ಜೆಡಿಎಸ್‌: ಕಿಂಗ್‌ ಮೇಕರ್‌ ಆಸೆ ಈಡೇರಿಕೆಗೆ ತಂತ್ರ


Team Udayavani, Nov 14, 2019, 3:09 AM IST

jds logo

ಬೆಂಗಳೂರು: ಉಪ ಚುನಾವಣೆ ಮುಂದೂಡಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜೆಡಿಎಸ್‌ಗೆ ಸುಪ್ರೀಂಕೋರ್ಟ್‌ ತೀರ್ಪು ಹಿನ್ನೆಲೆಯಲ್ಲಿ ಮೈ ಕೊಡವಿ ಅಖಾಡಕ್ಕೆ ಇಳಿಯುವ ಅನಿವಾರ್ಯತೆ ಎದುರಾಗಿದೆ. ಐದಾರು ಕ್ಷೇತ್ರ ಹೊರತುಪಡಿಸಿ 15 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಇದ್ದರೂ ತಮ್ಮ ಅಸ್ತಿತ್ವ ಸಾಬೀತು ಪಡಿಸಲು “ಶ್ರಮ’ ಹಾಕಲೇಬೇಕಿದೆ. ಜತೆಗೆ, ಉಪ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನ ಗೆಲ್ಲುವಂತೆ ನೋಡಿಕೊಂಡು ಫ‌ಲಿತಾಂಶ ನಂತರದ ವಿದ್ಯಮಾನಗಳಲ್ಲಿ “ಕಿಂಗ್‌ ಮೇಕರ್‌’ ಆಗಲು ಜೆಡಿಎಸ್‌ ಕಾರ್ಯತಂತ್ರ ರೂಪಿಸಲು ಮುಂದಾಗಿದೆ.

ಇದೇ ಕಾರಣಕ್ಕೆ ಜಿದ್ದಾಜಿದ್ದಿ ಕ್ಷೇತ್ರವಾದ ಹೊಸಕೋಟೆ ಕ್ಷೇತ್ರದಲ್ಲಿ ಸಂಸದ ಬಿ.ಎನ್‌.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡರಿಗೆ ಬೆಂಬಲ ಘೋಷಿಸಲಾಗಿದೆ. ಶಿವಾಜಿನಗರದಲ್ಲಿ ರೋಷನ್‌ಬೇಗ್‌ ಪಕ್ಷೇತರ ಸದಸ್ಯರಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದ್ದು ಅಲ್ಲೂ ಜೆಡಿಎಸ್‌ ಬೆಂಬಲಿಸುವ ನಿರೀಕ್ಷೆಯಿದೆ. ಶಿವಾಜಿನಗರ ಕ್ಷೇತ್ರದಿಂದ ರೋಷನ್‌ಬೇಗ್‌ ಬಿಜೆಪಿ ಟಿಕೆಟ್‌ನಡಿ ಸ್ಪರ್ಧೆಗೆ ಸ್ಥಳೀಯರ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿದ್ದು, ಪಕ್ಷೇತರರಾಗಿ ಸ್ಪರ್ಧೆ ಮಾಡಲು ಒತ್ತಾಯ ಹಾಕುತ್ತಿದ್ದಾರೆ.

ಬಿಜೆಪಿ ಅಲ್ಲಿ ಅಭ್ಯರ್ಥಿ ಹಾಕದಂತೆ ನೋಡಿಕೊಂಡು ಜೆಡಿಎಸ್‌ ಬೆಂಬಲ ಪಡೆಯುವ ನಿಟ್ಟಿನಲ್ಲಿ ರೋಷನ್‌ ಬೇಗ್‌ ಸಹ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಜತೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರ ಉಳಿಸಿಕೊಳ್ಳಲು ಬಿಜೆಪಿ ಎಂಟು ಕ್ಷೇತ್ರ ಗೆಲ್ಲಬೇಕಾಗಿದೆ. ಇದಕ್ಕಿಂತ ಕಡಿಮೆ ಗೆದ್ದರೆ ತೂಗುಗತ್ತಿ ಸದಾ ಇರುತ್ತದೆ. ಅಂತಹ ಸಂದರ್ಭದಲ್ಲಿ ಬಿಜೆಪಿಗೆ ಮುಂದಿನ ಮೂರು ವರ್ಷ ಸರ್ಕಾರ ಮುನ್ನಡೆಸಲು ಜೆಡಿಎಸ್‌ನ ಅನಿವಾರ್ಯತೆ ಉಂಟಾಗುತ್ತದೆ. ಆಗ “ಆಟ’ ಪ್ರಾರಂಭಿಸುವುದು ಜೆಡಿಎಸ್‌ ಲೆಕ್ಕಾಚಾರ ಎಂದು ಹೇಳಲಾಗುತ್ತಿದೆ.

ಇದೇ ಕಾರಣಕ್ಕೆ ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡರಿಗೆ ಬೆಂಬಲ ಸೂಚಿಸುವ ಮೂಲಕ ಕಾಂಗ್ರೆಸ್‌-ಬಿಜೆಪಿಗೆ “ಶಾಕ್‌’ ನೀಡಿರುವ ಜೆಡಿಎಸ್‌, ಇತರೆ ಕ್ಷೇತ್ರಗಳಲ್ಲೂ ತಮ್ಮದೇ ಆದ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರು ಪಕ್ಷದ ಕಚೇರಿಯಲ್ಲಿ ಸುಮಾರು ಅರ್ಧ ಗಂಟೆ ಪ್ರತ್ಯೇಕ ಮಾತುಕತೆ ನಡೆಸಿ, ಕೆಲವು ಪ್ರಮುಖ ತೀರ್ಮಾನ ಕೈಗೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಹಾಲಕ್ಷ್ಮಿ ಲೇ ಔಟ್‌, ಹುಣಸೂರು, ಕೆ.ಆರ್‌. ಪೇಟೆ, ಯಶವಂತಪುರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಹೆಚ್ಚು ಶ್ರಮ ಹಾಕುವುದು. ಹೊಸಕೋಟೆ, ಶಿವಾಜಿನಗರ ಕ್ಷೇತ್ರಗಳಲ್ಲಿ ಪಕ್ಷೇತರರಿಗೆ ಬೆಂಬಲ ನೀಡುವುದು. ಇತರೆ ಕ್ಷೇತ್ರಗಳಲ್ಲಿ ಬಿಜೆಪಿ ಓಟಕ್ಕೆ ಬ್ರೇಕ್‌ ಹಾಕುವುದು ಜೆಡಿಎಸ್‌ನ ಉದ್ದೇಶ. ಹುಣಸೂರಿನಲ್ಲಿ ಎಚ್‌.ವಿಶ್ವನಾಥ್‌ ಮಣಿಸಲು ಗಣೇಶ್‌ ಹಾಗೂ ಸೋಮಶೇಖರ್‌ ಎಂಬ ಇಬ್ಬರು ಪ್ರಬಲ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ.

ಈ ಮಧ್ಯೆ, ಜಿ.ಟಿ.ದೇವೇಗೌಡರ ಜತೆಯೂ ಸಂಧಾನ ನಡೆಯಲಾಗುತ್ತಿದ್ದು ಅವರನ್ನೂ ಪಕ್ಷದಲ್ಲೇ ಉಳಿಸಿಕೊಳ್ಳಲು ಯತ್ನಿಸಲಾಗುತ್ತಿದೆ. ಅವರು ಬಯಸಿದರೆ ಹುಣಸೂರು ಕ್ಷೇತ್ರಕ್ಕೆ ಅವರ ಪುತ್ರ ಹರೀಶ್‌ಗೌಡರಿಗೆ ಟಿಕೆಟ್‌ ನೀಡಲು ಮುಂದಾಗಿ ದ್ದಾರೆ ಎನ್ನಲಾಗಿದೆ. ಅದೇ ರೀತಿ ಮಹಾಲಕ್ಷ್ಮಿ ಲೇ ಔಟ್‌ ಕ್ಷೇತ್ರದಲ್ಲಿ ಮಾಜಿ ಉಪ ಮೇಯರ್‌ ಜತೆಗೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಗಿರೀಶ್‌ ಕೆ.ನಾಶಿ ಸೆಳೆಯಲು ತೀರ್ಮಾನಿಸಲಾಗಿದೆ.

ಕೆ.ಆರ್‌.ಪೇಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಜೆಪಿ ನಗರ ನಿವಾಸದಲ್ಲಿ ಎಚ್‌.ಡಿ. ಕುಮಾರಸ್ವಾಮಿಯವರು ಹತ್ತು ಮುಖಂಡರ ಜತೆ ಚರ್ಚಿಸಿದ್ದಾರೆ. ಅಲ್ಲಿ ಐವರು ಆಕಾಂಕ್ಷಿಗಳಿ ರುವುದರಿಂದ ಒಮ್ಮತದ ಅಭ್ಯರ್ಥಿಯಾಗಿ ನೀವೇ ಒಬ್ಬರು ಚರ್ಚಿಸಿ ಎಂದು ಹೇಳಲಾಗಿದೆ.

ಜೆಡಿಎಸ್‌ ಆತಂಕ ಏನು?: ಈ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದು ಸರ್ಕಾರ ಗಟ್ಟಿಯಾದರೆ ಮತ್ತೆ ಜೆಡಿಎಸ್‌ನ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಬಹುದು ಎಂಬ ಆತಂಕವೂ ಜೆಡಿಎಸ್‌ಗಿದೆ. ಈಗಾಗಲೇ ಜಿ.ಟಿ.ದೇವೇಗೌಡ ಸೇರಿದಂತೆ ಕೆಲವರು ಬಿಜೆಪಿ ಸಂಪರ್ಕದಲ್ಲಿರುವುದು. ಮತ್ತೆ ಕೆಲವರು ಕಾಂಗ್ರೆಸ್‌ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಹೀಗಾಗಿ, ಇದಕ್ಕೆ ತಡೆಯೊಡ್ಡಿ ಪಕ್ಷದಿಂದ ಯಾರೂ ಹೋಗದಂತೆ ನೋಡಿಕೊಳ್ಳಲು ಮುಂದಿನ ದಿನಗಳಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಜತೆ ನಾವೇ ಸೇರಿ ಸರ್ಕಾರ ರಚನೆ ಮಾಡಬಹುದು ಎಂಬ ಸಂದೇಶ ರವಾನಿಸುತ್ತಿದ್ದಾರೆ ಎಂದು ಹೇಳಲಾಗಿದೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.