ಬಸವನಾಡಿನಲ್ಲಿ ಹೆಚ್ಚಿದ ಸಹಕಾರಿ ಸಿರಿ

ಅತ್ಯಂತ ಯಶಸ್ವಿ ಹಾದಿಯಲ್ಲಿವೆ 286 ಪಿಕೆಪಿಎಸ್‌2 ಲಕ್ಷ ಅನ್ನದಾತರಿಗೆ 822 ಕೋಟಿ ರೂ. ಕೃಷಿ ಸಾಲ

Team Udayavani, Nov 14, 2019, 11:57 AM IST

14-November-6

„ಜಿ.ಎಸ್‌. ಕಮತರ
ವಿಜಯಪುರ:
ಕನ್ನಡ ಸಾರಸ್ವತ ಲೋಕಕ್ಕೆ ವಚನ ಸಾಹಿತ್ಯ ಮೂಲಕ ಕೊಡುಗೆ ನೀಡಿರುವ ಬಸವನಾಡು ಸಹಕಾರಿ ರಂಗದಲ್ಲೂ ತನ್ನ ಛಾಪು ಮೂಡಿಸಿದೆ. ಜಿಲ್ಲೆಯಲ್ಲಿ ಹಲವು ಸಹಕಾರಿ ಬ್ಯಾಂಕ್‌ಗಳು ಶತಮಾನೋತ್ಸವ ಆಚರಿಕೊಂಡಿರುವುದೇ ಇದಕ್ಕೆ ಜೀವಂತ ನಿದರ್ಶನ.

ಜಿಲ್ಲೆಯಲ್ಲಿ ಆದರಲ್ಲೂ ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ತುರ್ತು ಆರ್ಥಿಕ ಪರಿಸ್ಥಿತಿ ಸಂದರ್ಭದಲ್ಲಿ ಹಣಕಾಸು ಸಮಸ್ಯೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ವಚನ ಪಿತಾಮಹ ಎಂದೇ ಕೀರ್ತಿ ಪಡೆದ ರಾವ್‌ ಬಹಾದ್ದೂರ್‌ ಡಾ| ಫ.ಗು. ಹಳಕಟ್ಟಿ ಅವರ ಸಾರಥ್ಯದಲ್ಲಿ ಸ್ಥಾಪಿತವಾಗಿದ್ದ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಈಗಾಗಲೇ ಶತಮಾನೋತ್ಸವ ಆಚರಿಸಿಕೊಂಡಿದ್ದು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಶತಕದ ಹೊಸ್ತಿಲಲ್ಲಿ ನಿಂತಿರುವುದು ಬಸವನಾಡು ಸಹಕಾರಿ ರಂಗಕ್ಕೆ ನೀಡಿರುವ ಅನುಪಮ ಸೇವೆಯ ಪ್ರತೀಕ.

ಜಿಲ್ಲೆಯಲ್ಲಿ 288 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ (ಪಿಕೆಪಿಎಸ್‌) ಬ್ಯಾಂಕ್‌ಗಳಲ್ಲಿ ಹಲವು ಕಾರಣಗಳಿಂದ ಹಿನ್ನಡೆ ಅನುಭವಿಸುತ್ತಿರುವ 2 ಸಂಸ್ಥೆಗಳನ್ನು ಹೊರತು ಪಡಿಸಿದರೆ ಜಿಲ್ಲೆಯ ಸಹಕಾರಿ ವ್ಯವಸ್ಥೆಯಲ್ಲಿ 286 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ಗಳು ಅತ್ಯಂತ ಯಶಸ್ವಿ ಹಾದಿಯಲ್ಲಿವೆ. 2 ಲಕ್ಷ ಅನ್ನದಾತರಿಗೆ ಪಿಕೆಪಿಎಸ್‌ ಬ್ಯಾಂಕ್‌ಗಳು ಈವರೆಗೆ 822 ಕೋಟಿ ರೂ. ಕೃಷಿ ಸಾಲ ನೀಡಿವೆ. ಬಹುತೇಕ ಸಹಕಾರಿ ಸಂಘಗಳು ಸ್ವಂತ ಕಟ್ಟಡ ಹಾಗೂ ದಾಸ್ತಾನು ಮಳಿಗೆ, ಗೋದಾಮು ಹೊಂದಿವೆ.

ಜಿಲ್ಲೆಯ ಉಕ್ಕಲಿ, ತಿಕೋಟಾ, ಹೊರ್ತಿ, ಕುದರಿಸಾಲವಾಡಗಿ, ಹಿಟ್ನಳ್ಳಿ ಸೇರಿದಂತೆ ಹಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಗರಿಷ್ಠ ಮಟ್ಟದ ಆಡಳಿತ ನಿರ್ವಹಣೆಯಿಂದ ಮಾದರಿ ಎನಿಸಿವೆ. ಇದು ಜಿಲ್ಲೆಯಲ್ಲಿನ ಸಹಕಾರಿ ವ್ಯವಸ್ಥೆಯ ಬಲವರ್ಧನೆಯ ಜೀವಂತ ನಿದರ್ಶನ.

ಕೃಷಿ ಹೊರತಾಗಿ ಇತರೆ ಸಹಕಾರಿ ವಲಯದಲ್ಲಿರುವ 1,221 ವಿವಿಧ ಸಹಕಾರಿ ಬ್ಯಾಂಕ್‌ ಗಳಲ್ಲಿ ಕಾರಣಾಂತರಗಳಿಂದ 29 ಬ್ಯಾಂಕ್‌ಗಳು ಸ್ಥಗಿತಗೊಂಡಿದ್ದರೆ, 125 ಬ್ಯಾಂಕ್‌ಗಳು ಲಿಕ್ವಿಡೇಶನ್‌ ಆಗಿವೆ. 21 ಅರ್ಬನ್‌ ಬ್ಯಾಂಕ್‌ಗಳಲ್ಲಿ 19 ಬ್ಯಾಂಕ್‌ಗಳು ಅತ್ಯಂತ ಸುಸ್ಥಿತಿಯಲ್ಲಿ ವಹಿವಾಟು ನಡೆಸುತ್ತಿವೆ. ಇದರ ಹೊರತಾಗಿಯೂ 1,350 ಸಹಕಾರಿ ಬ್ಯಾಂಕ್‌ಗಳು ಜಿಲ್ಲೆಯ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ನೆರವಾಗಿವೆ.

ಕಳೆದ ಮಾರ್ಚ್‌ ಅಂತ್ಯಕ್ಕೆ ಜಿಲ್ಲೆಯ 19 ಅರ್ಬನ್‌ ಬ್ಯಾಂಕ್‌ಗಳು 1,49,841 ಸದಸ್ಯರನ್ನು ಹೊಂದಿದ್ದು, 1,763.88 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿವೆ. 995.55 ಕೋಟಿ ರೂ. ಸಾಲ ನೀಡುವ ಮೂಲಕ ದುರ್ಬಲರ ಆರ್ಥಿಕ ಪ್ರಗತಿಗೆ ಸಹಕಾರ ನೀಡಿವೆ.

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಮಹಿಳಾ ಸ್ವಸಹಾಯ ಗುಂಪುಗಳ ಕೊಡುಗೆಯೂ ಅನನ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ 8552 ಸ್ವ-ಸಹಾಯ ಗುಂಪುಗಳ ರಚನೆಯಾಗಿದ್ದು, 2.56 ಕೋಟಿ ರೂ. ಉಳಿತಾಯ ಮಾಡಿವೆ. ಇದರಿಂದ 6,096 ಗುಂಪುಗಳಿಗೆ 66.98 ಕೋಟಿ ಸಾಲದ ಜೋಡಣೆ ಮಾಡಿದೆ. ಮತ್ತೂಂದೆಡೆ 3116 ಜಂಟಿ ಬಾಧ್ಯತೆಯೊಂದಿಗೆ ರಚನೆಯಾಗಿರುವ 3116 ಗುಂಪುಗಳಲ್ಲಿ 2782 ಗುಂಪುಗಳಿಗೆ 27.87 ಕೋಟಿ ರೂ. ಸಾಲದ ಜೋಡಣೆ ಕಲ್ಪಿಸಲಾಗಿದೆ.

ಕಳೆದ ಮಾರ್ಚ್‌ ಅಂತ್ಯಕ್ಕೆ 1025 ಸ್ವ-ಸಹಾಯ ಗುಂಪುಗಳಿಂದ 8.21 ಕೋಟಿ ರೂ., 883 ಜಂಟಿ ಬಾಧ್ಯತಾ ಗುಂಪುಗಳಿಂದ 7.24 ಕೋಟಿ ರೂ. ಸಾಲ ಬಾಕಿ ಇದೆ. ಇದಲ್ಲದೇ ಜಿಲ್ಲೆಯ ಸಹಕಾರಿ ವ್ಯವಸ್ಥೆ ಬಲವರ್ಧನೆಗೆ ಶತಮಾನದಿಂದ ಟೊಂಕ ಕಟ್ಟಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಂಪೂರ್ಣವಾಗಿ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಡಿಜಿಟಲ್‌ ಬ್ಯಾಂಕಿಂಗ್‌ನ ವಿವಿಧ ಸೇವೆ ಸೇರಿದಂತೆ ತನ್ನ ಎಲ್ಲ ಆರ್ಥಿಕ ವಹಿವಾಟನ್ನು ಗಣಕೀಕೃತ ವ್ಯವಸ್ಥೆಯಡಿ ಜಾರಿಗೊಳಿಸುವ ಮೂಲಕ ಆಧುನಿಕ ತಂತ್ರಜ್ಞಾನಕ್ಕೆ ತನ್ನನ್ನು ಒಗ್ಗಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯುತ್ತಿವೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.