ಕರಾವಳಿಯ ಹಲವೆಡೆ ಧಾರಾಕಾರ ಮಳೆ
Team Udayavani, Nov 11, 2019, 5:53 AM IST
ಮಂಗಳೂರು/ ಉಡುಪಿ: ಕರಾವಳಿಯ ಅನೇಕ ಕಡೆಗಳಲ್ಲಿ ರವಿವಾರ ಉತ್ತಮ ಮಳೆಯಾಗಿದೆ.
ರವಿವಾರ ಸಂಜೆ ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಪಂಬೆತ್ತಾಡಿ, ಪಂಜ, ಕಲ್ಮಡ್ಕ, ಮರ್ಕಂಜ, ಸುಳ್ಯ, ಉರುವಾಲು, ಕಬಕ, ವಿಟ್ಲ, ವೇಣೂರು, ಬಂಟ್ವಾಳ, ಸುಬ್ರಹ್ಮಣ್ಯ, ಕಡಬ, ಪುತ್ತೂರುಗಳಲ್ಲಿ ಸಂಜೆ ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಸುಳ್ಯ ಆಸುಪಾಸಿನ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ.
ಉಡುಪಿ ಜಿಲ್ಲೆಯ ಕೆಲವಡೆ ರವಿವಾರ ಸಂಜೆ ವೇಳೆ ತುಂತುರು ಮಳೆಯಾಗಿದೆ. ಉಡುಪಿ, ಕುಂದಾಪುರ, ಬ್ರಹ್ಮಾವರ, ಕೋಟ ಪರಿಸರದಲ್ಲಿ ಬಿಸಿಲಿನ ವಾತಾವರಣ ವಿದ್ದು, ಕಾರ್ಕಳ ಪರಿಸರದಲ್ಲಿ ಗುಡುಗು ಮಳೆಯಾಗಿದೆ.
ಸೋಮವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ
ಬೆಳ್ತಂಗಡಿ ತಾಲೂಕಿನಾದ್ಯಂತ ರವಿವಾರ ಸಂಜೆ ಬಳಿಕ ಉತ್ತಮ ಮಳೆ ಯಾಗಿದ್ದು, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ, ನೆರಿಯ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ. ಗುಡುಗು ಮಿಂಚು ಸಹಿತ ಎರಡು ತಾಸಿಗೂ ಅಧಿಕ ನಿರಂತರ ಮಳೆ ಸುರಿದಿದೆ. ಸಣ್ಣ ಗಾತ್ರದ ಆಲಿಕಲ್ಲುಗಳು ಬಿದ್ದಿದ್ದು, ಗಾಳಿ ಮಳೆಗೆ ಜನ ಗಾಬರಿಗೊಂಡಿದ್ದರು. ಉಜಿರೆ, ಧರ್ಮಸ್ಥಳ, ಗುರುವಾಯನಕೆರೆ, ಕುಕ್ಕಾವು, ಮಿತ್ತಬಾಗಿಲು, ಮಡಂತ್ಯಾರು, ಗೇರುಕಟ್ಟೆ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ಮಿಲಾದ್ ರ್ಯಾಲಿಗೆ ಅಡ್ಡಿಯಾಯಿತು.
ಹೆಬ್ರಿ: ಹೆಬ್ರಿ ಸುತ್ತಮುತ್ತ ರವಿವಾರ ಸಂಜೆ ಉತ್ತಮ ಮಳೆ ಆಗಿದೆ. ಗುಡುಗು ಸಹಿತ ಸುಮಾರು ಒಂದು ತಾಸು ಮಳೆ ಸುರಿದಿದೆ. ಆಗುಂಬೆ, ಸೋಮೇಶ್ವರ, ಕುಚ್ಚಾರು ಮುದ್ರಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ