ಸುಸಜ್ಜಿತ ಮನೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Nov 12, 2019, 12:17 PM IST
ಬೆಳಗಾವಿ: ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣವಾಗಿರುವ ಮನೆಗಳು ಕಳಪೆ ಗುಣಮಟ್ಟದ್ದಾಗಿದ್ದು, ಅವುಗಳನ್ನು ನೆಲಸಮಗೊಳಿಸಿ ಮೂರು ಬಿಎಚ್ಕೆ ಸುಸಜ್ಜಿತ ಮನೆಗಳನ್ನು ನಿರ್ಮಿಸಬೇಕೆಂದು ಎಸ್ಸಿ, ಎಸ್ಟಿ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
2005ರಿಂದ 2007ರ ಅವಧಿಯಲ್ಲಿ ಕೃಷ್ಣಾ ನದಿ ಪ್ರವಾಹದಿಂದಾಗಿ ಕಾಗವಾಡ ತಾಲೂಕಿನ ಉಗಾರ ಬಿ.ಕೆ., ಉಗಾರ ಖುರ್ದ ಹಾಗೂ ಕೃಷ್ಣಾ ಕಿತ್ತೂರ ಗ್ರಾಮಗಳು ಮುಳುಗಡೆ ಆಗಿದ್ದವು. ಅನೇಕ ಕುಟುಂಬಗಳು ನಿರಾಶ್ರಿತರಾಗಿ ಬೀದಿಗೆ ಬಿದ್ದಿದ್ದವು. ಈಗಲೂ ಇತ್ತೀಚೆಗೆ ನಡೆದ ಪ್ರವಾಹದಿಂದಲೂ ದಲಿತರು ವಾಸಿಸುವ ಪ್ರದೇಶ ಜಲಾವೃತಗೊಂಡು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ ಎಂದು ದೂರಿದರು.
2009ರಲ್ಲಿ ಭೂಸೇನಾ ನಿಗಮದಿಂದ ಉಗಾರ ಬಿ.ಕೆ. ಗ್ರಾಮದಲ್ಲಿ 184, ಉಗಾರ ಖುರ್ದದಲ್ಲಿ 87 ಹಾಗೂ ಕೃಷ್ಣಾ ಕಿತ್ತೂರದಲ್ಲಿ 101 ಆಸರೆ ಮನೆಗಳನ್ನು ನಿರ್ಮಿಸಲಾಗಿದೆ. ಕಳಪೆ ಕಾಮಗಾರಿಯಿಂದ ಮೇಲ್ಛಾವಣಿ ಹಾಗೂ ಗೋಡೆಗಳು ಶಿಥಿಲಾವಸ್ಥೆಯಲ್ಲಿವೆ. ಕುಸಿದು ಬೀಳುವ ಹಂತದಲ್ಲಿವೆ ಎಂದು ಆರೋಪಿಸಿದರು.
ನೆರೆಯಿಂದಾಗಿ ಮನೆಗಳು ನೆಲಸಮವಾಗಿವೆ. ಹೀಗಾಗಿ ಸರ್ಕಾರ ಎ ಪಟ್ಟಿಯಲ್ಲಿ ಹೆಸರನ್ನು ಸೇರಿಸಿ ಪರಿಹಾರ ನೀಡಬೇಕು. ಆಶ್ರಯ ಮನೆಗಳನ್ನು ನೆಲಸಮಗೊಳಿಸಿ 3 ಬಿಎಚ್ಕೆ ಮನೆಗಳನ್ನು ನಿರ್ಮಿಸಿಕೊಡಬೇಕು. ಶೌಚಾಲಯ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರವಣ ಕಾಂಬಳೆ, ಜಿಲ್ಲಾಧ್ಯಕ್ಷ ದುಗೇಶ ಮೇತ್ರಿ, ಶ್ರೀಕಾಂತ ಮುಚ್ಚಂಡಿ, ರಾವಸಾಬ ಕಾಂಬಳೆ, ಶಿವಾನಂದ ರಾಮಣ್ಣನವರ, ಉದಯ ಮೇತ್ರಿ, ತುಕಾರಾಮ ಕಾಂಬಳೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ