ಕಾಲುವೆ ಬಸಿ ನೀರಿಗೆ ಬಸವಳಿದ ಜನ!

ಮೀರಾಕೊರ್ನ ಹಳ್ಳಿಯ ಮನೆಗಳಲ್ಲೂ ಉಕ್ಕುವ ನೀರುಶಾಲಾ ಕಟ್ಟಡ ಶಿಥಿಲ; ಪಾಲಕರಲ್ಲಿ ಆತಂಕ

Team Udayavani, Nov 13, 2019, 12:50 PM IST

13-November-09

„ವಿಶ್ವನಾಥ ಹಳ್ಳಿಗುಡಿ
ಹೂವಿನಹಡಗಲಿ:
ಯಾವುದೇ ಒಂದು ನೀರಾವರಿ ಯೋಜನೆ ರೈತರಿಗೆ ಉಪಯೋಗವಾಗಬೇಕು. ಅಂದಾಗ ಮಾತ್ರ ಆ ಯೋಜನೆ ಸಾರ್ಥಕವಾಗುತ್ತದೆ. ಆದರೆ, ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆ ತಾಲೂಕಿನ ರೈತರಿಗೆ ಆನುಕೂಲವಾಗುವುದರೊಂದಿಗೆ ಕೆಲ ಗ್ರಾಮಗಳಿಗೆ ಕಂಟಕವಾಗಿ ಪರಿಣಮಿಸಿದೆ.

ಮೀರಾಕೊರ್ನಹಳ್ಳಿ ಗ್ರಾಮದ ಮೇಲ್ಭಾಗದಲ್ಲಿ ಯೋಜನೆಯ ಪ್ರಮುಖ ಕಾಲುವೆ ಹಾಯ್ದು ಹೋಗಿದೆ. ಆದರೆ ಆ ಕಾಲುವೆ ಮೂಲಕವಾಗಿ ಕೆಳಗೆ ಬಸಿ ನೀರು ಬರುತ್ತಿರುವುದರಿಂದಾಗಿ ಕಾಲುವೆ ಕೆಳಗೆ ಇರುವ ಮೀರಾಕೊರ್ನಹಳ್ಳಿ ಗ್ರಾಮ ಕಳೆದ 6-7 ವರ್ಷದಿಂದಲೂ ಗ್ರಾಮದ ತುಂಬೆಲ್ಲಾ ಬಸಿ ನೀರು ಉಂಟಾಗಿ ಜನತೆಗೆ ತೊಂದರೆಯಾಗಿದೆ. ಅಷ್ಟೇಯಲ್ಲದೆ ಯಾವುದಾದರೂ ಕೆಲಸಕ್ಕೆಂದು ಭೂಮಿ ಅಗೆದರೆ ಸಾಕು ನೀರು ಚಿಮ್ಮುತ್ತದೆ. ಕಳೆದ ಕೆಲ ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದಲೂ ತಾಲೂಕಿನ ಮಿರಾಕೊರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಬುನಾದಿಯ ಕೆಳಗೆ ನೀರು ಹರಿಯುತ್ತಿದ್ದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಇದರಿಂದಾಗಿ ಕಟ್ಟಡ ಶಿಥಿಲಗೊಂಡು ಮಕ್ಕಳಿಗೆ ಅಪಾಯ ತಂದೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಯೋಜನೆಯಿಂದಾಗಿ ಪ್ರಮುಖ ಕಾಲುವೆಗೆ ನೀರು ಹರಿಸಿದಾಗಲೊಮ್ಮೆ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಜನತೆ ಅತಂಕದಲ್ಲಿದ್ದಾರೆ. ಕಾಲುವೆಗೆ ನೀರು ಬಿಟ್ಟ ಸಮಯದಲ್ಲಿ ನೀರು ಬಸಿಯುತ್ತಿತ್ತು.

ಯಾವ ಸಮಯದಲ್ಲಾದರೂ ಅನಾಹುತವಾಗುದ ಸಾಧ್ಯತೆ ಹೆಚ್ಚಾಗಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಬುನಾ ದಿಯಿಂದ ನೀರು ಹೊರ ಬರುತ್ತಿದ್ದು, ಮಕ್ಕಳ ಪಾಲಕರು ಆತಂಕಗೊಂಡಿದ್ದಾರೆ. ಒಂದನೇ ತರಗತಿಯಿಂದ 7ನೇ ತರಗತಿವರೆಗೆ ತರಗತಿಗಳು ನಡೆಯುತ್ತಿವೆ. ಶಾಲೆಯ ಕಟ್ಟಡ ಈಗಾಗಲೇ ಶಿಥಿಲಗೊಂಡಿವೆ. ಮೂರು ಕೋಣೆಗಳ ಮೇಲ್ಛಾವಣಿಯ ಸಿಮೆಂಟ್‌ ಕೀಳುತ್ತಿದೆ. ಮಳೆ ಬಂದರೆ ಶಾಲೆಯ ಆವರಣವೂ ಜಲಾವೃತವಾಗುತ್ತದೆ.

ಮಕ್ಕಳಿಗೆ ಆಟವಾಡಲೂ ಜಾಗ ಇಲ್ಲದಂತಾಗಿದೆ. ಈಗಿರುವ ಶಾಲಾ ಕಟ್ಟಡ ಮೇಲೆ ಎರಡು ಕೋಣೆ ನಿರ್ಮಿಸಲಾಗಿದೆ. ಕೆಳ ಭಾಗದಲ್ಲಿ ನೀರು ಹೋಗುತ್ತಿರುವುದರಿಂದ ಅನಾಹುತವಾಗುವ ಹಂತಕ್ಕೆ ಬಂದಿದೆ.

ಶಾಲೆಯ ಮೂರು ಕೋಣೆಯಲ್ಲಿ ಮಳೆ ಬಂದರೆ ಸೋರುತ್ತಿವೆ. ಇನ್ನು ಕೆಲವು ಕೋಣೆಗಳಲ್ಲಿ ಮೇಲ್ಛಾವಣಿ ಕಿತ್ತು ಹೋಗಿವೆ. ಹಲವಾರು ಬಾರಿ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಶಿಕ್ಷಣ ಇಲಾಖೆ, ಜನಪ್ರತಿನಿ ಧಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕೆಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.