17ಕ್ಕೆ 17 ಸ್ಥಾನ ಗೆಲ್ಲಲು ಶ್ರಮಿಸಲಾಗುವುದು
Team Udayavani, Nov 13, 2019, 12:18 PM IST
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಕೋರ್ ಕಮಿಟಿ ಸಭೆ ಬಳಿಕ ಹೈಕಮಾಂಡ್ ಜತೆಗೂ ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೇಳಿದರು.
ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಳಿಕ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತೀಸುತ್ತೇವೆ. 17ಕ್ಕೆ 17 ಸ್ಥಾನ ಗೆಲ್ಲಲು ಶ್ರಮಿಸಲಾಗುವುದು ಎಂದು ಹೇಳಿದರು.
ಪ್ರತಿ ಕ್ಷೇತ್ರಕ್ಕೆ ಸಚಿವರು, ಪ್ರಮುಖ ನಾಯಕರನ್ನು ನಿಯೋಜಿಸಿ ಜವಾಬ್ದಾರಿ ವಹಿಸಲಾಗುವುದು. ಸಂಜೆ ಅನರ್ಹತೆಗೊಂಡಿದ್ದ ಶಾಸಕರೊಂದಿಗೂ ಚರ್ಚಿಸಲಾಗುವುದು ಎಂದರು.
ಇದೇ ವೇಳೆ ಮಾತಾನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸುಪ್ರೀಂ ಕೋರ್ಟ್ ಅನರ್ಹತೆಗೊಂಡ ಶಾಸಕರ ಸ್ಪರ್ಧೆಗೆ ಅವಕಾಶ ನೀಡಿರುವ ತೀರ್ಪನ್ನು ಸ್ವಾಗತಿಸಲಾಗುವುದು. ಮುಖ್ಯಮಂತ್ರಿಗಳು, ಹಿರಿಯ ನಾಯಕರೊಂದಿಗೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆಸಿ ಬಳಿಕ ಉಪಚುನಾವಣಾ ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.