ಹತ್ತಿ ಬಿಡಿಸಲು ರೈತರು ಹೈರಾಣ


Team Udayavani, Nov 12, 2019, 3:22 PM IST

yg-tdy-2

ಸೈದಾಪುರ: ಯಾದಗಿರಿ ತಾಲೂಕಿನ ಬಹುತೇಕ ಒಣ ಭೂಮಿ ಬೇಸಾಯದ ಜತೆ ನೀರಾವರಿ ಭೂಮಿಯಲ್ಲಿ ಹತ್ತಿ ಬೆಳೆದಿದ್ದು, ಉತ್ತಮ ಇಳುವರಿ ಬಂದಿರುವ ಕಾರಣ ಹತ್ತಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಾಗಿದೆ.

ಕೃಷಿ ಇಲಾಖೆ ಮಾಹಿತಿಯಂತೆ ತಾಲೂಕಿನ ಸುಮಾರು 32,990 ಹೆಕ್ಟೇರ್‌ ಭೂಮಿಯಲ್ಲಿ ರೈತರು ಹತ್ತಿ ಬಿತ್ತನೆ ಮಾಡಿದ್ದಾರೆ. ಈ ಬಾರಿ ಉತ್ತಮ ಇಳುವರಿ ಬಂದಿದೆ. ಒಂದು ಕ್ವಿಂಟಲ್‌ಗೆ 4,800ರಿಂದ 5,500 ರೂ. ಗೆ ಮಾರಾಟವಾಗುತ್ತಿದ್ದು, ರೈತರು ಅಷ್ಟೋ ಇಷ್ಟೋ ಸಂತೋಷಪಡುವಂತಾಗಿದೆ. ಆದರೆ ಹತ್ತಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕರ ಕೊರತೆ ಎದುರಾಗಿದೆ. ವಿವಿಧ ಗ್ರಾಮಗಳಲ್ಲಿ ಸುತ್ತಾಡಿ ಕೇಳಿ, ಬೇಡಿ ಮತ್ತು ಬರುವ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಮಾಡಿ ಕರೆತರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರವಲ್ಲದೇ ಪ್ರತಿ ಕಾರ್ಮಿಕರಿಗೆ ಒಂದು ದಿನಕ್ಕೆ 180ರಿಂದ 200 ರೂ. ವರೆಗೆ ಕೂಲಿ ಹಣ ನೀಡಲಾಗುತ್ತಿದೆ. ತಮ್ಮ ಗ್ರಾಮಗಳಿಂದ ಬಂದು ಹೋಗುವುದಕ್ಕೆ ಆಟೋ ವ್ಯವಸ್ಥೆ ಮಾಡಿದರೂ ಸಕಾಲದಲ್ಲಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ಹೀಗಾಗಿ ಹತ್ತಿ ಬೆಳೆ ಬೆಳೆದ ರೈತರು ಕೂಲಿ ಕಾರ್ಮಿಕರು ಬರುವ ಸಮಯ ಕಾಯ್ದು ಕುಳಿತುಕೊಳ್ಳುವುದು ಅನಿವಾರ್ಯವಾಗಿದೆ.

ಶಾಲೆ ಮಕ್ಕಳ ದುಡಿಮೆ: ಕೃಷಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಾಗಿದ್ದರಿಂದ ಬಹುತೇಕ ಗ್ರಾಮೀಣ ಭಾಗದ ಪಾಲಕರು ತಮ್ಮ ಮಕ್ಕಳನ್ನು ಹತ್ತಿ ಬಿಡಿಸಲು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಕೆಲವರು ತಮ್ಮ ಮಕ್ಕಳನ್ನು ತಮ್ಮ ಹೊಲಕ್ಕೆ ಕರೆದುಕೊಂಡು ಹೋದರೆ, ಇನ್ನೂ ಕೆಲ ಬಡ ಕೃಷಿ ಕಾರ್ಮಿಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಕೂಲಿಗಾಗಿ ತಮ್ಮ ಜತೆ ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದಾಗಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಅರ್ಧ ವಾರ್ಷಿಕ ರಜೆ ಬಳಿಕ ಅ. 21ರಿಂದಶಾಲೆಗಳು ಪ್ರಾರಂಭವಾಗಿವೆ. ಆದರೆ ಇಂದಿನವರೆಗೂ ಬಹುತೇಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶೇ. 30ರಷ್ಟು ಮಕ್ಕಳು ಗೈರು ಹಾಜರಾಗುತ್ತಿದ್ದಾರೆ. ಗೈರಾದ ಮಕ್ಕಳಿಗೆ ಪಾಠ ಹೇಗೆ ಹೇಳಿಕೊಡಬೇಕು ಎಂಬ ಚಿಂತೆ ಶಿಕ್ಷಕರನ್ನು ಕಾಡುತ್ತಿದ್ದರೆ, ಆನೆಕಾಲು ರೋಗ ನಿರೋಧಕ ಮಾತ್ರೆ ನುಂಗಿಸಲು ಆರೋಗ್ಯ ಇಲಾಖೆ ಸಿಬ್ದಂದಿಗು ಕೂಡ ತೆಲೆ ನೋವಾಗಿ ಪರಿಣಮಿಸಿದೆ.

ವಲಸೆ ಹೋದವರಿಗೆ ಬುಲಾವ್‌: ತಮ್ಮ ಕೃಷಿ ಭೂಮಿ ಬೇರೊಬ್ಬರಿಗೆ ಬಿಟ್ಟು ಉದ್ಯೋಗ ಅರಸಿ ಬೆಂಗಳೂರು ಮತ್ತು  ಮುಂಬೈಯತಂಹ ಮಹಾನಗರಗಳಿಗೆ ವಲಸೆ ಹೋಗಿದ್ದ ಜನರನ್ನು ಮರಳಿ ಕರೆಸಿಕೊಳ್ಳಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರು ಸಕಾಲಕ್ಕೆ ಸಿಗದೇ ಇರುವ ಕಾರಣಕ್ಕೆ ವಲಸೆ ಹೋದವರಿಗೂ ಈಗ ಬುಲಾವ್‌ ನೀಡಲಾಗುತ್ತಿದೆ.

ವಾಹನ ಮೇಲೆ ಸಂಚಾರ: ಸೈದಾಪುರ ಸುತ್ತಮುತ್ತಲಿನ ಸುಮಾರು 25 ಗ್ರಾಮಗಳಿಗೆ ಗುರುಮಠಕಲ್‌ ಭಾಗದ ನಂದೇಪಲ್ಲಿ, ಮಾಧ್ವಾರ, ವಂಕಸಂಬ್ರ, ಕೊಂಕಲ್‌, ಜೇಗ್ರಾಂ, ಅನಪುರ ಸೇರಿದಂತೆ ತೆಲಂಗಾಣದ ಕೆಲ ಗ್ರಾಮಗಳ ಕೃಷಿ ಕಾರ್ಮಿಕರನ್ನು ಆಟೋ ಮತ್ತು ಜೀಪ್‌ನಲ್ಲಿ ಕರೆದುಕೊಂಡು ಬರಲಾಗುತ್ತಿದೆ. ಒಂದು ವೇಳೆ ಕಾರ್ಮಿಕರು ಹೆಚ್ಚಾದರೆ ವಾಹನದ ಮೇಲೆ ಕುಳಿತುಕೊಂಡು ಅಸುರಕ್ಷಿತವಾಗಿ ಪ್ರಯಾಣಿಸುತ್ತಿದ್ದಾರೆ.ಇದು ರೈತರು ಮತ್ತು ವಾಹನ ಚಾಲಕರಿಗೆ ಅನಿವಾರ್ಯವಾಗಿದೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೆ ಬಿದ್ದು ದಂಡ ಹಾಕಿದ ಉದಾಹರಣೆ ಸಹ ಇದೆ.

 

-ಭೀಮಣ್ಣ ಬಿ. ವಡವಟ್‌

 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.