ರಸ್ತೆ ಇಕ್ಕೆಲದಲ್ಲಿ ಆಳೆತ್ತರಕ್ಕೆ ಬೆಳೆದ ಹುಲ್ಲು: ಅಪಾಯದ ಭೀತಿ

ಆತ್ರಾಡಿ-ಶಿರ್ವ-ಬಜಪೆ ರಾಜ್ಯ ಹೆದ್ದಾರಿ

Team Udayavani, Nov 12, 2019, 5:47 AM IST

0911SHIRVA4C

ಶಿರ್ವ: ಮೂಡುಬೆಳ್ಳೆಯ ನಾಲ್ಕು ಬೀದಿಯಿಂದ ಪಿಲಾರುಖಾನದವರೆಗೆ ಶಿರ್ವ ಮಂಚಕಲ್‌ ಪೇಟೆಯ ಮೂಲಕ ಹಾದು ಹೋಗುವ ಆತ್ರಾಡಿ-ಶಿರ್ವ-ಬಜಪೆ ರಾಜ್ಯ ಹೆದ್ದಾರಿ, ಶಂಕರಪುರ-ಬಂಟಕಲ್‌- ಶಿರ್ವ ರಸ್ತೆ ಮತ್ತು ಕಾಪು -ಶಿರ್ವ ರಸ್ತೆ ಬದಿಯಲ್ಲಿ ಹುಲ್ಲು, ಪೊದೆ, ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದಿದ್ದು ಅಪಾಯದ ಭೀತಿ ಎದುರಾಗಿದೆ.

ರಸ್ತೆಗಳ ಇಕ್ಕೆಲದಲ್ಲಿ ಪೈರು ಬೆಳೆದು ನಿಂತಿದ್ದು, ಕೆಲವೊಂದು ತಿರುವುಗಳಲ್ಲಿ ವಾಹನ ಸವಾರರಿಗೆ ಎದುರಿನಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಈ ಬಾರಿ ಸುರಿದ ಭಾರೀ ಮಳೆಗೆ ರಸ್ತೆ ಬದಿಯಲ್ಲಿ ಹುಲ್ಲು ಬೆಳೆದಿದ್ದು ಕೆಲವೆಡೆ ರಸ್ತೆಯನ್ನು ಕೂಡಾ ಆವರಿಸಿಕೊಂಡಿದೆ.ಇದರಿಂದ ಪಾದಚಾರಿಗಳು ನಡೆದಾಡಲು ಕೂಡಾ ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೆಲವು ಕಡೆಗಳಲ್ಲಿ ಸ್ಥಳೀಯರು ಹುಲ್ಲು ಕಟಾವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕೆಲವೆಡೆ ಅಡ್ಡರಸ್ತೆಯಿಂದ ಮುಖ್ಯರಸ್ತೆ ಪ್ರವೇಶಿಸುವಲ್ಲಿ ವಾಹನ ಸವಾರರು ಏಕಾಏಕಿ ಮುನ್ನುಗ್ಗುವುದರಿಂದ ರಸ್ತೆ ಬದಿಯ ಪೈರಿನಿಂದಾಗಿ ಮುಖ್ಯರಸ್ತೆಯಲ್ಲಿ ಹಾದುಹೊಗುವ ವಾಹನಗಳು ಕಾಣಿಸದೆ ಅಪಘಾತಕ್ಕೂ ಕಾರಣವಾಗಿದೆ. ರಸ್ತೆ ಬದಿಯಲ್ಲಿ ನಿಂತು ಬಸ್ಸು ಕಾಯುವ ಪ್ರಯಾಣಿಕರಿಗೆ ಚಲಿಸುವ ಬಸ್ಸುಗಳು ಕಾಣದೆ ತೊಂದರೆಯಾಗಿದೆ.

ವಾಹನ ದಟ್ಟಣೆ
ಶಿರ್ವ ಮಂಚಕಲ್‌ ಪೇಟೆಯ ಮಧ್ಯದಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯಲ್ಲಿ ದಿನವೊಂದಕ್ಕೆ ಸಾವಿರಾರು ವಾಹನಗಳು ಎಡೆಬಿಡದೆ ಚಲಿಸುತ್ತಿದ್ದು ವಾಹನ ದಟ್ಟಣೆಯಾಗುತ್ತಿದೆ. ಅದ ರೊಂದಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ದಿನನಿತ್ಯ ಓಡಾಡುತ್ತಿ ದ್ದಾರೆ. ಲೋಕೋಪಯೋಗಿ ಇಲಾಖೆ/ಗುತ್ತಿಗೆದಾರರ ನಿರ್ಲಕ್ಷéದಿಂದಾಗಿ ಕಾಮಗಾರಿ ಪೂರ್ತಿಯಾಗದೆ ಮಂಚಕಲ್‌ ಪೇಟೆಯ ಮಧ್ಯದಲ್ಲಿ ನಿರ್ಮಿಸಲಾಗಿರುವ ಡಿವೈಡರ್‌ನಲ್ಲಿಯೂ ಹುಲ್ಲು ಬೆಳೆದಿದೆ.

ಲೋಕೋಪಯೋಗಿ ಇಲಾಖೆ ರಸ್ತೆ ಬದಿಯಲ್ಲಿ ಆಳೆತ್ತರಕ್ಕೆ ಬೆಳೆದಿರುವ ಹುಲ್ಲು ಗಿಡಗಂಟಿಗಳನ್ನು ತೆರವುಗೊಳಿಸದೆ ಇರುವು ದರಿಂದ ಅಪಘಾತಗಳು ಹೆಚ್ಚಾಗುವ ಭೀತಿಯಿದ್ದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆ ತುರ್ತು ಕ್ರಮ ಕೈಗೊಂಡು ಇವುಗಳನ್ನು ಕಟಾವು ಮಾಡುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕಿದೆ.

ಅಪಾಯದ ಭೀತಿ ಎಲ್ಲೆಲ್ಲಿ
ಶಿರ್ವ ಅಟ್ಟಿಂಜೆ ರಸ್ತೆ,ಕಾಪು ಶಿರ್ವ ರಸ್ತೆ,ಕೋಡು ಪಂಜಿಮಾರು ಕ್ರಾಸ್‌ ಬಳಿ,ಶಿರ್ವನ್ಯಾರ್ಮ-ಮಸೀದಿ ಬಳಿ, ಪೊಲೀಸ್‌ ಸ್ಟೇಶನ್‌ ಕ್ರಾಸ್‌, ಶಿರ್ವ ಪೆಟ್ರೋಲ್‌ ಪಂಪ್‌ ಬಳಿಯಿಂದ ಸಂಗೀತಾ ಕಾಂಪ್ಲೆಕ್ಸ್‌ವರೆಗೆ, ತುಂಡು ಬಲ್ಲೆಯಿಂದ ಪ್ರಿನ್ಸ್‌
ಪಾಯಿಂಟ್‌ಗಾಗಿ ಪಿಲಾರು ಖಾನದವರೆಗೆ ರಸ್ತೆ ಬದಿ ಬೆಳೆದ ಪೈರಿನಿಂದಾಗಿ ವಾಹನ ಸವಾರರಿಗೆ ಎದುರಿನಿಂದ ಬರುವ ವಾಹನಗಳು ಗೋಚರಿಸದೆ ಅಪಘಾತ ಸಂಭವಿಸುವ ಭೀತಿ ಎದುರಾಗಿದೆ.

ತುರ್ತು ಕ್ರಮ ಅಗತ್ಯ
ರಸ್ತೆ ಬದಿ ಹುಲ್ಲು ಬೆಳೆದಿರುವುದರಿಂದ ಸಾರ್ವಜನಿಕರಿಗೆ,ವಾಹನಸವಾರರಿಗೆ ತೊಂದರೆಯಾಗುತ್ತಿದೆ.ಈ ಬಗ್ಗೆ ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.ಇಲಾಖೆ ಕೂಡಲೇ ಸ್ಪಂದಿಸಿ ತುರ್ತು ಕ್ರಮ ಕೈಗೊಳ್ಳಬೇಕಿದೆ.
-ಮೆಲ್ವಿನ್‌ ಡಿ’ಸೋಜಾ,
ನ್ಯಾಯವಾದಿ, ಗ್ರಾ.ಪಂ.
ಸದಸ್ಯರು ಶಿರ್ವ

ಗಮನಕ್ಕೆ ಬಂದಿದೆ
ರಸ್ತೆ ಬದಿ ಹುಲ್ಲು ಬೆಳೆದಿರುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿದೆ. ಮಣಿಪುರ ಪ್ರದೇಶದಲ್ಲಿ ಹುಲ್ಲು ಕಟಾವು ಕಾರ್ಯ ನಡೆಯುತ್ತಿದ್ದು, ಅಲ್ಲಿ ಮುಗಿದ ಕೂಡಲೇ ವಾರದೊಳಗೆ ಹುಲ್ಲು ಕತ್ತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಗುವುದು.
-ಜಗದೀಶ ಭಟ್‌, ಸಹಾಯಕ
ಕಾರ್ಯಕಾರಿಅಭಿಯಂತರು,ಲೋ
ಕೋಪಯೋಗಿ ಇಲಾಖೆ,ಉಡುಪಿ.

-ಸತೀಶ್ಚಂದ್ರ ಶೆಟ್ಟಿ, ಶಿರ್ವ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.