ಮತದಾನ ಪ್ರಮಾಣ ಇಳಿಕೆಗೆ ಆದ್ಯತೆ ಕೊರತೆ-ನಿರುತ್ಸಾಹ ಕಾರಣ?

ಮಹಾನಗರ ಪಾಲಿಕೆ ಚುನಾವಣೆ

Team Udayavani, Nov 14, 2019, 4:57 AM IST

vv-16

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯಲ್ಲಿ ಈ ಬಾರಿ ಹಿಂದಿನ ಪಾಲಿಕೆ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಮತದಾನದ ಅಂಕಿ-ಅಂಶಗಳನ್ನು ಪರಿಗಣಿಸಿದರೆ ಕಡಿಮೆ ಮತದಾನವಾಗಿರುವುದು ಇದೀಗ ಒಂದಷ್ಟು ಚರ್ಚೆ ಹುಟ್ಟುಹಾಕಿದೆ. ಗ್ರಾಮಾಂತರ ಪ್ರದೇಶಗಳಿಗೆ ಹೋಲಿಸಿದರೆ ಚುನಾವಣೆಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ನಗರವಾಸಿಗಳ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿರುವುದು ಈ ಪಾಲಿಕೆ ಚುನಾವಣೆ ಮತ್ತೂಮ್ಮೆ ಸಾಬೀತುಪಡಿಸಿದೆ.

ಮಂಗಳವಾರ ನಡೆದಿರುವ ಚುನಾವಣೆಯಲ್ಲಿ ಒಟ್ಟು 3,94,894 ಮತದಾರರಲ್ಲಿ 1,12,806 ಪುರುಷರು ಹಾಗೂ 1,22,412 ಮಹಿಳೆಯರು ಸಹಿತ ಒಟ್ಟು 2,35,235 ಮಂದಿ ಮತ ಚಲಾಯಿಸಿದ್ದು, ಶೇ.59.57 ಮತದಾನವಾಗಿದೆ. ಅಂದರೆ 1,59,359 ಮತದಾರರು ಈ ಬಾರಿ ಮತದಾನದಿಂದ ಹೊರಗುಳಿದಿದ್ದಾರೆ.

2013ರ ಮಾ.7 ರಂದು ನಡೆದಿದ್ದ ಪಾಲಿಕೆ ಚುನಾವಣೆಗೆ ಇದ್ದ 3,26,995 ಮತದಾರರಲ್ಲಿ 99,422 ಪುರುಷರು, 1,07,539 ಮಹಿಳೆಯರು ಸಹಿತ ಒಟ್ಟು 2,06,961 ಮಂದಿ ಮತ ಚಲಾಯಿಸಿದ್ದು, ಶೇ.63.29 ಮತದಾನವಾಗಿತ್ತು. 1,20,034 ಮಂದಿ ಅಂದಿನ ಚುನಾವಣೆಯಲ್ಲಿ ಮತದಾನದಿಂದ ಹೊರಗುಳಿದಿದ್ದರು. 2013ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾರರ ಸಂಖ್ಯೆಯಲ್ಲಿ 67,899 ಮಂದಿ ಹೆಚ್ಚಳವಾಗಿದೆ. ಹೀಗಿದ್ದರೂ ಮತದಾನದ ಪ್ರಮಾಣ ಈ ಬಾರಿ ಕುಸಿದಿರುವುದು ಗಮನಾರ್ಹ ವಿಚಾರ.

ಪಾಲಿಕೆ ಚುನಾವಣೆಗೆ ನಿರಾಸಕ್ತಿ ?
7 ತಿಂಗಳ ಹಿಂದೆ ನಡೆದಿದ್ದ ಲೋಕಸಭಾ ಚುನಾವಣೆ, 17 ತಿಂಗಳ ಹಿಂದೆ ನಡೆದಿದ್ದ ವಿಧಾನಸಭಾ ಚುನಾವಣೆಗಳಲ್ಲಿ ಆಗಿರುವ ಮತದಾನಕ್ಕೆ ಹೋಲಿಸಿದರೆ, ಈ ಪಾಲಿಕೆ ಚುನಾವಣೆ ಮತದಾನದಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡುಬಂದಿದೆ. ಇದು ವಿಧಾನಸಭೆ, ಲೋಕಸಭೆಯಂತಹ ಸಾರ್ವತ್ರಿಕ ಚುನಾವಣೆಗಳಿಗೆ ನೀಡುವ ಮಹತ್ವವನ್ನು ಮತದಾರರು ಮತ್ತು ಚುನಾವಣಾ ವ್ಯವಸ್ಥೆ ಪಾಲಿಕೆ ಚುನಾವಣೆಗೆ ನೀಡುತ್ತಿಲ್ಲವೆ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.67.21ರಷ್ಟು ಮತದಾನವಾಗಿತ್ತು. ಪಾಲಿಕೆಯ 60 ವಾರ್ಡ್‌ಗಳ ಪೈಕಿ ದಕ್ಷಿಣ ವಿಧಾನಸಭಾ ಕ್ಷೇತ್ರ 38 ವಾರ್ಡ್‌ಗಳನ್ನು ಹೊಂದಿದ್ದು, ಪೂರ್ತಿಯಾಗಿ ಪಾಲಿಕೆ ವ್ಯಾಪ್ತಿಗೆ ಬರುತ್ತದೆ. ಎಪ್ರಿಲ್‌ನಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.70.71ರಷ್ಟು ಮತದಾನವಾಗಿದ್ದು, ಇದಕ್ಕೆ ಹೋಲಿಸಿದರೆ ಪಾಲಿಕೆ ಚುನಾವಣೆಯಲ್ಲಿ ಶೇ.11ರಷ್ಟು ಮತದಾನ ಕಡಿಮೆಯಾಗಿದೆ. 2018ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಶೇ.8ರಷ್ಟು ಮತದಾನ ಕಮ್ಮಿಯಾಗಿದೆ. ಉತ್ತರ ವಿಧಾನಸಭಾ ಕ್ಷೇತ್ರ ಪಾಲಿಕೆಯ 22 ವಾರ್ಡ್‌ಗಳನ್ನು ಹೊಂದಿದೆ. ಇಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.75.31ರಷ್ಟು ಮತದಾನವಾಗಿದ್ದು, ಇದಕ್ಕೆ ಹೋಲಿಸಿದರೆ ಪಾಲಿಕೆ ಚುನಾವಣೆಯಲ್ಲಿ ಶೇ.26ರಷ್ಟು ಕಡಿಮೆ ಮತದಾನವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಶೇ.74.55ರಷ್ಟು ಮತದಾನವಾಗಿದ್ದು, ಈ ಬಾರಿ ಮತದಾನವನ್ನು ಪರಿಗಣಿಸಿದರೆ ಶೇ.25ರಷ್ಟು ಕಡಿಮೆ ಮತದಾನ ದಾಖಲಾಗಿದೆ.

ಚುನಾವಣ ವ್ಯವಸ್ಥೆ ಕಾರಣಗಳು
ಕಳೆದ ವಿಧಾನಸಭಾ, ಲೋಕಸಭಾ ಚುನಾವಣೆಗಳಲ್ಲಿ ಮತದಾರರ ಜಾಗೃತಿ ನಿಟ್ಟಿನಲ್ಲಿ ಚುನಾವಣ ಆಯೋಗದಿಂದ ಸ್ವೀಪ್‌ ಸಹಿತ ವ್ಯಾಪಕ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಾಲಿಕೆ ಚುನಾವಣೆಯಲ್ಲಿ ಇಂತಹ ಯಾವುದೇ ಜಾಗೃತಿ ಕಾರ್ಯಕ್ರಮಗಳು ಆಯೋಜಿಸಿರಲಿಲ್ಲ. ಪಾಲಿಕೆ ಚುನಾವಣೆಗೆ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದುದು, ಇದಕ್ಕೆ ಕಾರಣವಾಗಿರಬಹುದು. ವಾರ್ಡ್‌ ಮರು ವಿಂಗಡನೆಯಿಂದಾಗಿ ಕಳೆದ ಬಾರಿಯ ವಾರ್ಡ್‌ನಲ್ಲಿದ್ದ ಪ್ರದೇಶಗಳಲ್ಲಿ ಕೆಲವು ಪ್ರದೇಶಗಳು ಇತರ ವಾರ್ಡ್‌ಗೆ ಹಂಚಿಕೆಯಾಗಿದೆ. ಇದರ ಪರಿಣಾಮ ಅವರ ಮತದಾನ ಕೇಂದ್ರವೂ ಬದಲಾಗಿದ್ದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಜತೆಗೆ, ವಾರ್ಡ್‌ ಮೀಸಲಾತಿ ಪ್ರಕ್ರಿಯೆಯಲ್ಲಿನ ಬದಲಾವಣೆ ಕೂಡ ಮತದಾನ ಪ್ರಮಾಣದಲ್ಲಿ ಏರುಪೇರು ಆಗುವುದಕ್ಕೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.

– ಕೇಶವ ಕುಂದರ್‌

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.