‘ಚಂದ್ರಯಾನ-3’ ಯೋಜನೆಗೆ ಸದ್ದಿಲ್ಲದೆ ಚಾಲನೆ!

2020ರ ನವೆಂಬರ್‌ನಲ್ಲಿ ಲ್ಯಾಂಡರ್‌ ಇಳಿಸುವ ಗುರಿ ; ಚಂದ್ರಯಾನ-2ರ ವೈಫ‌ಲ್ಯ ಮೀರಲು ನಿರ್ಧಾರ

Team Udayavani, Nov 15, 2019, 6:30 AM IST

Chandrayan-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಇದೇ ವರ್ಷ ಸೆಪ್ಟೆಂಬರ್‌ನಲ್ಲಿ ‘ಚಂದ್ರಯಾನ-2’ ಯೋಜನೆಯ ಮೂಲಕ ಚಂದ್ರನ ಮೇಲ್ಮೈ ಮೇಲೆ ವಿಕ್ರಮ್‌ ಲ್ಯಾಂಡರ್‌ ಇಳಿಸುವಲ್ಲಿ ವಿಫ‌ಲವಾಗಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), 2020ರಲ್ಲಿ ಆ ನಿಟ್ಟಿನಲ್ಲಿ ಮತ್ತೂಂದು ಪ್ರಯತ್ನ ಮಾಡಲು ನಿರ್ಧರಿಸಿದೆ. ಅದಕ್ಕೆ ‘ಚಂದ್ರಯಾನ-3’ ಎಂದು ಹೆಸರಿಡಲಾಗಿದ್ದು, 2020ರ ನವೆಂಬರ್‌ ವೇಳೆಗೆ, ಚಂದ್ರನ ಮೇಲೆ ಲ್ಯಾಂಡರ್‌ ಅನ್ನು ಇಳಿಸುವ ಗುರಿಯನ್ನು ಹೊಂದಲಾಗಿದೆ. ಈ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಇಸ್ರೋ ವಿಜ್ಞಾನಿಗಳು ತಮ್ಮ ಕೆಲಸ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸತೇನಿದೆ?: ‘ಚಂದ್ರಯಾನ-2’ರಲ್ಲಿ, ಒಂದು ಆರ್ಬಿಟರ್‌, ಒಂದು ಲ್ಯಾಂಡರ್‌ (ವಿಕ್ರಮ್‌) ಹಾಗೂ ಒಂದು ರೋವರ್‌ ಅನ್ನು ಚಂದ್ರನ ಅಧ್ಯಯನಕ್ಕೆ ಕಳುಹಿಸಲಾಗಿತ್ತು. ಅದರಲ್ಲಿನ ಆರ್ಬಿಟರ್‌ ಈಗಲೂ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ, ‘ಚಂದ್ರಯಾನ-3’ರಲ್ಲಿ ಕೇವಲ ಲ್ಯಾಂಡರ್‌ ಹಾಗೂ ರೋವರ್‌ಗಳನ್ನು ಮಾತ್ರವೇ ಕಳುಹಿಸಲು ತೀರ್ಮಾನಿಸಲಾಗಿದೆ.

ತಜ್ಞರ ಸಮಿತಿಗಳು ರಚನೆ: ‘ಚಂದ್ರಯಾನ-3’ ಯೋಜನೆಯ ಮೇಲುಸ್ತುವಾರಿಗಾಗಿ ಹೊಸತೊಂದು ತಜ್ಞರುಳ್ಳ ಮುಖ್ಯ ಸಮಿತಿಯನ್ನು ರಚಿಸಲಾಗಿದೆ. ಅದರಡಿಯಲ್ಲಿ, ನಾಲ್ಕು ಉನ್ನತ ಮಟ್ಟದ ಉಪ ಸಮಿತಿಗಳನ್ನು ರಚಿಸಲಾಗಿದೆ. ಈ ಉಪ ಸಮಿತಿಗಳು, ಪ್ರೊಪಲ್ಷನ್‌, ಸೆನ್ಸರ್‌ಗಳು, ಸಮಗ್ರ ತಂತ್ರಜ್ಞಾನ, ರಾಕೆಟ್‌ ಸಾಗುವ ದಿಕ್ಕು ಸೇರಿದಂತೆ ಹಲವಾರು ವಿಭಾಗಗಳಿಗೆ ಸಂಬಂಧಿಸಿದಂತೆ ವರದಿ ನೀಡುತ್ತವೆ. ಆ ವರದಿಗಳಿಗೆ ಮುಖ್ಯ ಸಮಿತಿಯಲ್ಲಿನ ತಜ್ಞರು ಸೂಕ್ತ ಸಲಹೆ ಅಥವಾ ಮಾರ್ಗದರ್ಶನ ನೀಡುತ್ತಾರೆ. ಇದೇ ಮಂಗಳವಾರ ಮೇಲುಸ್ತುವಾರಿ ಸಮಿತಿಯ ಸದಸ್ಯರು, ತನ್ನ ಅಧೀನದಲ್ಲಿರುವ ಉಪ ಸಮಿತಿಗಳ ಸದಸ್ಯರ ಜತೆಗೆ ಮಾತುಕತೆ ನಡೆಸಿದ್ದಾರೆ.

ಲ್ಯಾಂಡರ್‌ ಬಗ್ಗೆ ಮತ್ತಷ್ಟು ನಿಖರತೆ: ಇಸ್ರೋದ ವಿಜ್ಞಾನಿಗಳು ನೀಡಿರುವ ಮಾಹಿತಿಯ ಪ್ರಕಾರ, ಕಳೆದ ಬಾರಿ ರಚಿಸಲಾಗಿದ್ದ ಲ್ಯಾಂಡರ್‌ನ ತಂತ್ರಜ್ಞಾನಕ್ಕಿಂತ ಹೆಚ್ಚು ಕರಾರುವಾಕ್‌ ಆದ ತಂತ್ರಜ್ಞಾನವನ್ನು ಸಿದ್ಧಪಡಿಸಲು ಇಸ್ರೋ ಪ್ರಯತ್ನಿಸುತ್ತಿದೆ. ಚಂದ್ರನ ಮೇಲೆ ಲ್ಯಾಂಡರ್‌ ಎಲ್ಲಿ ಇಳಿಯಬೇಕು, ಚಂದ್ರನತ್ತ ಯಾವ ದಿಕ್ಕಿನಿಂದ ಚಲಿಸಬೇಕು ಮುಂತಾದ ವಿಷಯಗಳಲ್ಲಿ ಹಿಂದಿಗಿಂತಲೂ ನಿಖರವಾದ ಸಾಧನೆ ತೋರಲು ಇಸ್ರೋ ತಂಡ ಸಜ್ಜಾಗುತ್ತಿದೆ. ಲ್ಯಾಂಡರ್‌ನ ಕಾಲುಗಳನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಯೋಜನೆ ಮಾಡಲಾಗಿದೆ. ಇದರಿಂದ, ಅತಿ ವೇಗವಾಗಿ ಸಾಗಿಬಂದು ಚಂದ್ರನಲ್ಲಿಗೆ ಇಳಿದರೂ, ಅದರ ಕಾಲಿಗೆ ಯಾವುದೇ ಧಕ್ಕೆಯಾಗಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೊಸ ಮಾದರಿಯ ಲ್ಯಾಂಡರ್‌?: ಚಂದ್ರಯಾನ-3ರಲ್ಲಿ ಈ ಬಾರಿ ಮಾದರಿಯ ಹೊಸ ಲ್ಯಾಂಡರ್‌ ಹಾಗೂ ರೋವರ್‌ಗಳನ್ನು ನಿರ್ಮಿಸಲು ಇಸ್ರೋ ಉದ್ದೇಶಿಸಿದೆ. ಹೊಸ ವಿನ್ಯಾಸದ ಲ್ಯಾಂಡರ್‌, ರೋವರ್‌ಗಳನ್ನು ರೂಪಿಸಲು ತೀರ್ಮಾನಿಸಲಾಗಿದೆ. ಇನ್ನು, ಲ್ಯಾಂಡರ್‌ನಲ್ಲಿ ಅಳವಡಿಸಬಹುದಾದ ಪರಿಕರಗಳು ಎಷ್ಟಿರಬೇಕೆಂಬುದರ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.