ಮಂದಿರಕ್ಕೆ ರಾಮನವಮಿಯಂದು ಚಾಲನೆ?


Team Udayavani, Nov 12, 2019, 5:30 AM IST

RAM-MANDIR

ಲಕ್ನೋ/ಹೊಸದಿಲ್ಲಿ: ಎಲ್ಲವೂ ಅಂದು ಕೊಂಡಂತೆ ನಡೆದರೆ ಬರುವ ರಾಮನವಮಿಯಂದೇ ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯ ಆರಂಭವಾಗುವ ಸಾಧ್ಯತೆ ಇದೆ. 2020ರ ಎ.2ರಂದು ರಾಮನವಮಿ; ಅಂದು ನಿರ್ಮಾಣ ಮೊದಲ್ಗೊಂಡು 2022ಕ್ಕೆ ಮುಗಿಸುವ ಗುರಿ ಹೊಂದಲಾಗಿದೆ.

ಆದರೆ ರಾಮಮಂದಿರಕ್ಕೆ ಮತ್ತೆ ಶಿಲಾನ್ಯಾಸ ನಡೆಯುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಈ ಹಿಂದೆ 1989ರಲ್ಲಿ ಆಗಿನ ಪ್ರಧಾನಿ ರಾಜೀವ್‌ ಗಾಂಧಿ ಶಿಲಾನ್ಯಾಸ ನೆರವೇರಿಸಿದ್ದರು.
ಮಂದಿರ ನಿರ್ಮಾಣಕ್ಕಾಗಿ ಸೋಮನಾಥ ಮಂದಿರದ ಮಾದರಿಯಲ್ಲೇ ಟ್ರಸ್ಟ್‌ ನಿರ್ಮಾಣ ವಾಗಲಿದೆ. ಜತೆಗೆ ಅಮರನಾಥ ದೇಗುಲ ಅಥವಾ ವೈಷ್ಣೋದೇವಿ ದೇಗುಲ ಮಾದರಿಯಲ್ಲಿ ಆಡಳಿತ ಮಂಡಳಿ ಟ್ರಸ್ಟ್‌ ನಿರ್ಮಿಸಲು ಯೋಜನೆ ರೂಪಿಸಲಾಗುತ್ತದೆ ಎನ್ನಲಾಗಿದೆ.

ಸಿದ್ಧಗೊಂಡಿವೆ ಶಿಲೆಗಳು
ದೇಗುಲಕ್ಕಾಗಿ ಕೇಂದ್ರ ಸರಕಾರ 62.23 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ 43 ಎಕರೆಗಳನ್ನು ರಾಮಜನ್ಮಭೂಮಿ ನ್ಯಾಸ, 20 ಎಕರೆಗಳನ್ನು ಮಾನಸ ಭವನ, ಸಂಕಟ ಮೋಚನ ಮಂದಿರ, ಕಥಾ ಮಂಟಪ ಮತ್ತು ಜಾನಕಿ ಮಹಲ್‌ಗ‌ಳಿಂದ ಪಡೆಯಲಾಗಿದೆ. ಜತೆಗೆ ರಾಮ ಜನ್ಮಭೂಮಿ ನ್ಯಾಸ್‌ 1.80 ಲಕ್ಷ ಶಿಲೆಗಳನ್ನು ಸಿದ್ಧ ಪಡಿಸಿಕೊಂಡಿದೆ. ಇವನ್ನು ಶೀಘ್ರದಲ್ಲಿಯೇ ರಚನೆ ಯಾಗುವ ಟ್ರಸ್ಟ್‌ಗೆ ಹಸ್ತಾಂತರಿಸಲಾಗುತ್ತದೆ. ಇದೇ ವೇಳೆ ದೇಗುಲಕ್ಕಾಗಿ ಕೇಂದ್ರ ಸರಕಾರ ರಚನೆ ಮಾಡಲಿರುವ ಟ್ರಸ್ಟ್‌ನಲ್ಲಿ ರಾಮ ಜನ್ಮಭೂಮಿ ನ್ಯಾಸ್‌ ಸ್ಥಾನ ಪಡೆದುಕೊಳ್ಳಲಿದೆ ಎಂದು ಹೇಳ ಲಾಗುತ್ತಿದೆ. ಈ ಎಲ್ಲ ಪ್ರಕ್ರಿಯೆಗಳಿಂದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ದೂರ ಉಳಿದು, ಸಚಿವರೋರ್ವರನ್ನು ನೇಮಿಸುವ ಸಾಧ್ಯತೆ ಇದೆ.

ಮಂದಿರ ಹೇಗಿರಲಿದೆ?
ರಾಮಮಂದಿರದ ವಿನ್ಯಾಸ ಸಿದ್ಧವಾಗಿದೆ. ದೇಗುಲದಲ್ಲಿ ಒಟ್ಟಾರೆ 212 ಸ್ತಂಭಗಳು ಇರಲಿದ್ದು, ಆ ಪೈಕಿ ಅರ್ಧದಷ್ಟರ ನಿರ್ಮಾಣ ಮುಗಿದಿದೆ.

ಮುಖ್ಯಾಂಶಗಳು
ತಳಪಾಯ ನಿರ್ಮಾಣಕ್ಕೆ ಉಕ್ಕಿನ ಬಳಕೆ ಇಲ್ಲ
ಪ್ರಾರ್ಥನೆ ಹಾಲ್‌, ಶಿಕ್ಷಣಕ್ಕಾಗಿ ಪ್ರತ್ಯೇಕ ಕೊಠಡಿ
ಉಪನ್ಯಾಸಕ್ಕಾಗಿ ರಾಮಕಥಾ ಕುಂಜ್‌
ಸಂತರ ವಾಸ್ತವ್ಯಕ್ಕೆ ನಿವಾಸ
ಪ್ರವಾಸಿಗರಿಗೆ ಯಾತ್ರಿ ನಿವಾಸ
ಡಿಜಿಟಲ್‌ ಮ್ಯೂಸಿಯಂ, ಉಪಾಹಾರ ಗೃಹ
ಪವಿತ್ರ ಗ್ರಂಥಗಳಿಗೆ ಸಂಬಂಧಿಸಿದ ಚಿತ್ರಣ
ವಿಶಾಲ ವಾಹನ ನಿಲುಗಡೆಯ ಸ್ಥಳ

ಟಾಪ್ ನ್ಯೂಸ್

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.