111 ಅಡಿ ಎತ್ತರದ ಶಿವಲಿಂಗ; “ಏಶ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌’ನಲ್ಲಿ ದಾಖಲೆ


Team Udayavani, Nov 12, 2019, 5:28 AM IST

11KSDE8A

ಕಾಸರಗೋಡು: ಕೇರಳದ ರಾಜಧಾನಿ ತಿರುವನಂತಪುರ ದನೆಯ್ಯ ಟಿಂಗರ ಚೆಂಗಲ್‌ ಮಹೇಶ್ವರ ಶಿವಪಾರ್ವತಿ ದೇವಸ್ಥಾನದಲ್ಲಿ ನಿರ್ಮಾಣವಾದ 111.2 ಅಡಿ ಎತ್ತರದ ಶಿವಲಿಂಗ ರವಿವಾರ ಲೋಕಾರ್ಪಣೆ ಗೊಂಡಿತು.

ದೇವಸ್ಥಾನದ ಮಠಾಧಿಪತಿ ಸ್ವಾಮಿ ಮಹೇಶ್ವರಾನಂದ ಸರಸ್ವತಿ ಅವರು ಬೃಹತ್‌ ಶಿವಲಿಂಗವನ್ನು ಲೋಕಾರ್ಪಣೆಗೈದರು. ಎತ್ತರ ಹಾಗೂ ವಿಸ್ತಾರದಲ್ಲಿ ಏಶ್ಯಾದಲ್ಲೇ ಅತ್ಯಂತ ಎತ್ತರದ “ಶಿವಲಿಂಗ” ಪ್ರತಿಷ್ಠೆ ಯಾಗಿದೆ ಎಂದು ಏಶ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ಗಿನ್ನೆಸ್‌ ಬುಕ್‌ನಲ್ಲೂ ಈ ಶಿವಲಿಂಗ ಸ್ಥಾನ ಪಡೆದು ಕೊಳ್ಳಲಿದೆ. ಕರ್ನಾಟಕದ ಕೋಲಾರ ಕೋಟಿ ಲಿಂಗ ದೇವಸ್ಥಾನದಲ್ಲಿರುವ 108 ಅಡಿ ಎತ್ತರದ ಕೋಟಿ ಲಿಂಗ ಈ ವರೆಗೆ ಅತ್ಯಂತ ಎತ್ತರದ ಶಿವಲಿಂಗ ಎಂದು ಹೆಸರು ಪಡೆದಿತ್ತು. ಇದನ್ನು ಮೀರಿ 111.2 ಅಡಿ ಎತ್ತರದ ಈ ಶಿವಲಿಂಗವನ್ನು ನಿರ್ಮಿಸಲಾಗಿದೆ. ಆ ದಾಖಲೆಯನ್ನು ನೆಯ್ಯಟಿಂಗರ ಶಿವಲಿಂಗ ಅಳಿಸಿ ಹಾಕಿದೆ. ಶಿವಲಿಂಗದೊಳಗೆ ರಚನೆಗೊಂಡ ಶಿಲ್ಪಗಳು ಭಕ್ತರನ್ನು ಆಕರ್ಷಿಸುತ್ತಿವೆ.

ಈ ಕ್ಷೇತ್ರದ ನವಗ್ರಹ ಮಂಟಪದಲ್ಲಿ ನವ ಗ್ರಹಗಳ ಪ್ರತಿಷ್ಠೆಯನ್ನೂ ನೆರವೇರಿಸಲಾಗಿದೆ. ಈ ನವಗ್ರಹಗಳನ್ನು ಮಹಾಬಲಿಪುರಂನಲ್ಲಿ ತಯಾರಿಸಲಾಗಿದ್ದು, ಅಲ್ಲಿಂದ ತರಲಾಗಿದೆ. ಈ ಕ್ಷೇತ್ರದಲ್ಲಿ 108 ಶಿವಲಿಂಗ ಪ್ರತಿಷ್ಠೆಯೂ ಇದೆ. ಸುಮಾರು 10 ಅಂತಸ್ತಿನ ಕಟ್ಟಡದಷ್ಟು ಎತ್ತರದಲ್ಲಿರುವ ಈ ಶಿವಲಿಂಗ ಶೀಘ್ರದಲ್ಲೇ ಗಿನ್ನೆಸ್‌ ಬುಕ್‌ನಲ್ಲೂ ಸ್ಥಾನ ಪಡೆಯುವ ಸಾಧ್ಯತೆಯಿದೆ. 30 ಮಂದಿ ಶಿಲ್ಪಿಗಳು ಶಿವಲಿಂಗದೊಳಗೆ ವಿಸ್ಮಯಕಾರಿ ಹಾಗೂ ಮನೋಹರವಾದ ಶಿಲ್ಪಗಳನ್ನು ರಚಿಸಿದ್ದಾರೆ. ಸಂತರ ಹಾಗೂ ಧಾರ್ಮಿಕ ಸಾಧಕರ ಕೆತ್ತನೆಗಳು ಅದರೊಳಗಿವೆ. ಭಕ್ತರು ನೀಡಿದ ನೆರವಿನಿಂದ ಈ ಶಿವಲಿಂಗವನ್ನು ನಿರ್ಮಿಸಲಾಗಿದೆ.

ಶಿವಲಿಂಗದೊಳಗಿನ ಸುರಂಗ ಮಾರ್ಗದ ಮೂಲಕ ಸಾಗುವಾಗ ಹಿಮಾಲಯದಲ್ಲಿ ನಡೆದಾಡಿದ ಅನುಭವವಾಗುತ್ತದೆ ಎಂದಬುದಾಗಿ ಭಕ್ತರು ಹೇಳುತ್ತಿದ್ದಾರೆ. ದೇವಸ್ಥಾನದ ಮಠಾಧಿಪತಿ ಸ್ವಾಮಿ ಮಹೇಶ್ವರಾನಂದ ಸರಸ್ವತಿ ಅವರ ಕಲ್ಪನೆ ಹಾಗೂ ಆಶಯದದಂತೆ ಬೃಹತ್‌ ಶಿವಲಿಂಗ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.