ಗೈರಾದ ಅಧಿಕಾರಿಗಳಿಗೆ ನೋಟಿಸ್‌ ಜಾರಿ

ಕೆಆರ್‌ಐಡಿಎಲ್‌ ಇಇ ಪರ ಆಗಮಿಸಿದ ಸಹಾಯಕ ಇಂಜಿನಿಯರ್‌ಗೆ ಅಧ್ಯಕ್ಷೆ ತರಾಟೆ ಅಂಗನವಾಡಿಗಳಲ್ಲಿ ಸಿಸಿ ಕ್ಯಾಮೆರಾ ಹಾಕಿ

Team Udayavani, Nov 13, 2019, 3:22 PM IST

13-November-16

ರಾಯಚೂರು: ಸಭೆಗೆ ಹಾಜರಾಗದೆ ಬದಲಿ ಅಧಿಕಾರಿಗಳು ಅಥವಾ ಸಿಬ್ಬಂದಿಯನ್ನು ಕಳುಹಿಸಿದ ಏಳು ಜನ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೇಷ್ಮೆ ಇಲಾಖೆ, ಕೆಆರ್‌ಐಡಿಎಲ್‌, ವಯಸ್ಕರ ಶಿಕ್ಷಣ, ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಸೇರಿ ವಿವಿಧ ಇಲಾಖೆ ಅ ಧಿಕಾರಿಗಳು ಸಭೆಗೆ ಬಂದಿಲ್ಲ. ಅನುಮತಿ ಪಡೆಯದೆ, ಮನಸೋ ಇಚ್ಛೆ ಗೈರಾದರೆ ಇಲ್ಲಿ ನಾವೇಕೆ ಇರಬೇಕು. ಸಭೆಗೆ ಬೇಕಾದ ಮಾಹಿತಿಯನ್ನು ಯಾರು ನೀಡುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಕೆಆರ್‌ಐಡಿಎಲ್‌ ಇಇ ಪರ ಆಗಮಿಸಿದ ಸಹಾಯಕ ಇಂಜಿನಿಯರ್‌ ರಾಮಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಅಧ್ಯಕ್ಷೆ, ಮಾಹಿತಿ ಇಲ್ಲದಿದ್ದರೆ ಸಭೆಗೆ ನೀವು ಬರಬೇಡಿ. ಹೊರಟು ಹೋಗಿ ಎಂದು ಸಿಡಿಮಿಡಿಗೊಂಡರು.

ಜೆಸ್ಕಾಂನಿಂದ ಸಿಂಧನೂರಿನಲ್ಲಿ ಲೈನ್‌ ಕಾಮಗಾರಿ ಮುಗಿದಿದ್ದು, ಟ್ರಾನ್ಸ್‌ಫಾರ್ಮರ್‌ ಅಳವಡಿಸಬೇಕಿದೆ. ತೊಗರಿ ಬೆಳೆಗಾರರಿಂದ ಆಕ್ಷೇಪ ವ್ಯಕ್ತವಾದ ಕಾರಣ ವಿಳಂಬವಾಯಿತು, ವಾರದೊಳಗೆ ಕೆಲಸ ಮುಗಿಸುವುದಾಗಿ ಇಇ ಸಭೆಗೆ ಮಾಹಿತಿ ನೀಡಿದರು. ಗೋರೆಬಾಳ ಗ್ರಾಮದ ರಸ್ತೆ ಬದಿ ಟ್ರಾನ್ಸ್ಫಾರ್ಮರ್‌ ಅಳವಡಿಸಿದ್ದು, ಅಪಾಯ ಎದುರಾಗುವ ಸಾಧ್ಯತೆಯಿದ್ದು, ಸ್ಥಳಾಂತರಿಸುವಂತೆ ಅಧ್ಯಕ್ಷೆ ಸೂಚಿಸಿದರು.

ಕ್ಯಾಶ್ಯುಟೆಕ್‌ನಿಂದ ಅಂಗನವಾಡಿಗಳ ಶೌಚಗೃಹ ನಿರ್ಮಾಣಕ್ಕೆ ಸಂಬಂ ಧಿಸಿದಂತೆ ನಡೆದ ಚರ್ಚೆಯಲ್ಲಿ 374 ಶೌಚಗೃಹ ನಿರ್ಮಾಣವನ್ನು ನಿರ್ಮಿತಿ ಕೇಂದ್ರದಿಂದ ಹಿಂಪಡೆದು ಸಂಬಂಧಿಸಿದ ಪಂಚಾಯಿತಿಗೆ ನೀಡಲಾಗಿದೆ. ಶೌಚಗೃಹ ನಿರ್ಮಾಣದ 11 ಸಾವಿರ ರೂ. ಹೆಚ್ಚುವರಿ ಹಣ ವಿನಿಯೋಗಿಸಿ ಪಂಚಾಯಿತಿಯವರೇ ಶೌಚಗೃಹ ನಿರ್ಮಿಸುವರು ಎಂದು ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ನಿರ್ಮಿತಿ ಕೇಂದ್ರದಿಂದ 11 ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅವುಗಳಲ್ಲಿ ಒಂದು ಮುಗಿದಿದೆ. ಉಳಿದವು ಪ್ರಗತಿಯಲ್ಲಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡಿದರೆ ಬೇಗ ಮುಗಿಸುವುದಾಗಿ ಅ ಧಿಕಾರಿ ಶರಣಬಸಪ್ಪ ಪಟ್ಟೇದ ತಿಳಿಸಿದರು.

ಮಕ್ಕಳಿಗೆ ವಿತರಿಸುವ ಶೂ ಹಾಗೂ ಸಾಕ್ಸ್‌ ಕಳಪೆಯಾಗಿದ್ದು, ಈ ಬಗ್ಗೆ ಸಂಬಂ ಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸದಸ್ಯರು ಒತ್ತಾಯಿಸಿದರು. ಸಿಇಒ ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಈ ಬಗ್ಗೆ ಹಲವು ದಿನಪತ್ರಿಕೆಗಳಲ್ಲಿ ವರದಿಯಾಗಿದ್ದು, ಅವುಗಳ ಸತ್ಯಾಸತ್ಯತೆ ಪರಿಶೀಲಿಸಲು ಎಲ್ಲ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಪ್ರೊಬೇಷ್ನರಿ ಐಎಎಸ್‌ ಅಧಿಕಾರಿ ನೇತೃತ್ವ ವಹಿಸಿದ್ದು, ವಾರದೊಳಗೆ ವರದಿ ನೀಡುವರು ಎಂದು ತಿಳಿಸಿದರು.

ರೈತರಿಗೆ ನಕಲಿ ಕೀಟನಾಶಕ ವಿತರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ದಾಸ್ತಾನು ಮಳಿಗೆಗಳಲ್ಲಿ ಪರಿಶೀಲಿಸಿ ನಕಲಿ ಕೀಟನಾಶಕ ವಶಪಡಿಸಿಕೊಂಡು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಕೃಷಿ ಇಲಾಖೆ ಅ ಧಿಕಾರಿ ಸಭೆಗೆ ತಿಳಿಸಿದರು. ಇಲಾಖೆಯಿಂದ ರೈತರಿಗೆ ಕೀಟನಾಶಕ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಜಿಪಂ ಅಧ್ಯಕ್ಷೆ ಸೂಚಿಸಿದರು.

ಜಿಪಂ ಯೋಜನಾ ಧಿಕಾರಿ ಡಾ| ರೋಣಿ ಮಾತನಾಡಿ, ಸಿಂಧನೂರಿನ ಅಂಗನವಾಡಿ ಕೇಂದ್ರಗಳಿಗೆ ಸಿಡಿಪಿಒಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಲು ಸೂಚನೆ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡರಿಗೆ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 112 ಅಂಗನವಾಡಿ ಕಟ್ಟಡ ಕಾಮಗಾರಿ ಕೈಗೊಂಡಿದ್ದು, 62 ಮುಗಿದಿವೆ ಎಂದು ವೀರನಗೌಡ ತಿಳಿಸಿದರು.

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೇ ಇಲ್ಲದಿದ್ದರೂ ಹಾಜರಾತಿ ತೋರಿಸುತ್ತಿದ್ದಾರೆ. ಇದರಿಂದ ಆಹಾರ ಪೂರೈಕೆ ಕೊರತೆಯಾಗುತ್ತಿದೆ. ಆದಕಾರಣ ಪ್ರತಿ ಅಂಗನವಾಡಿ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಜಿಪಂ ಅಧ್ಯಕ್ಷರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡರಿಗೆ ಸೂಚಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧಿಕಾರಿಗಳು ಸಭೆಗೆ ಸಮರ್ಪಕ ಮಾಹಿತಿ ನೀಡುವುದಿಲ್ಲ. ಹೀಗೆ ಮುಂದುವರಿದರೆ ಸೂಕ್ತ  ಕ್ರಮ ಜರುಗಿಸುವುದಾಗಿ ತಿಳಿಸಿದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು  ಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.