ಬಿಮಾ ಯೋಜನೆ ಜಾಗೃತಿ ಮೂಡಿಸಿ


Team Udayavani, Nov 13, 2019, 4:11 PM IST

mandya-tdy-1

ಮಂಡ್ಯ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ಸರ್ಕಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ 2019-20ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ನಡೆದ ಜಿಲ್ಲಾ ಬೆಳೆ ವಿಮಾ ಯೋಜನೆ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಸದರಿ ಯೋಜನೆ ಬಗ್ಗೆ ಜಿಲ್ಲಾದ್ಯಂತ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯ ರೈತರು ಈ ಯೋಜನೆಯಡಿ ಭಾಗವಹಿಸಲು ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳೆ ವಿಮೆ ಕಡ್ಡಾಯ: ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಈ ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ , ಖಾತೆ, ಬ್ಯಾಂಕ್‌ ಪಾಸ್‌ ಪುಸ್ತಕ , ಕಂದಾಯ ರಶೀದಿ, ಆಧಾರ್‌ ನೋಂದಣಿ ಸಂಖ್ಯೆ ಹಾಗೂ ಮೊಬೈಲ್‌ ಸಂಖ್ಯೆ ನೀಡಬೇಕು ಎಂದು ಹೇಳಿದರು.

ಪರ್ಯಾಯ ಬೆಳೆ: ರೈತರು ಆರ್ಥಿಕವಾಗಿ ಸಬಲರಾಗಲು ಪರ್ಯಾಯ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಅರಿವು ಮೂಡಿಸಬೇಕು. ಕೃಷಿ ಅರಣ್ಯ ಯೋಜನೆಯ ಅಧಿಕಾರಿಗಳು ರೈತರಿಗೆಮಾಹಿತಿ ನೀಡ ಬೇಕು ಎಂದು ಸೂಚಿಸಿದರು.

ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ: ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್‌. ಚಂದ್ರಶೇಖರ್‌ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ ಭತ್ತ (ನೀರಾವರಿ) ಹಾಗೂ ರಾಗಿ(ನೀರಾವರಿ) ಬೆಳೆಗಳಿಗೆ ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಡಿ. 16 ಕೊನೆಯ ದಿನವಾಗಿದೆ. ರಾಗಿ(ಮಳೆ ಆಶ್ರಿತ) ಬೆಳೆಗೆ ನ. 14, ಹುರುಳಿ( ಮಳೆ ಆಶ್ರಿತ) ಹಾಗೂ ಟೊಮೆಟೋ ಬೆಳೆಗೆ ನ.30 ವಿಮಾ ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನವಾಗಿದೆ.

ಬೇಸಿಗೆ ಹಂಗಾಮಿನಲ್ಲಿ ಭತ್ತ(ನೀರಾವರಿ), ರಾಗಿ(ನೀರಾವರಿ) ಹಾಗೂ ಟೊಮೆಟೋ ಬೆಳೆಗಳಿಗೆ ಫೆ.29ರವರಗೆ ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಅವಕಾಶವಿದೆ ಎಂದರು. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಧನುಷ್‌, ಜಿಲ್ಲಾ ಮಾಗದರ್ಶಿ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ಕದರಪ್ಪ, ವಾರ್ತಾಧಿಕಾರಿ ಹರೀಶ್‌, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಮ್ಮ ಹಾಗೂ ವಿಮಾಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿ ತರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.