ರಾಜಲಕ್ಷ್ಮಿಯ ಲೋಕಲ್‌ ಪಾಲಿಟಿಕ್ಸ್‌


Team Udayavani, Nov 15, 2019, 5:19 AM IST

ff-26

ಕೆಲವು ಹೀರೋಗಳಿಗೆ ತಮ್ಮ ಮೊದಲ ಸಿನಿಮಾ ಬಿಡುಗಡೆಗೆ ಮೊದಲೇ ಬಿರುದುಗಳು ಸಿಕ್ಕಿರುತ್ತೆ. ಅದು ಹೊಸ ವಿಷಯವೇನಲ್ಲ. ಆದರೆ, ಇಲ್ಲೊಂದು ಚಿತ್ರ ಬಿಡುಗಡೆಗೆ ಮೊದಲೇ ಒಂದಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದೆ. ಹಾಗಂತ, ಇಲ್ಲಿ ನಾಯಕನಿಗಾಗಲಿ, ನಾಯಕಿಗಾಲಿ ಅಭಿಮಾನಿಗಳು ಹುಟ್ಟುಕೊಂಡಿಲ್ಲ. ಸಿನಿಮಾಗೇ ಅಭಿಮಾನಿ ವರ್ಗವಿದೆಯಂತೆ. ಹಾಗಂತ, ಹೇಳಿಕೊಂಡಿದ್ದು ನಿರ್ಮಾಪಕ ಎಸ್‌.ಕೆ.ಮೋಹನ್‌ಕುಮಾರ್‌.

ಅವರು ಹಾಗೆ ಹೇಳಿದ್ದು, ತಮ್ಮ ನಿರ್ಮಾಣದ “ರಾಜಲಕ್ಷ್ಮಿ’ ಚಿತ್ರದ ಬಗ್ಗೆ. ಹೌದು, ಈ ಚಿತ್ರಕ್ಕೆ ಈಗಾಗಲೇ ಅಭಿಮಾನಿಗಳು ಹುಟ್ಟುಕೊಂಡಿದ್ದು, ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರಂತೆ. ಆ ಬಗ್ಗೆ ಹೇಳುವ ಮೋಹನ್‌ ಕುಮಾರ್‌, “ಚಿತ್ರ ನ.22 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೇಲರ್‌, ಹಾಡುಗಳಿಗೆ

ಎಲ್ಲೆಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೊಂದು ಹಳ್ಳಿ ಸೊಗಡಿನ ಕಥೆ. ಲವ್‌ ಇದೆ. ಮಾಸ್‌ ಫೀಲೂ ಇದೆ. ಜೊತೆಗೆ ಹಾಸ್ಯವೂ ಇದೆ. ಇವಿಷ್ಟೂ ಜಾನರ್‌ ಬೆರೆತ ಚಿತ್ರವಿದು. ಬಹುತೇಕ ಹೊಸಬರೇ ಸೇರಿ ಮಾಡಿದ ಚಿತ್ರವಿದು. ಬಿಡುಗಡೆ ಮೊದಲೇ, ಒಳ್ಳೆಯ ಮೊತ್ತಕ್ಕೆ ಮಾರಾಟದ ಮಾತುಕತೆ ನಡೆಯು­ತ್ತಿದೆ. ಅದರಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡಿದ ಚಿತ್ರತಂಡಕ್ಕೂ ಉತ್ತಮ ಬೆಂಬಲ ಸಿಕ್ಕಿದೆ. ರಿಲೀಸ್‌ ಮುನ್ನವೇ ಅಭಿಮಾನಿಗಳು ಸಿಕ್ಕಿದ್ದಾರೆ. ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಬೇಕು’ ಎಂದರು ಮೋಹನ್‌ ಕುಮಾರ್‌.

ನಿರ್ದೇಶಕ ಕಾಂತರಾಜ್‌ಗೌಡ ಅವರಿಗೆ ಇದು ಮೊದಲ ಚಿತ್ರ. ವೃತ್ತಿಯಲ್ಲಿ ಅವರು ವಕೀಲರು. ಸಿನಿಮಾ ಪ್ರೀತಿ ಇದ್ದುದರಿಂದ “ರಾಜಲಕ್ಷ್ಮಿ’ ಚಿತ್ರ ಮಾಡಿದ್ದಾರೆ. “ಈ ಚಿತ್ರಕ್ಕೆ “ರಾಜಲಕ್ಷ್ಮಿ’ ಶೀರ್ಷಿಕೆ ಇಟ್ಟಾಗ, ನಿರ್ಮಾಪಕರು ಖುಷಿಯಾಗಿ, ಇದನ್ನೇ ಫಿಕ್ಸ್‌ ಮಾಡಿ ಅಂದರು. ಆಮೇಲೆ ಗೊತ್ತಾಯ್ತು. ಇದು ಅವರ ತಂದೆ-ತಾಯಿ ಹೆಸರು ಅಂತ. ಪಕ್ಕಾ ಲವ್‌ಸ್ಟೋರಿ ಇರುವ ಈ ಕಥೆ ನೈಜ ಘಟನೆ ಹೊಂದಿದೆ. ಗ್ರಾಮೀಣ ಭಾಗದಲ್ಲೇ ನಡೆಯುವ ರಾಜಕೀಯ ಚಟುವಟಿಕೆಗಳನ್ನು ತೋರಿಸುವ ಪ್ರಯತ್ನ ಇಲ್ಲಿದೆ. ಬಹುತೇಕ ಮಂಡ್ಯ ಸುತ್ತಮುತ್ತಲ ಗ್ರಾಮಗಳಲ್ಲಿ ಚಿತ್ರೀಕರಿಸಲಾಗಿದೆ. ರಾಜಕೀಯ ವಿಷಯಗಳಿಂದ ಹೇಗೆ ಸಂಬಂಧಗಳು ಹಾಳಾಗುತ್ತವೆ. ಅದರ ಕೊರತೆ ಹೇಗೆಲ್ಲಾ ಇರುತ್ತೆ ಎಂಬುದನ್ನು ಹೇಳಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಕಾಂತರಾಜ್‌ ಗೌಡ.

ಮೀಸೆ ಮೂರ್ತಿ ಅವರಿಗೆ ಇಲ್ಲಿ ಖಳನಟನ ಪಾತ್ರ ಸಿಕ್ಕಿದೆಯಂತೆ. ನರಸಿಂಹೇಗೌಡ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ನಾಯಕಿಯ ತಂದೆ ಪಾತ್ರ ಮಾಡಿದ್ದಾಗಿ ಹೇಳಿಕೊಂಡರು.

ಚಿತ್ರಕ್ಕೆ ನವೀನ್‌ ತೀರ್ಥಹಳ್ಳಿ ಹೀರೋ. ಅವರು ಅಂದು ಗೈರು ಇದ್ದರು. ಆ ಬಗ್ಗೆ ನಿರ್ಮಾಪಕರನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, “ಅವರು ಈಗ ದೊಡ್ಡವರಾಗಿದ್ದಾರೆ’ ಎಂದರು. ಏನಾದರೂ ಸಮಸ್ಯೆ ಆಗಿದೆಯಾ ಅಂದಿದ್ದಕ್ಕೆ, “ಹೌದು ಸರ್‌, ಅವರು ಪ್ರಚಾರಕ್ಕೆ ಬರುತ್ತಿಲ್ಲ. ಕರೆದರೂ ಕಡೆಗಣಿಸುತ್ತಿದ್ದಾರೆ. ಹಾಗಾಗಿ, ನಮ್ಮ ಚಿತ್ರತಂಡದ ಜೊತೆ ಪ್ರಚಾರಕ್ಕೆ ಮುಂದಾಗುತ್ತಿದ್ದೇನೆಷ್ಟೇ ಎಂದರು.

ನಾಯಕಿ ರಶ್ಮಿ ಗೌಡ ಅವರಿಗೆ ಇದು ಮೂರನೇ ಚಿತ್ರ. ಸಾಫ್ಟ್ ವೇರ್‌ ಕ್ಷೇತ್ರದಿಂದ ಬಂದ ಅವರಿಗೆ ತಮ್ಮ ಆಸೆ ಈಡೇರುತ್ತಿರುವ ಖುಷಿ ಇದೆಯಂತೆ. ಇಲ್ಲಿ ಅವರು ಬಜಾರಿ ಹುಡುಗಿಯ ಪಾತ್ರ ಮಾಡಿದ್ದಾರಂತೆ. ಸಣ್ಣ ಹಳ್ಳಿಯೊಂದರಲ್ಲಿ ನಡೆದ ಕಥೆ ಎಲ್ಲರಿಗೂ ಇಷ್ಟವಾಗಲಿದೆ’ ಎಂದರು ರಶ್ಮಿ. ಟೆನ್ನಿಸ್‌ ಕೃಷ್ಣ ಅವರೂ ಇಲ್ಲೊಂದು ಪಾತ್ರ ಮಾಡಿದ್ದು, ಹೊಸ ತಂಡ ಎಂಬ ಭಾವನೆ ಬರಲಿಲ್ಲವಂತೆ. ಕಾರಣ, ಎಲ್ಲರೂ ಅಚ್ಚುಕಟ್ಟಾಗಿ ಕೆಲಸ ಮಾಡಿದ್ದಾರೆ. ಇದೊಂದು ಹಳ್ಳಿ ಸೊಗಡಿನ ಚಿತ್ರ ಎಂದರು ಟೆನ್ನಿಸ್‌ ಕೃಷ್ಣ.

ಚಿತ್ರಕ್ಕೆ ಎ.ಟಿ.ರವೀಶ್‌ ಸಂಗೀತವಿದೆ. ಮಾಗಡಿ ಯತೀಶ್‌ ಸಂಭಾಷಣೆ ಇದೆ. ಡಿ.ಕೆ.ದಿನೇಶ್‌ ಅವರ ಛಾಯಾಗ್ರಹಣವಿದೆ. ನಾಗರಾಜ್‌.ಎಸ್‌.ಮೂರ್ತಿ, ನೃತ್ಯವಿದೆ. ಚಿತ್ರದಲ್ಲಿ ಹೊನ್ನವಳ್ಳಿ ಕೃಷ್ಣ, ಸೀತಾರಾಮು ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.