ಅನೌಪಚಾರಿಕ ಶಿಕ್ಷಣ ವಿದ್ಯಾಭ್ಯಾಸಕ್ಕೆ ಪೂರಕವಾಗಿರಲಿ


Team Udayavani, Nov 13, 2019, 5:19 AM IST

qq-20

ಶಿಕ್ಷಣ ಇಂದು ಮೂಲ ಸೌಕರ್ಯಗಳಲ್ಲಿ ಒಂದಾಗಿದೆ. ಜಗತ್ತಿನಲ್ಲಿ ಜನಿಸುವ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಲಭಿಸಬೇಕೆಂಬುದನ್ನು ಲಿಖೀತ ನಿಯಮವನ್ನು ಕೂಡ ರೂಪಿಸಲಾಗಿದೆ. ಆ ಕಾರಣಕ್ಕಾಗಿಯೇ ಉಚಿತ ಶಿಕ್ಷಣ ನೀಡಲಾಗಿದೆ. ಔಪಚಾರಿಕ ಶಿಕ್ಷಣಗಳು ಇಂದು ಮೌಲ್ಯಗಳನ್ನು ಕಳೆದುಕೊಳ್ಳುತ್ತಿವೆ ಎಂಬ ಮಾತೊಂದು ಇದೆ. ಔಪಚಾರಿಕ ಶಿಕ್ಷಣದ ಜತೆಗೆ ಅನೌಪಚಾರಿಕ ಶಿಕ್ಷಣಗಳು ಜತೆಗೂಡಿದರೆ ಶಿಕ್ಷಣದ ಮೌಲ್ಯಗಳೂ ಹೆಚ್ಚಾಗುತ್ತವೆ. ಮಕ್ಕಳಿಗೆ ಸಂಸ್ಕಾರದ ಜತೆಗೆ ಶಿಕ್ಷಣ ಲಭಿಸಿದರೆ ಅವರು ಮುಂದೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ.

ಗುರುಕುಲಗಳು ಮಾದರಿಯಾಗಲಿ
ಈ ಹಿಂದೆ ಅನೌಪಚಾರಿಕ ಶಿಕ್ಷಣ ಮಾದರಿಯಾಗಿ ಗುರುಕುಲದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿತ್ತು. ಹೆತ್ತವರು ತಮ್ಮ ಮಕ್ಕಳನ್ನು ಯಾವುದಾದರೂ ಗುರುವಿನ ಆಶ್ರಮದ ಬಳಿ ಬಿಟ್ಟರೆ ಒಂದು ಹಂತದ ಶಿಕ್ಷಣ ಮುಗಿಯುವವರೆಗೆ ಅಲ್ಲೇ ನಿಂತು ಶಿಕ್ಷಣ ಪೂರೈಸುತ್ತಿದ್ದರು. ಅಲ್ಲಿ ಕೇವಲ ಅಕ್ಷರಾಭ್ಯಾಸ ಮಾತ್ರವಲ್ಲದೆ ಬದುಕಿನ ಪಾಠಗಳನ್ನು ಕಲಿಸುತ್ತಿದ್ದರು. ಜೀವನವನ್ನು ರೂಪಿಸುತ್ತಿದ್ದರು. ಬದುಕಿನ ಮೌಲ್ಯಗಳನ್ನು ಹೇಳಿಕೊಡಲಾಗುತ್ತಿತ್ತು. ಹಿರಿಯರಿಗೆ ಗೌರವ ನೀಡುವುದು ಹೇಗೆ, ಕೆಲಸವನ್ನು ಅಚ್ಚುಕಟ್ಟಾಗಿ ಕೆಲಸವನ್ನು ಮಾಡುವುದು ಹೇಗೆ ಮೊದಲಾದ ವಿಷಯಗಳನ್ನು ಅಲ್ಲಿ ಕಲಿಸುತ್ತಿದ್ದರು. ಎಲ್ಲ ಕೆಲಸಗಳನ್ನು ಕಲಿಸುವ ಈ ಆಶ್ರಮಗಳು ಇಂದಿನ ಶಿಕ್ಷಣ ವ್ಯವಸ್ಥೆಗೆ ಮಾದರಿಯಾಗಿವೆ. ಮಕ್ಕಳಿಗೆ ಇಂದು ಅಕ್ಷರಾಭ್ಯಾಸಕ್ಕಿಂತ ಹೆಚ್ಚು ಜಗತ್ತಿನ ಆಗುಹೋಗುಗಳ ಹಾಗೂ ಸಾಮಾನ್ಯ ಜ್ಞಾನದ ಪರಿಚಯವಿರಬೇಕಾಗುತ್ತದೆ. ಅದಕ್ಕೆ ಮನೆಯಲ್ಲಿ ಅಥವಾ ಶಾಲೆಯಲ್ಲಿ ಇತರ ವಿಷಯಗಳನ್ನು ಬೋಧಿಸಬೇಕಾಗುತ್ತದೆ.

ಹಿರಿಯರೊಂದಿಗೆ ಸಂವಹನ ಅತ್ಯಗತ್ಯ
ಇಂದಿನ ಯುಗದಲ್ಲಿ ಪರಸ್ಪರ ಮಾತುಕತೆಗಳು ಕಡಿಮೆಯಾಗುತ್ತಿವೆ ಎಂಬ ಕೊರಗಿನ ಮಾತುಗಳು ಆಗಾಗ ಕೇಳಿಬರುತ್ತಿರುತ್ತದೆ. ನಾವು ಯಾರೊಂದಿಗೂ ಮಾತನಾಡದಿದ್ದರೆ ಇದರಿಂದ ಒಂಟಿತನವನ್ನು ಹೆಚ್ಚು ಮಾಡುತ್ತದೆ. ಇದು ಹೆಚ್ಚಾಗುತ್ತಾ ಹೋದಂತೆ ಜ್ಞಾನದ ಪರಿಧಿ ಸಂಕುಚಿತಗೊಳ್ಳುತ್ತಾ ಹೋಗುತ್ತದೆ. ಇದನ್ನು ಕಡಿಮೆ ಮಾಡಲು ಹಿರಿಯರೊಂದಿಗೆ ಮಾತಕತೆಗಳು ನಿರಂತವಾಗಿರಬೇಕು. ಇದು ನಮ್ಮ ಜ್ಞಾನವನ್ನು ವಿಸ್ತರಿಸುತ್ತಾ ಹೋಗುತ್ತದೆ. ಅನೌಪಚಾರಿಕ ಶಿಕ್ಷಣಗಳು ಯಾವತ್ತೂ ಒಂದು ರಚನೆಯ ಒಳಗೆ ರೂಪುಗೊಳ್ಳುವುದಿಲ್ಲ. ಯಾವಾಗಲೂ ಏನಿದ್ದರೂ ರಚನೆಯನ್ನು ಬೇಧಿಸುವಂತವುಗಳಾಗಿರುತ್ತವೆ. ಒಟ್ಟಿಗೆ ಕುಳಿತು, ಆಟ, ಊಟ, ಶಿಕ್ಷಣಗಳನ್ನು ಮನನ ಮಾಡುವುದರಿಂದ ಒಬ್ಬ ವಿದ್ಯಾರ್ಥಿ ಕೇವಲ ಬುದ್ದಿವಂತನಾಗುವುದು ಮಾತ್ರವಲ್ಲ ಅವನಲ್ಲಿ ಸಮಾಜದಲ್ಲಿ ಬದುಕಲು ಬೇಕಾದ ಮೌಲ್ಯಗಳು ರೂಪುಗೊಳ್ಳುತ್ತವೆ. ಒಬ್ಬ ಉತ್ತಮ ವಿದ್ಯಾರ್ಥಿಯನ್ನು ರೂಪಿಸುವಲ್ಲಿ ಅನೌಪಚಾರಿಕ ಶಿಕ್ಷಣದ ಪಾತ್ರ ಮಹತ್ತರವಾಗಿದೆ.

 ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.