ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರಕ್ಕೆ ಹೆಚ್ಚಿದ ಬೇಡಿಕೆ

ಕರಾವಳಿಯಲ್ಲಿ ಭತ್ತ ಕಟಾವು ಚುರುಕು

Team Udayavani, Nov 13, 2019, 5:09 AM IST

qq-43

ಭತ್ತದ ಕಟಾವು ಕಾರ್ಯ ಪ್ರಗತಿಯಲ್ಲಿದೆ.

ಕೋಟ: ಕರಾವಳಿಯಲ್ಲಿ ಮಳೆ ಹಿಂದೆ ಸರಿದು ಭತ್ತದ ಕಟಾವು ಚುರುಕುಗೊಂಡಿದೆ. ಸರಕಾರ ಈ ಬಾರಿ ಸಾಮಾನ್ಯ ವರ್ಗದ ಭತ್ತ ಕ್ವಿಂಟಾಲ್‌ಗೆ 1,815 ರೂ. ಮತ್ತು ಎ ಗ್ರೇಡ್‌ಗೆ 1,835 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ ಖಾಸಗಿ ಮಿಲ್‌ಗ‌ಳು 1,600 ರೂ.ನಂತೆ ಖರೀದಿಸುತ್ತಿರುವ ಕಾರಣ ರೈತರಿಗೆ ನಷ್ಟವಾಗುತ್ತಿದೆ. ಹೀಗಾಗಿ ಸರಕಾರದಿಂದಲೇ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಶೀಘ್ರ ಸ್ಥಾಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ದ.ಕ.ದಲ್ಲಿ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ಬೇಡಿಕೆ ಇಲ್ಲ. ಆದರೆ ಉಡುಪಿಯಲ್ಲಿ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಕೃಷಿ ಮಾರುಕಟ್ಟೆ, ಜಿಲ್ಲಾ ಆಹಾರ ನಿಗಮದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದು ಅನುಮತಿ ನಿರೀಕ್ಷಿ ಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಉಡುಪಿ ಜಿಲ್ಲೆಯಲ್ಲಿ 34,730 ಹೆಕ್ಟೇರ್‌ ಮತ್ತು ದ.ಕ. ಜಿಲ್ಲೆಯಲ್ಲಿ 10,600 ಹೆಕ್ಟೇರ್‌ಗಳಲ್ಲಿ ಭತ್ತದ ನಾಟಿಯಾ ಗಿದ್ದು, ಕಟಾವಿಗೆ ಸಿದ್ಧವಾಗಿದೆ. ಜಿಲ್ಲೆಗೆ ಒಂದೆರಡು ಕೇಂದ್ರಗಳನ್ನು ಮಾತ್ರ ಸ್ಥಾಪಿಸಿದಲ್ಲಿ ಸಾಗಾಟ ಸಮಸ್ಯೆ, ಕಾಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಪ್ರತಿ ತಾಲೂಕಿನಲ್ಲೂ ದಾಸ್ತಾನು ವ್ಯವಸ್ಥೆ ಮಾಡಿ ಖರೀದಿ ಕೇಂದ್ರ ತೆರೆಯಬೇಕು ಎನ್ನುವುದು ರೈತರ ಬೇಡಿಕೆ.

ಗ್ರೇಡಿಂಗ್‌ ತಲೆನೋವು
ಈ ಹಿಂದೆ ಖರೀದಿ ಕೇಂದ್ರಗಳಲ್ಲಿ ಗ್ರೇಡಿಂಗ್‌ ರೈತರಿಗೆ ಸಮಸ್ಯೆ ಉಂಟು ಮಾಡಿತ್ತು. ಕಠಿನ ನಿಯಮಗಳನ್ನು ಹೇರಿ ತೇವಾಂಶ, ಜಳ್ಳು ಮುಂತಾದ ಕಾರಣಗಳಿಗಾಗಿ ಖರೀದಿ ನಿರಾಕರಿಸಲಾಗಿತ್ತು. ಆದ್ದರಿಂದ ಗ್ರೇಡಿಂಗ್‌ ವಿಧಾನವನ್ನು ಸರಳಗೊಳಿಸಬೇಕು ಎನ್ನುವುದು ರೈತರ ಬೇಡಿಕೆ.

ದರ ಕಡಿತಕ್ಕೆ ಸಮರ್ಥನೆ
ಕಟಾವಾದ ತತ್‌ಕ್ಷಣ ಮಾರುಕಟ್ಟೆ ಪ್ರವೇಶಿಸುವ ಭತ್ತದಲ್ಲಿ ತೇವಾಂಶವಿರುತ್ತದೆ ಮತ್ತು ಗುಣಮಟ್ಟ ವಿರುವುದಿಲ್ಲ. ಒಣಹಾಕಿದಾಗ ಶೇ. 10ರ ವರೆಗೆ ತೂಕ ಕಡಿಮೆಯಾಗುತ್ತದೆ. ಇದರ ಜತೆ ಹೊರ ಜಿಲ್ಲೆಯವರು ಪೈಪೋಟಿಯಲ್ಲಿ ಅತೀ ಕಡಿಮೆ ದರಕ್ಕೆ ನಮ್ಮಲ್ಲಿ ಭತ್ತ, ಅಕ್ಕಿ ಮಾರಾಟ ಮಾಡುತ್ತಾರೆ. ಹೀಗಾಗಿ ಗುಣಮಟ್ಟವಿಲ್ಲದ ಭತ್ತಕ್ಕೆ ಆರಂಭದಲ್ಲಿ ಕಡಿಮೆ ಬೆಲೆ ನಿಗದಿಪಡಿಸಲಾಗುತ್ತದೆ. ಒಂದೆರಡು ತಿಂಗಳ ಅನಂತರ ನಾವೂ ಬೆಂಬಲ ಬೆಲೆಯಲ್ಲೇ ಖರೀದಿ ಮಾಡುತ್ತೇವೆ ಎನ್ನುವುದು ಖಾಸಗಿ ಮಿಲ್‌ನವರ ಸ್ಪಷ್ಟನೆ.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಬೆಂಬಲ ಬೆಲೆ ಭತ್ತ ಖರೀದಿ ಕೇಂದ್ರ ಸ್ಥಾಪಿಸುವ ಕುರಿತು ಜಿಲ್ಲಾ ಆಹಾರ ನಿಗಮದ ಮೂಲಕ ಸರಕಾರಕ್ಕೆ ಮನವಿ ಮಾಡಲಾಗಿದೆ. ಆದೇಶ ಬಂದ ಬಳಿಕ ಕೇಂದ್ರ ಸ್ಥಾಪಿಸಲಾಗುತ್ತದೆ.         
– ಭಾರತಿ , ಕಾರ್ಯದರ್ಶಿಗಳು, ಎಪಿಎಂಸಿ ಉಡುಪಿ

ದ.ಕ. ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರಮಾಣ ಕಡಿಮೆ, ಖಾಸಗಿ ಮಾರಾಟ ಹೆಚ್ಚು. ಆದ್ದರಿಂದ ಖರೀದಿ ಕೇಂದ್ರಕ್ಕೆ ಬೇಡಿಕೆ ಬಂದಿಲ್ಲ ಮತ್ತು ಸರಕಾರಕ್ಕೆ ಮನವಿ ಮಾಡಿಲ್ಲ.
– ಸೀತಾ ,
ಜಂಟಿ ಕೃಷಿ ನಿರ್ದೇಶಕರು, ದ.ಕ. ಜಿಲ್ಲೆ

ಖಾಸಗಿ ಮಿಲ್‌ಗ‌ಳ ಹಿಡಿತ ಸಡಿಲಿಸುವ ಸಲುವಾಗಿ ಪ್ರತಿ ತಾಲೂಕಿನಲ್ಲಿ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪಿಸಬೇಕು. ಗ್ರೇಡಿಂಗ್‌ ಮುಂತಾದ ವಿಚಾರದಲ್ಲಿ ಕಠಿನ ನಿಯಮಗಳನ್ನು ಅಳವಡಿಸದೆ ಸರಳವಾಗಿ ಖರೀದಿ ನಡೆಸಬೇಕು.- ಜಯರಾಮ್‌ ಶೆಟ್ಟಿ
ಅಧ್ಯಕ್ಷರು ರೈತಧ್ವನಿ ಸಂಘಟನೆ, ಕೋಟ

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.