ರಸ್ತೆ ಅಗಲೀಕರಣಕ್ಕೆ ಮತ್ತೆ ಟೆಂಡರ್‌


Team Udayavani, Nov 12, 2019, 4:02 PM IST

cd-tdy-1

ಚಿತ್ರದುರ್ಗ: ನಗರದ ಪ್ರವಾಸಿಮಂದಿರದಿಂದ ಗಾಂಧಿ ವೃತ್ತದ ಮೂಲಕ ಕನಕ ವೃತ್ತದವರೆಗಿನ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ಮತ್ತೂಮ್ಮೆ ಟೆಂಡರ್‌ ಕರೆಯಲು ರ್ನಿರಿಸಲಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಅಂತಿಮವಾಗಬಹುದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರಸಭೆ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರವಾಸಿಮಂದಿರದಿಂದ ಗಾಂಧಿ ವೃತ್ತ, ಅಲ್ಲಿಂದ ಕನಕ ವೃತ್ತ ಅಥವಾ ಮಾಳಪ್ಪನಹಟ್ಟಿವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ಮೂರು ಸಲ ಟೆಂಡರ್‌ ಕರೆದರೂ ಗುತ್ತಿಗೆದಾರರು ಆಸಕ್ತಿ ತೋರಿಸುತ್ತಿಲ್ಲ ಎಂದರು.

ಈಗ ನಾಲ್ಕನೇ ಬಾರಿ ಟೆಂಡರ್‌ ಕರೆಯುತ್ತಿದ್ದು, ಗುತ್ತಿಗೆದಾರರಿಗೆ ನಾವೇ ಮನವೊಲಿಸಿ ಟೆಂಡರ್‌ ಹಾಕಿಸುತ್ತಿದ್ದೇವೆ. ಈ ಕಾಮಗಾರಿ ಕೈಗೆತ್ತಿಕೊಳ್ಳುವವರು 3 ಕೋಟಿ ರೂ. ಠೇವಣಿ ಇಡಬೇಕು ಎಂಬ ನಿಯಮವಿದೆ. ಜತೆಗೆ ಇಲ್ಲಿ ಬಳಸುವ ಕಾಂಕ್ರೀಟ್‌ ಪ್ರಮಾಣಕ್ಕೆ ಕಡಿಮೆ ಮೊತ್ತ ನಿಗದಿ ಮಾಡಲಾಗಿದೆ ಎಂಬ ಆಕ್ಷೇಪವಿದೆ. ಇದೆಲ್ಲದರ ಜತೆಗೆ ನಗರದ ಮಧ್ಯ ಭಾಗದಲ್ಲಿ ರಸ್ತೆ ಮಾಡುವುದರಿಂದ ಸಾರ್ವಜನಿಕರು ತಕರಾರು ಮಾಡಬಹುದು, ಕೋರ್ಟ್‌ ಮೆಟ್ಟಿಲೇರಬಹುದು ಎಂಬ ಆತಂಕ ಗುತ್ತಿಗೆದಾರರಲ್ಲಿದೆ. ಈ ಕಾರಣಕ್ಕೆ ಬಹುತೇಕರು ಹಿಂದೇಟು ಹಾಕುತ್ತಿದ್ದಾರೆ ಎಂದರು.

ಈ ಕಾಮಗಾರಿಗಾಗಿ 18 ಕೋಟಿ ರೂ. ಅನುದಾನಮಂಜೂರಾಗಿ ಬಹಳ ದಿನಗಳಾಗಿವೆ. ಈ   ಹಿನ್ನೆಲೆಯಲ್ಲಿ ನಾಲ್ಕನೇ ಸಲ ಟೆಂಡರ್‌ ಕರೆದು ಡಿಸೆಂಬರ್‌ 15 ರಿಂದ 20 ರೊಳಗಾಗಿ ಅಂತಿಮಗೊಳಿಸಿ ಕಾಮಗಾರಿ ಆರಂಭಿಸುತ್ತೇವೆ ಎಂದು ತಿಳಿಸಿದರು.

16 ಕೋಟಿ ರೂ. ಹೆಚ್ಚುವರಿ ಹಣ ಬೇಕು: ಈಗಾಗಲೇ ಕಾಮಗಾರಿ ಆರಂಭಿಸಿರುವ ಜೆಎಂಐಟಿ ವೃತ್ತದಿಂದ ಗಾಂಧಿ ವೃತ್ತದವರೆಗಿನ ರಸ್ತೆ ವಿಶಾಲವಾಗುವುದರಿಂದ ದಾವಣಗೆರೆ ರಸ್ತೆಗಳ ಮಾದರಿಯಲ್ಲೇ ಅಭಿವೃದ್ಧಪಡಿಸಲಾಗುತ್ತಿದೆ. ಹಾಗಾಗಿ ಈ ರಸ್ತೆಗೆ ನಿಗದಿಯಾಗಿರುವ 19 ಕೋಟಿ ಜತೆಗೆ ಇನ್ನೂ 9 ಕೋಟಿ ರೂ. ಹೆಚ್ಚುವರಿ ಹಣ ಬೇಕಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ಶಾಸಕರ ಗಮನಕ್ಕೆ ತಂದರು.

ಈ ವೇಳೆ ಶಾಸಕರು 14ನೇ ಹಣಕಾಸು ಸೇರಿದಂತೆ ಬೇರೆ ಬೇರೆ ಅನುದಾನಗಳನ್ನು ಹೊಂದಿಸಿಕೊಡುತ್ತೇನೆ. ಜತೆಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಹೆಚ್ಚುವರಿ ಅನುದಾನ ತಂದು ಕೊಡುತ್ತೇನೆ. ಕೆಲಸ ಪ್ರಾರಂಭಿಸಿ ಎಂದು ಸೂಚಿಸಿದರು.

ಚಳ್ಳಕೆರೆ ಗೇಟ್‌ನಿಂದ ಪ್ರವಾಸಿಮಂದಿರವರೆಗಿನ ರಸ್ತೆಯನ್ನೂ ಉತ್ತಮವಾಗಿ ಅಭಿವೃದ್ಧಿಪಡಿಸಬೇಕಿದೆ. ಈ ರಸ್ತೆಗೆ ಈಗಾಗಲೇ 19 ಕೋಟಿ ರೂ. ಹಣ ಮಂಜೂರಾಗಿದೆ.ಜತೆಗೆ ಇನ್ನೂ 7 ಕೋಟಿ ರೂ. ಹೆಚ್ಚುವರಿ ಹಣ ಬೇಕಾಗುತ್ತದೆ. ರಸ್ತೆ ಮಧ್ಯೆ ಡಿವೈಡರ್‌, ವಿದ್ಯುತ್‌ ದೀಪ, ಪುಟ್‌ಪಾತ್‌, ಡ್ರೈನೇಜ್‌ ಹಾಗೂ ಎರಡು ಕಡೆ ಸೇತುವೆ ಕಾಮಗಾರಿಗಳಿವೆ ಎಂದು ಅಧಿಕಾರಿಗಳು ತಿಳಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಹಿಂದಿನ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ 3 ಕೋಟಿ ರೂ. ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಶಾಸಕರಿಗೆ ನೀಡಿರುವ 25 ಕೋಟಿ ರೂ. ವಿಶೇಷ ಅನುದಾನದಲ್ಲಿ ಅನುದಾನ ಒದಗಿಸಿಕೊಡುತ್ತೇನೆ. ತ್ವರಿತವಾಗಿ ಕೆಲಸ ಆರಂಭಿಸಿ ಮುಂದಿನ ಜೂನ್‌ ವೇಳೆಗೆ ಕಾಮಗಾರಿ ಮುಗಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾಸ್ಪತ್ರೆಯಿಂದ ಆರ್‌ಟಿಒ ಕಚೇರಿವರೆಗೆಕಾಂಕ್ರೀಟ್‌ ರಸ್ತೆ ನಿರ್ಮಿಸಲು 5 ಕೋಟಿ ರೂ. ಟೆಂಡರ್‌ ಆಗಿದೆ. ಆರ್‌ಟಿಒ ಕಚೇರಿಯಿಂದ ಮುಸ್ಟೂರುವರೆಗೆ ರಸ್ತೆ ಅಭಿವೃದ್ಧಿಗಾಗಿ ಎಸ್‌ಎಚ್‌ ಡಿಪಿ ಅಡಿಯಲ್ಲಿ 32 ಕೋಟಿ ರೂ. ಮಂಜೂರಾಗಿದೆ.ಚಳ್ಳಕೆರೆ ಗೇಟ್‌ನಿಂದ ಹಳೇ ಹೆದ್ದಾರಿ ಅಭಿವೃದ್ಧಿಗೆ 8 ಕೋಟಿ ರೂ., ಮುರುಘಾ ಮಠದ ವತಿಯಿಂದ ನಿರ್ಮಿಸುತ್ತಿರುವ ಬಸವ ಪುತ್ಥಳಿ ಇರುವ ಜಾಗಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ರಸ್ತೆಗೆ 3 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ಲೋಕೋಪಯೋಗಿ ಇಲಾಖೆ ಇಇ ಸತೀಶ್‌, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ರಾಜಶೇಖರ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.