ನಿರ್ವಹಣೆಯಿಲ್ಲದೇ ಶ್ರೀರಾಮಮಂದಿರ ಅನಾಥ


Team Udayavani, Nov 13, 2019, 10:53 AM IST

BK-TDY-1

ಮುಧೋಳ: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಘೋರ್ಪಡೆ ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಸೂಕ್ತ ನಿರ್ವಹಣೆ ಇಲ್ಲದೇ ಅನಾಥವಾಗಿದೆ.

ಭವ್ಯ ಇತಿಹಾಸ ಹೊಂದಿದ ರಾಮಮಂದಿರದಲ್ಲಿ ಮಹಾರಾಜರ ಆಡಳಿತ ಅವಧಿಯಲ್ಲಿ ದಿನನಿತ್ಯ ಪೂಜೆ-ಪುನಸ್ಕಾರಗಳು ನಡೆಯುತ್ತಿದ್ದವು. ಆದರೀಗ ನಿತ್ಯ ಪೂಜೆ-ಪುನಸ್ಕಾರಗಳು ನಡೆಯದೇ ನಿರ್ಲಕ್ಷಕ್ಕೆ ಒಳಗಾಗಿದೆ. ನಗರದ ಹೃದಯ ಭಾಗ ಎನಿಸಿದ ಗಾಂಧಿವೃತ್ತದ ಹತ್ತಿರವೇ ಶ್ರೀರಾಮಮಂದಿರ ಇದ್ದು, ಗೋಡೆ ಶಿಥಿಲಗೊಂಡು ಕುಸಿಯುವ ಹಂತಕ್ಕೆ ತಲುಪಿದೆ. ಪ್ರದಕ್ಷಿಣೆ ಪಥದಲ್ಲಿ ಯಥೇತ್ಛವಾಗಿ ಕಸ ಬೆಳೆದಿದೆ. ತುಳಸಿ ಕಟ್ಟೆ ಸುತ್ತ ಗಿಡಗಂಟಿಗಳು ಬೆಳೆದಿದೆ. ಪೂಜೆ ಮಾಡುವವರು ಇಲ್ಲದ ಕಾರಣ ಗರ್ಭಗುಡಿಯಲ್ಲಿ ಧೂಳು ತುಂಬಿಕೊಂಡಿದೆ. ಬೀದಿ ನಾಯಿಗಳು ದೇವಸ್ಥಾನದಲ್ಲಿ ಗಲೀಜು ಮಾಡುತ್ತಿವೆ. ಸ್ವಚ್ಛತೆ ಕೈಗೊಳ್ಳುವವರೂ ಇಲ್ಲದೇ ಹಾಳು ಕೊಂಪೆಯಂತಾಗಿದೆ.

ಬೇಕಿದೆ ಕಾಯಕಲ್ಪ: ನಗರದ ಹೃದಯ ಭಾಗದಲ್ಲೇ ದೇವಸ್ಥಾನ ಇದ್ದರೂ ಜನಪ್ರತಿನಿಧಿಗಳಾಗಲಿ, ಸಂಬಂಧಿಸಿದ ಅಧಿಕಾರಿಗಳಾಗಲಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾಗದಿರುವುದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ. ಅರ್ಚಕರು ಹಾಗೂ ಎಣ್ಣೆ-ದೀಪಕ್ಕಾಗಿ ಮುಜರಾಯಿ ಇಲಾಖೆಯಿಂದ ಅನುದಾನ ಒದಗಿಸಲು ಅವಕಾಶವಿದ್ದು, ದೇವಸ್ಥಾನದತ್ತ ಮುತುವರ್ಜಿ ವಹಿಸಿ ಶ್ರೀರಾಮನಿಗೆ ನಿತ್ಯ ಪೂಜೆ ನಡೆಯುವಂತೆ ನೋಡಿಕೊಳ್ಳಬೇಕು ಎಂಬುದು ಹಲವರ ಒತ್ತಾಸೆ.

ಸಂಘ-ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ:  ಇಲ್ಲಿನ ಶ್ರೀರಾಮ ಮಂದಿರ ನಿರ್ಲಕ್ಷಕ್ಕೆ ಒಳಗಾಗಿರುವುದನ್ನು ಕಂಡ ನಗರದ ಸ್ನೇಹಜ್ಯೋತಿ ಮಹಿಳಾ ಸಂಸ್ಥೆಯು ನಿಗದಿತ ದಿನದಂದು ಮಂದಿರದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಿದೆ. ಸಂಸ್ಥೆಯ ಮುಖ್ಯಸ್ಥೆ ಸ್ನೇಹಾ ಹಿರೇಮಠ ನೇತೃತ್ವದಲ್ಲಿ ಸದಸ್ಯರೆಲ್ಲ ಮಂದಿರ ಬಗ್ಗೆ ಕಾಳಜಿ ವಹಿಸಿದ್ದು, ಎರಡು ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿರುವ ರಾಮನಿಗೆ ನಿತ್ಯ ಪೂಜೆ ನಡೆಯುವಂತೆ ಇಲ್ಲಿನ ಐತಿಹಾಸಿಕ ಶ್ರೀರಾಮ ಮಂದಿರದಲ್ಲಿರುವ ರಾಮನಿಗೂ ನಿತ್ಯ ಪೂಜೆ ನಡೆಯಬೇಕು. ದೇವಸ್ಥಾನ ಸ್ವಚ್ಛತೆ ಕೈಗೊಂಡು ಹಳೆಯ ಗತ ವೈಭವ ಮರಳುವಂತೆ ಮಾಡಬೇಕು. ಮಂದಿರದಲ್ಲಿ ನಿತ್ಯ ಪೂಜೆ-ಪುನಸ್ಕಾರಗಳು ನಡೆದು ಶ್ರೀರಾಮನ ಸ್ಮರಣೆ ನಡೆಯಬೇಕು.  ಸ್ನೇಹಾ ಹಿರೇಮಠ, ಸ್ನೇಹಲೋಕ ಸಂಸ್ಥೆ ಅಧ್ಯಕ್ಷೆ

ಹಿಂದೆ ಇದಕ್ಕಿತ್ತು ನಳೆ ದೇವಸ್ಥಾನ ಹೆಸರು:  ಶ್ರೀರಾಮ ಮಂದಿರವನ್ನು ಘೋರ್ಪಡೆ ಮಹಾರಾಜರ ಕಾಲದಲ್ಲಿ ನಳೆ ದೇವಸ್ಥಾನ ಎಂತಲೂ ಕರೆಯಲಾಗುತ್ತಿತ್ತು. ನಗರದ ದತ್ತನ ಕೆರೆಯಿಂದ ದೇವಸ್ಥಾನದ ಎರಡೂ ಬದಿಯಲ್ಲಿದ್ದ ಹೊಂಡಗಳಿಗೆ ನೀರು ಸರಬರಾಜು ಆಗುತ್ತಿತ್ತು. ನಗರದ ಜನತೆಗೆ ನೀರಿನ ಮೂಲವಾಗಿದ್ದ ದೇವಸ್ಥಾನಕ್ಕೆ “ನಳೆ ದೇವಸ್ಥಾನ’ ಎಂಬ ಹೆಸರಿನಿಂದ ಕರೆಯುತ್ತಿದ್ದರೆಂಬುದು ಇತಿಹಾಸ.

ನಾನು ಈಚೆಗೆ ಅಧಿಕಾರ ವಹಿಸಿಕೊಂಡಿದ್ದು, ನಗರದ ರಾಮಮಂದಿರ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಜರಾಯಿ ಇಲ್ಲವೇ ಕಂದಾಯ ಇಲಾಖೆಯಡಿ ಬರುತ್ತಿದ್ದರೆ ಕೂಡಲೇ ಜೀರ್ಣೋದ್ಧಾರ ಮಾಡಿಸಿ, ನಿತ್ಯ ಪೂಜೆ-ಪುನಸ್ಕಾರ ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು. – ಎಸ್‌.ಬಿ. ಬಾಡಗಿ, ತಹಶೀಲ್ದಾರ್‌, ಮುಧೋಳ

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.