ಸಿದ್ದು ಸವಾಲು ಸ್ವೀಕರಿಸಲು ಸಿದ್ಧ
Team Udayavani, Nov 14, 2019, 3:05 AM IST
ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕಲಿ ಎಂಬ ಸಿದ್ದರಾಮಯ್ಯ ಸವಾಲು ಸ್ವೀಕರಿಸಲು ಸಿದ್ಧ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, 14 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಎರಡು ಪಟ್ಟು ಹೆಚ್ಚು ಶ್ರಮ ಹಾಕುತ್ತೇನೆ ಎಂದು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪು ಬರಲಿ ಎಂದು ನಾವು ಕಾಯುತ್ತಿದ್ದೆವು. ದೇವೇಗೌಡರ ಮಾರ್ಗದರ್ಶನದಲ್ಲಿ ಉಪ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರಿಗೆ ಬೆಂಬಲ ನೀಡಲು ತೀರ್ಮಾನಿಸಲಾಗಿದೆ. 14 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತೇವೆ. ನಾಳೆ ಮಧ್ಯಾಹ್ನದೊಳಗೆ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ ಎಂದರು.
ಈ ಉಪ ಚುನಾವಣೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳಿಗೂ ಅಗ್ನಿ ಪರೀಕ್ಷೆ ಯಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಜತೆ ಯಾವ ಒಳ ಅಥವಾ ಹೊರ ಒಪ್ಪಂದ ಇಲ್ಲ. ನಾನು ಮಾಡಿಕೊಳ್ಳುವುದಿದ್ದರೆ ಓಪನ್ ಒಪ್ಪಂದ ಮಾಡಿ ಕೊಳ್ಳುತ್ತೇನೆ. ಹೋರಾಟ ಮಾಡುವುದಾದರೆ ನೇರವಾಗಿಯೇ ಮಾಡುತ್ತೇನೆ ಎಂದರು.
ಸಿದ್ದು ವಿರುದ್ಧ ವಾಗ್ಧಾಳಿ: ಆರ್ಥಿಕ ತಜ್ಞರಾಗಿರುವ ಸಿದ್ದರಾಮಯ್ಯ ಅವರು ತಾನೇನೋ ಸಾಧನೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರ ಕಾಲದಲ್ಲಿ ರೂಪಿಸಿದ ವಸತಿ ಯೋಜನೆಗಳಿಗೆ ಮುಂದಿನ ಹತ್ತು ವರ್ಷ ಆಡಳಿತ ನಡೆಸೋರು 28 ಸಾವಿರ ಕೋಟಿ ರೂ. ಹಣ ಕೊಡಬೇಕಾಗಿದೆ. ನೀರಾವರಿ ಯೋಜನೆಗಳಿಗೆ 1.3 ಲಕ್ಷ ಕೋಟಿ ಎಂದು ಘೋಷಿಸಿದ್ದಾರೆ.
ಎಷ್ಟು ಹಣ ಇಟ್ಟಿದ್ದರು ಎಂಬುದನ್ನು ಹೇಳಬೇಕು ಎಂದು ಪ್ರಶ್ನಿಸಿದರು. ಕಾಂಗ್ರೆಸ್ಗೆ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ರಾಜು ಕಾಗೆ ಅವರನ್ನು ಯಾಕೆ ಸೇರಿಸಿಕೊಳ್ಳುತ್ತಿದ್ದರು. ಜೆಡಿಎಸ್ಗೆ ಶಕ್ತಿ ಇಲ್ಲ ಎಂದಾದರೆ ನಮ್ಮ ಪಕ್ಷದ ನಾಯಕರ ಮನೆ ಬಾಗಿಲು ಯಾಕೆ ಬಡಿಯುತ್ತಿದ್ದಾರೆ. ನನಗೆ ಎಲ್ಲ ಪಕ್ಷಗಳ ಹಣೆಬರಹ ಗೊತ್ತಿದೆ ಎಂದರು.
ನಮ್ಮ ಪಕ್ಷದಿಂದ ಮತ್ತೊಂದು ವಿಕೆಟ್ ಹೋಗುತ್ತೆ. ಜಿ.ಟಿ.ದೇವೇಗೌಡರು ಹೋಗೇ ಬಿಟ್ಟರು ಎನ್ನುತ್ತಿದ್ದಾರೆ. ಇನ್ನು ಆ ಪುಟ್ಟಣ್ಣ ಎರಡೂವರೆ ವರ್ಷದ ಹಿಂದೆಯೇ ಟೋಪಿ ಹಾಕಿ ಹೋಗಿರುವ ಗಿರಾಕಿ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಇನ್ನೂ ಇದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್ ʼರಾಯನ್ʼ ಬಿಡುಗಡೆಗೆ ಪ್ಲ್ಯಾನ್
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ