ಸ್ವಂತ ಸೂರಿಲ್ಲದೇ ಸೊರಗಿದ ಗ್ರಂಥಾಲಯ


Team Udayavani, Nov 12, 2019, 10:47 AM IST

gb-tdy-1

ಆಳಂದ: ಕೆಲ ದಶಕದಿಂದ ಸ್ವಂತ ಕಟ್ಟಡವಿಲ್ಲ. ದಿನ ಕಳೆದಂತೆ ಕ್ಷೀಣಿಸುತ್ತಿರುವ ಓದುಗರ ಸಂಖ್ಯೆ. ಕಟ್ಟಡದೊಳಗೆ ಶುದ್ಧಗಾಳಿಯ ಕೊರತೆ. ಗೋಡೆ ಮತ್ತು ಮೇಲ್ಛಾವಣಿ ಯಾವಾಗ ಕುಸಿಯುತ್ತವೆಂಬ ಆತಂಕ. ಮೂಲ ಸೌಲಭ್ಯಗಳ ಕೊರತೆ.

ಪುಸ್ತಕದ ರಾಶಿಯೇ ಇದ್ದರೂ ಗೋದಾಮಿನಂತೆ ಕಾಣಿಸುವ ಕಟ್ಟಡ. ಇದು 140 ಹಳ್ಳಿಗಳ ಕೇಂದ್ರಬಿಂದು ಆದ ಗಡಿನಾಡಿನ ತಾಲೂಕು ಕೇಂದ್ರ ಆಳಂದ ಪಟ್ಟಣದಲ್ಲಿನ ಗ್ರಂಥಾಲಯದ ಸದ್ಯದ ಸ್ಥಿತಿ-ಗತಿ. ಆರಂಭದಲ್ಲಿ ಈ ಗ್ರಂಥಾಲಯ ವ್ಯಾಪ್ತಿ ಗ್ರಾಮೀಣ ಭಾಗದಲ್ಲಿನ 43 ಗ್ರಂಥಾಲಯಗಳಿದ್ದವು. ಆದರೀಗ ಅವು ಗ್ರಾಪಂ ಆಡಳಿತಕ್ಕೆ ಒಳಪಟ್ಟ ನಂತರ ದೊಡ್ಡ ಗ್ರಂಥಾಲಯ ಎಂಬ ಹೆಗ್ಗಳಿಕೆಯ ನಡುವೆ ಈ ಗ್ರಂಥಾಲಯವು ಹೊಸ ಓದುಗರನ್ನು ಸೆಳೆಯುವ ಬದಲು ಅಲ್ಪ-ಸ್ವಲ್ಪ ಬರುವ ಜನರನ್ನು ಕಳೆದುಕೊಳ್ಳುತ್ತಿದೆ.

ಸ್ವಂತ ಕಟ್ಟಡವಿಲ್ಲ: ಪಟ್ಟಣದ ಪುರಸಭೆ ಕಚೇರಿ ಆವರಣದ ಮಳಿಗೆಯಲ್ಲಿ ನಾಲ್ಕು ದಶಕಗಳ ಹಿಂದೆ ಆರಂಭಗೊಂಡ ಸಾರ್ವಜನಿಕ ಗ್ರಂಥಾಲಯವೂ ಹಲವು ಏಳು ಬೀಳುಗಳ ನಡುವೆ ತನ್ನ ಸ್ವಂತ ನಿವೇಶನ ಹಾಗೂ ಕಟ್ಟಡದಂತಹ ಮೂಲ ಸೌಲಭ್ಯಗಳ ಅಸ್ತಿತ್ವದ ಹುಡುಕಾಟ ದಲ್ಲಿಯೇ ದಿನದೊಡುತ್ತಿದೆ.

ಕಲಬುರಗಿ ಸಾರ್ವಜನಿಕ ಗ್ರಂಥಾಲಯ ವ್ಯಾಪ್ತಿಗೆ ಬರುವ ಪಟ್ಟಣದ ಈ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಧಿ ಕಾರಿಗಳು ಅನೇಕ ಬಾರಿ ಸ್ಥಳೀಯ ಪುರಸಭೆಗೆ ನಿವೇಶನದ ಕೋರಿಕೆಯನಿಟ್ಟಿದ್ದಾರೆ. ಆದರೆ ನಿವೇಶನ ನೀಡಲು ಮುಂದಾದ ಪುರಸಭೆ ಪಟ್ಟಣದಲ್ಲಿ ಸೂಕ್ತಸ್ಥಳದ ಬದಲು ದೂರದ ಜಾಗವನ್ನು ತೋರಿದ ಹಿನ್ನೆಲೆಯಲ್ಲಿ ಗ್ರಂಥಾಲಯ ಅಧಿಕಾರಿಗಳು ಹಿಂದೇಟು ಹಾಕಿದರು. ಜತೆಗೆ ಇದ್ದ ಸ್ಥಳದಲ್ಲೇ ಅನಿವಾರ್ಯವಾಗಿ ಗ್ರಂಥಾಲಯ ತೆರೆಯಲಾಗುತ್ತಿದೆ ಎನ್ನಲಾಗಿದೆ.

15 ಸಾವಿರ ಪುಸ್ತಕ: ಶಿಥಿಲಾವ್ಯವಸ್ಥೆಗೆ ತಲುಪಿದ ಕಟ್ಟಡದಲ್ಲೇ ಗ್ರಂಥಾಲಯವನ್ನು ನಡೆಸುತ್ತಿರುವುದರಿಂದ ಪುಸ್ತಕ ಪ್ರೇಮಿಗಳು ಮತ್ತು ಓದುಗರಿಗೆ ಉತ್ತಮ ವಾತಾವರಣ ಇಲ್ಲವಾಗಿದೆ. ಗ್ರಂಥಾಲಯದಲ್ಲಿ ಸುಮಾರು 15 ಸಾವಿರ ಪುಸ್ತಕಗಳಿವೆ. 2,153 ಜನ ಸದಸ್ಯರನ್ನು ಹೊಂದಿದೆ. ಮೂರು ಜನ ಕಚೇರಿ ಸಿಬ್ಬಂದಿಗಳಲ್ಲಿ ಓರ್ವ ಕಾರ್ಯ ನಿರ್ವಹಿಸಿದರೆ, ಇನ್ನೊಬ್ಬರು ನಿಯೋಜನೆ ಮೇಲೆ ತೆರಳಿದ್ದಾರೆ. ಮತ್ತೂಬ್ಬರು ತಾತ್ಕಾಲಿಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿತ್ಯ 40-50 ಜನ ಓದುಗರು ಗ್ರಂಥಾಲಯಕ್ಕೆ ಬರುತ್ತಾರೆ. 6 ಕನ್ನಡ ದಿನಪತ್ರಿಕೆಗಳು, ಆಂಗ್ಲ, ಉರ್ದು, ಮರಾಠಿ, ಹಿಂದಿ ತಲಾ ಒಂದು ಪತ್ರಿಕೆ, ಐದು ಮಾಸಿಕ ಪತ್ರಿಗಳು ಬರುತ್ತವೆ. ಸುಸರ್ಜಿತ ಗ್ರಂಥಾಲಯ ಕಟ್ಟಡ, ಎಲ್ಲ ರೀತಿಯ ಪುಸ್ತಕ, ಪತ್ರಿಕೆ ಮತ್ತು ಕುಡಿಯುವ ನೀರು, ಉತ್ತಮ ಆಸನ, ಗಾಳು ಬೆಳಕಿನ ಕೊರತೆಯಿದೆ.

ಸ್ವತಂತ್ರವಾಗಿ ಇಲಾಖೆಯಿಂದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಒದಗಿಸುವಂತೆ ಪುರಸಭೆಗೆ ಕೇಳಲಾಗಿತ್ತು. ಸ್ಥಳೀಯವಾಗಿ ಸೂಕ್ತ ಸ್ಥಳ ಲಭ್ಯವಿಲ್ಲದ ಕಾರಣ ಪಟ್ಟಣದ ಹೊರವಲಯದಲ್ಲಿ ಜಾಗೆ ತೋರಿಸುತ್ತಿದ್ದರಿಂದ ಇದ್ದ ಸ್ಥಳದಲ್ಲೇ ಮುಂದುವರಿಸುವುದು ಸೂಕ್ತವೆಂದು ದಿನದೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿ ಮಿನಿ ವಿಧಾನಸೌಧಕ್ಕೆ ಸ್ಥಳಾಂತಗೊಂಡ ನಂತರ ಅಲ್ಲಿ ಗ್ರಂಥಾಲಯಕ್ಕಾಗಿ ಸ್ಥಳ ಪಡೆಯುವ ಉದ್ದೇಶವೂ ಇದೆ. -ಮಹಿಬೂಬ ಖಜೂರಿ, ಗ್ರಂಥಾಲಯ ಸಿಬ್ಬಂದಿ, ಆಳಂದ

 

-ಮಹಾದೇವ ವಡಗಾಂವ

ಟಾಪ್ ನ್ಯೂಸ್

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.