಕಟ್ಟಡದಲ್ಲಿ ದೂಳು ತುಂಬಿದ್ದು, ಕ್ರಿಮಿಕೀಟಗಳು ಮತ್ತು ಜೇಡರ ಬಲೆ ತುಂಬಿದೆ. ಕಚೇರಿಯ ಮುಂಭಾಗ ಕಸ ತುಂಬಿಕೊಂಡು, ಗಿಡಗಂಟಿಗಳು ಬೆಳೆದು ತಿಪ್ಪೆಗುಂಡಿಯಾಗಿದ್ದು, ಮಲ ಮೂತ್ರಗಳ ವಿಸರ್ಜನಾ ತಾಣವಾಗಿ ಪರಿವರ್ತನೆಗೊಂಡಿದೆ. ಕಸಾಪ ತಾಲೂಕು ಅಧ್ಯಕ್ಷ ಜಯರಾಮರೆಡ್ಡಿ ಆಗಲಿ, ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್‌ ಅವರಾಗಲಿ, ನಗರದಲ್ಲಿರುವ ಕಸಾಪ ಕಚೇರಿ ಕಡೆ ಗಮನ ಹರಿಸದೆ ಇರುವುದು ಬೇಸರದ ಸಂಗತಿ.

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.