ಚಿಂದಿ ಆಯುವವರಿಗೂ ಬಂತು ಐಡಿ ಕಾರ್ಡ್‌!


Team Udayavani, Nov 11, 2019, 11:38 AM IST

huballi-tdy-2

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಚಿಂದಿ ಆಯುವವರನ್ನು ಗುರುತಿಸಿ ಗುರುತಿನ ಚೀಟಿ, ಆಯುಷ್ಮಾನ್‌ ಕಾರ್ಡ್‌, ಪಡಿತರ ಹಾಗೂ ಆಧಾರ್‌ ಕಾರ್ಡ್‌ ಸೌಲಭ್ಯ, ಆ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕ ನೆರವು ಕಾರ್ಯವನ್ನು ಸ್ವಯಂ ಸೇವಾ ಸಂಸ್ಥೆಯೊಂದು ಕೈಗೊಂಡಿದ್ದು, ಪ್ರಸ್ತುತ 1,000 ಜನ ಚಿಂದಿ ಆಯುವವರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಒಟ್ಟು ಒಂಭತ್ತು ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು, ಚಿಂದಿ ಆಯುವ ಕುಟುಂಬಗಳ ಸಂಖ್ಯೆ, ಅವರ ಸ್ಥಿತಿಗತಿ, ಸಿಕ್ಕ ಸೌಲಭ್ಯಗಳು ಇತ್ಯಾದಿ ಮಾಹಿತಿ ಸಂಗ್ರಹಿಸಲಾಗಿದೆ. ಅವರಿಗೆ ಸರ್ಕಾರದ ಹಲವು ಸೌಲಭ್ಯಗಳ ಮಾಹಿತಿ ನೀಡಲಾಗಿದ್ದು, ಆರೋಗ್ಯ ತಪಾಸಣೆ, ಚಿಂದಿ ಆಯುವ ವೇಳೆ ಆಗಬಹುದಾದ ಅಪಾಯಗಳ ಕುರಿತಾಗಿ ತಿಳಿವಳಿಕೆ ಕಾರ್ಯಾಗಾರ, ಜಾಗೃತಿ ಕಾರ್ಯವನ್ನು ಬೆಂಗಳೂರು ಮೂಲದ “ಹಸಿರು ದಳ’ ಎಂಬ ಸ್ವಯಂ ಸೇವಾ ಸಂಸ್ಥೆ ಹುಬ್ಬಳ್ಳಿ-ಧಾರವಾಡದಲ್ಲೂ ಕೈಗೊಂಡಿದೆ.

9 ಪ್ರದೇಶಗಳಲ್ಲಿ ಸಮೀಕ್ಷೆ: ಚಿಂದಿ ಆಯುವ ಕುಟುಂಬಗಳು ವಾಸಿಸುವ ಹುಬ್ಬಳ್ಳಿ-ಧಾರವಾಡದ 9 ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಮಸ್ಯೆ ಹಾಗೂ ಬೇಡಿಕೆ-ನಿರೀಕ್ಷೆಗಳ ಮಾಹಿತಿ ಸಂಗ್ರಹಿಸಲಾಗಿದೆ. ಹುಬ್ಬಳ್ಳಿಯ ಶಿವಶಂಕರ ಕಾಲೋನಿ, ದುರ್ಗಾಶಕ್ತಿ ಕಾಲೋನಿ, ವೀರಾಪುರ ಓಣಿ, ಉಣಕಲ್ಲ ಕ್ರಾಸ್‌ನ ಆಶ್ರಯ ಕಾಲೋನಿ, ಗೋಪನಕೊಪ್ಪ, ನಾಗಶೆಟ್ಟಿಕೊಪ್ಪ. ಧಾರವಾಡದ ಸರಸ್ವತಪುರ, ಲಕ್ಷ್ಮೀಸಿಂಗನಕೆರೆ, ಮೃತ್ಯುಂಜಯ ನಗರದಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ.

ಚಿಂದಿ ಆಯುವವರು ಬೆಳ್ಳಂಬೆಳಗ್ಗೆ ತಮ್ಮ ಕಾರ್ಯದಲ್ಲಿ ತೊಡಗುವುದರಿಂದ ಅವರನ್ನು ಗುರುತಿಸುವಿಕೆ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ನೀಡಲಾಗಿದೆ. ಚಿಂದಿ ಆಯುವವರನ್ನು ಅನ್ಯತಾ ಭಾವಿಸಿ ಹಲ್ಲೆಗೆ ಮುಂದಾಗುವ, ಶಂಕೆ ಆಧಾರದಲ್ಲಿ ಪೊಲೀಸ್‌ ಕ್ರಮಕ್ಕೆ ಮುಂದಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅವರಿಗೆ ಗುರುತಿನ ಚೀಟಿ ನೀಡಲಾಗಿದೆ.

ಚಿಂದಿ ಆಯುವವರಲ್ಲಿ ಅನೇಕರಿಗೆ ಇದುವರೆಗೂ ಆಧಾರ, ಪಡಿತರ ಚೀಟಿ, ಆರೋಗ್ಯ ವಿಮೆ ಕಾರ್ಡ್‌ಗಳು ಇಲ್ಲವಾಗಿದ್ದು, ಅತ್ಯಂತ ಬಡ ಕುಟುಂಬದವರಾದರೂ, ದಾಖಲಾತಿಗಳಿಲ್ಲದೆ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದರು. ಚಿಂದಿ ಆಯುವ ಕುಟುಂಬಗಳಿಗೆ ಆಧಾರ ಕಾರ್ಡ್‌, ಪಡಿತರ ಚೀಟಿ ಕಾರ್ಡ್‌ಗಳನ್ನು ದೊರಕಿಸಲಾಗುತ್ತಿದೆ. ಅದೇ ರೀತಿ ಸುಮಾರು 650 ಜನರಿಗೆ ಈಗಾಗಲೇ ಆಯುಷ್ಮಾನ್‌ ಭಾರತ ಕಾರ್ಡ್‌ಗಳನ್ನು ನೀಡಲಾಗಿದ್ದು, ಇದರಿಂದ ಚಿಂದಿ ಆಯುವ ಕುಟುಂಬಗಳವರು ಉತ್ತಮ ವೈದ್ಯಕೀಯ ಸೇವೆ ಪಡೆಯುವ ಸೌಲಭ್ಯ ಪಡೆದಂತಾಗಿದೆ. ಚಿಂದಿ ಆಯುವ ವೇಳೆ ತ್ಯಾಜ್ಯದಲ್ಲಿ ಬಳಕೆ ಮಾಡಿ ಬಿಸಾಡಿದ ಚುಚ್ಚುಮದ್ದಿನ ಸೂಜಿ, ಗಾಜು, ಕಬ್ಬಿಣ ತುಂಡುಗಳು ಇನ್ನಿತರ ಅಪಾಯಕಾರಿ ವಸ್ತುಗಳು ಕೈ-ಕಾಲಿಗೆ ತಾಗುತ್ತವೆ. ಇದರಿಂದ ಹಲವು ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ಈ ಬಗ್ಗೆ ಜಾಗೃತಿ ಮೂಡಿಸಲು ಸುರಕ್ಷತಾ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು, ಚಿಂದಿ ಆಯುವ ವೇಳೆ ಏನೆಲ್ಲಾ ಮುಂಜಾಗ್ರತೆ ವಹಿಸಬೇಕು ಎಂಬುದರ ಕುರಿತಾಗಿ ಹುಬ್ಬಳ್ಳಿ ಹಾಗೂ ಬೆಂಗಳೂರಿನಲ್ಲಿ ಮಾಹಿತಿ ಕಾರ್ಯಾಗಾರ ಕೈಗೊಳ್ಳಲಾಗುತ್ತಿದೆ.

 

 

ಅಣಬೆ ಬೇಸಾಯ ತರಬೇತಿ : ಚಿಂದಿ ಆಯುವವರು ಬೆಳ್ಳಂಬೆಳಗ್ಗೆ ಚಿಂದಿ ಸಂಗ್ರಹಿಸಿ ನಂತರದ ಸಮಯದಲ್ಲಿ ಮನೆಯಲ್ಲೇ ಇರುತ್ತಾರೆ. ಇವರು ಮನೆಯಲ್ಲೇ ಕುಳಿತುಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಹಲವು ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಹುಬ್ಬಳ್ಳಿಯ ಶಿವಶಂಕರ ಕಾಲೋನಿ, ವೀರಾಪುರ ಓಣಿ ಹಾಗೂ ಧಾರವಾಡ ಸರಸ್ವತಪುರದಲ್ಲಿ ಚಿಂದಿ ಆಯುವ ಕುಟುಂಬಗಳ ಮಹಿಳೆಯರಿಗೆ ಅಣಬೆ ಬೇಸಾಯ ತರಬೇತಿ ನೀಡಲಾಗಿದೆ. 15ಕ್ಕೂ ಹೆಚ್ಚು ಮಹಿಳೆಯರು ಅಣಬೆ ಬೇಸಾಯ ತರಬೇತಿ ಪಡೆದಿದ್ದು, ಅಣಬೆ ಬೆಳೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇವರು ಬೆಳೆಯುವ ಅಣಬೆಗೆ ಮಾರುಕಟ್ಟೆ ಒದಗಿಸುವ ಕಾರ್ಯಕ್ಕೆ ಸ್ವಯಂ ಸೇವಾ ಸಂಸ್ಥೆ ನೆರವಾಗಲಿದೆ.

ಮಕ್ಕಳಿಗೆ ಶಿಕ್ಷಣ ನೆರವು: ಚಿಂದಿ ಆಯುವ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಚಿಂದಿ ಆಯುವವರ ಮಕ್ಕಳಿಗೆ ವಾರ್ಷಿಕ 3,500 ರೂ. ನೀಡಲಾಗುತ್ತಿದೆ. ಜತೆಗೆ ದಾನಿಗಳ ನೆರವಿನೊಂದಿಗೆ ನೋಟ್‌ಬುಕ್‌ ಸೇರಿದಂತೆ ಅಗತ್ಯ ಲೇಖನಿ ಸಾಮಗ್ರಿ ಒದಗಿಸಲಾಗುತ್ತಿದೆ.

ಚಿಂದಿ ಆಯುವವರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಸರಕಾರದ ವಿವಿಧ ಸೌಲಭ್ಯ ದೊರಕಿಸಿ ಕೊಡುವುದು, ವಿಶ್ವಾಸ ತುಂಬುವುದು, ಚಿಂದಿ ಆಯುವಿಕೆಯಲ್ಲಿ ಸುರಕ್ಷತಾ ಕ್ರಮಗಳ ಜತೆಗೆ ಅಣಬೆ ಬೇಸಾಯ ಸೇರಿದಂತೆ ವಿವಿಧ ವೃತ್ತಿ ತರಬೇತಿ ನೀಡಲಾಗುವುದು. ಅವಳಿನಗರದ 9 ಪ್ರದೇಶಗಳ ಸಮೀಕ್ಷೆ ಕೈಗೊಳ್ಳಲಾಗಿದ್ದು, ಇನ್ನಷ್ಟು ಪ್ರದೇಶ ವಿಸ್ತರಿಸಲಾಗುವುದು. ಮಂಜುನಾಥ ಬಾರಕೇರ,ಯೋಜನಾ ವ್ಯವಸ್ಥಾಪಕ, ಹಸಿರು ದಳ

 

ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.