ರಾಷ್ಟ್ರಪತಿ ಆಡಳಿತ ಹೇರಿಕೆಯ ಬಳಿಕವೂ ಶಿವಸೇನೆಗೆ ಸರಕಾರ ರಚನೆ ಆಸೆ ಜೀವಂತ
Team Udayavani, Nov 12, 2019, 10:35 PM IST
ಮುಂಬೈ: ಮಹಾರಾಷ್ಟ್ರದಲ್ಲಿ ರಾಜ್ಯಪಾಲರು ನಿಗದಿಪಡಿಸಿದ ಕಾಲಾವಧಿಯಲ್ಲಿ ಸರಕಾರ ರಚನೆಗೆ ಹಕ್ಕುಮಂಡಿಸಲು ಶಿವಸೇನೆ ಮತ್ತು ಎನ್.ಸಿ.ಪಿ. ವಿಫಲವಾದ ಬೆನ್ನಲ್ಲೇ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಂಡಿದೆ.
ರಾಜ್ಯಪಾಲರ ಈ ಕ್ರಮಕ್ಕೆ ಶಿವಸೇನೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ನಿರ್ಣಯದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹೇಳಿದೆ. ಈ ನಡುವೆ ಶಿವಸೇನೆಗೆ ಸರಕಾರ ರಚಿಸಲು ಬೆಂಬಲ ನೀಡುವ ಕುರಿತಾಗಿ ಕಾಂಗ್ರೆಸ್ ಮತ್ತು ಎನ್.ಸಿ.ಪಿ. ಮತ್ತೆ ಆಸಕ್ತಿ ತೋರಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಈ ಮೈತ್ರಿ ಪಕ್ಷಗಳು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಶಿವಸೇನೆಗೆ ಬೆಂಬಲ ನೀಡುವ ಕುರಿತಾಗಿ ನಮ್ಮ ಮಾತುಕತೆ ಸಾಗಿದೆ ಎಂದು ತಿಳಿಸಿದೆ.
ಇತ್ತ ಶಿವಸೇನೆಯ ಮುಖ್ಯಸ್ಥ ಉದ್ಭವ್ ಠಾಕ್ರೆ ಅವರೂ ಸಹ ಮಾಧ್ಯಗಳೊಂದಿಗೆ ಮಾತನಾಡಿ, ‘ಎನ್.ಸಿ.ಪಿ. – ಕಾಂಗ್ರೆಸ್ ಮತ್ತು ನಮ್ಮ ಸಿದ್ಧಾಂತಗಳ ನಡುವೆ ವೈರುಧ್ಯಗಳಿದ್ದರೂ ಮಹಾರಾಷ್ಟ್ರದಲ್ಲಿ ಸುಭದ್ರ ಸರಕಾರ ನೀಡುವ ನಿಟ್ಟಿನಲ್ಲಿ ನಮ್ಮ ನಡುವೆ ಪ್ರಯತ್ನಗಳು ಸಾಗಿವೆ’ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಸರಕಾರ ರಚನೆಯ ಪ್ರಕ್ರಿಯೆ ಜೀವಂತವಾಗಿದೆ ಎಂಬ ಸೂಚನೆಯನ್ನು ಉದ್ಭವ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ