ಕಾಯಕಲ್ಪಕ್ಕೆ ಕಾದಿದೆ ಪುಲಿಗೆರೆ ಗ್ರಂಥಾಲಯ
Team Udayavani, Nov 12, 2019, 12:52 PM IST
ಲಕ್ಷ್ಮೇಶ್ವರ: ಕನ್ನಡ ಸಾರಸ್ವತ ಲೋಕಕ್ಕೆ ತಿರುಳ್ಗನ್ನಡ ಭಾಷೆ ನೀಡಿದ ಆದಿಕವಿ ಪಂಪನ ಸಾಹಿತ್ಯ ಕ್ಷೇತ್ರವಾದ ಪುಲಿಗೆರೆ(ಲಕ್ಷೇಶ್ವರ)ಯಲ್ಲಿ ಆದಿಕವಿ ಪಂಪನ ಹೆಸರಿನಲ್ಲಿ ಸ್ಥಾಪಿಸಿದ ಗ್ರಂಥಾಲಯ ಅವ್ಯವಸ್ಥೆಯ ತಾಣವಾಗಿದ್ದು, ಕಾಯಕಲ್ಪಕ್ಕೆ ಕಾದಿದೆ.
ಸುಮಾರು 40 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣದ ಕೇಂದ್ರ ಭಾಗದಲ್ಲಿರುವ ಈ ವಾಚನಾಲಯಕ್ಕೆ ಪಟ್ಟಣ ಮತ್ತು ಗ್ರಾಮೀಣ ಭಾಗದ 500ಕ್ಕೂ ಹೆಚ್ಚು ಓದುಗರು ಬರುತ್ತಾರೆ. 1350 ಜನರು ಸದಸ್ಯತ್ವ ಹೊಂದಿದ್ದಾರೆ. ಇಲ್ಲಿ ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಮಾಹಿತಿ, ಸಾಹಿತ್ಯ, ಕಾವ್ಯ, ಕಾದಂಬರಿ, ಗ್ರಂಥಗಳು ಸೇರಿ ಸುಮಾರು 25 ಸಾವಿರ ಪುಸ್ತಕಗಳು ಇದ್ದವು. ಆದರೆ ಇವುಗಳನ್ನು ಸಂರಕ್ಷಿಸಿಡಲು ಸೂಕ್ತ ವ್ಯವಸ್ಥೆ ಮತ್ತು ಕಟ್ಟಡದ ಭಾಗ ಸೋರುತ್ತಿರುವುದರಿಂದ ಬಹಳಷ್ಟು ಹಾಳಾಗಿವೆ.
ಈಗ ಕೇವಲ 13,500 ಪುಸ್ತಕಗಳು ಮಾತ್ರ ಇಲ್ಲಿವೆ. ಮಳೆಗಾಲದಲ್ಲಿ ನೀರು ಜಿನುಗುತ್ತದೆ. ಸುತ್ತಲಿನ ಕಾಂಪೌಂಡ್ ಕುಸಿದಿದೆಯಲ್ಲದೇ ಇಲ್ಲಿ ಗಿಡಗಂಟೆಗಳು ಬೆಳೆದಿದ್ದರಿಂದ ಹಂದಿ ನಾಯಿಗಳ ತಾಣವಾಗಿದೆ. ಸಾರ್ವಜನಿಕರು ಶೌಚ, ಮೂತ್ರ ಮಾಡುತ್ತಿರುವುದರಿಂದ ದುರ್ನಾತ ಬೀರುತ್ತಿದೆ. ಕಟ್ಟಡದಮುಖ್ಯದ್ವಾರಕ್ಕೆ ಗೇಟ್ ಇಲ್ಲದೇ ಇರುವುದರಿಂದ ರಾತ್ರಿ ವೇಳೆ ಮತ್ತು ರಜಾ ದಿನಗಳಲ್ಲಿ ಮುಂಬಾಗಿಲಿನಲ್ಲಿ ಕುಳಿತುಕೊಳ್ಳುವವರು ಎಲೆ ಅಡಿಕೆ, ಗುಟಕಾ ತಿಂದು ಅಲ್ಲಿಯೇ ಉಗುಳಿ ಗಲೀಜು ಮಾಡುತ್ತಾರೆ ಇದು ಓದುಗರಿಗೆ ಇರುಸು ಮುರುಸಾಗಿದೆ. ಇದಕ್ಕೆ ಬಣ್ಣ ಹಚ್ಚಿ ಅನೇಕ ವರ್ಷಗಳು ಗತಿಸಿದ್ದು ಮತ್ತೇ ಸುಣ್ಣ ಬಣ್ಣ ಕಂಡಿಲ್ಲ ಒಟ್ಟಿನಲ್ಲಿ ಈ ವಾಚನಾಲಯ ಕಾಯಲಕ³ಕ್ಕೆ ಕಾದಿದೆ.
ಆದಿಕವಿ ಪಂಪ ಸ್ಮಾರಕದ ಮೂಲ ಕಟ್ಟಡ ಉತ್ತಮ ಸ್ಥಿತಿಯಲ್ಲಿದ್ದರೂ ಓದುಗರ ಸಂಖ್ಯೆಗೆ ಅನುಗುಣವಾಗಿ ಚಿಕ್ಕದಾಗಿದೆ. ಅಲ್ಲದೇ ಹಿಂಭಾಗದ ಕಟ್ಟಡ ಶಿಥಿಲಗೊಂಡಿದ್ದು ಇದ್ದೂ ಇಲ್ಲದಂತಾಗಿದೆ. ಮೂಲ ಕಟ್ಟಡ ಪಂಪನ ಸ್ಮಾರಕವಾಗಿದ್ದು ಇದಕ್ಕೆ ಧಕ್ಕೆಯಾಗದಂತೆ ಮರು ವಿನ್ಯಾಸಗೊಳಿಸಿ ಕಟ್ಟಡಕ್ಕೆ ಕಾಯಕಲ್ಪ ನೀಡಬೇಕಿದೆ.
ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬರುತ್ತಾರೆ. ಗ್ರಂಥಾಲಯದ ಸುತ್ತಲಿನ ಪ್ರದೇಶವನ್ನು ಸ್ವತ್ಛಗೊಳಿಸುವಂತೆ ಪುರಸಭೆಗೆ ಮನವಿ ಮಾಡಲಾಗಿದೆ. ಗ್ರಂಥಾಲಯದ ಅಭಿವೃದ್ಧಿಗಾಗಿ ಗ್ರಂಥಾಲಯ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿದೆ. – ಎಂ.ಎನ್.ಸುಟಮನಿ, ಗ್ರಂಥಪಾಲಕ
-ಮುಕ್ತಾ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು