ಪ್ರವಾಸಿ ತಾಣ ಬೀದರಗೆ ಗೈಡ್‌ ಕೊರತೆ

ಬೀದರನಲ್ಲಿವೆ ಪ್ರಾಚೀನ ಕೋಟೆ-ಸ್ಮಾರಕಗಳುತಾಣಗಳ ಇತಿಹಾಸ ತಿಳಿಸುವವರೇ ಇಲ್ಲದೇಶ-ವಿದೇಶಿ ಪ್ರವಾಸಿಗರ ಭೇಟಿ

Team Udayavani, Nov 15, 2019, 10:45 AM IST

15-November-1

„ಶಶಿಕಾಂತ ಬಂಬುಳಗೆ
ಬೀದರ:
ಗಡಿ ನಾಡು ಬೀದರ ಚಾರಿತ್ರಿಕ ಕೋಟೆ ಕೊತ್ತಲುಗಳು, ಪಾರಂಪರಿಕ ಸ್ಮಾರಕಗಳನ್ನು ಹೊಂದಿರುವ ಐತಿಹಾಸಿಕ ಪ್ರವಾಸಿ ನಗರ. ಇಲ್ಲಿನ ವೈಭವ ಕಣ್ತುಂಬಿಕೊಳ್ಳಲು ದೇಶ ಮಾತ್ರವಲ್ಲ ವಿದೇಶಿಗರು ಭೇಟಿ ನೀಡುತ್ತಾರೆ. ಆದರೆ, ಗೈಡ್‌ ಗಳ ಕೊರತೆಯಿಂದ ಸೂಕ್ತ ಮಾಹಿತಿ ಸಿಗದಿರುವುದು ಪ್ರವಾಸಿಗರಿಗೆ ನಿರಾಶೆಯನ್ನುಂಟು ಮಾಡುತ್ತಿದೆ.

ಕರುನಾಡಿನ ಮುಕುಟ ಬೀದರ ಎಂದಾಕ್ಷಣ ಅದ್ಭುತ ಪ್ರವಾಸಿ ತಾಣವೆಂದು ನೆನಪಾಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿಯೂ ಒಂದಿಲ್ಲೊಂದು ಸ್ಮಾರಕಗಳು, ಅಳಿದುಳಿದ ಪಳೆಯುಳಿಕೆಗಳು ಇಂದಿಗೂ ಪುರಾತನ ಇತಿಹಾಸ ಮತ್ತು ಅರಸರ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತಿವೆ. ಪ್ರತಿ ತಾಣಗಳು ತನ್ನದೇಯಾದ ಕಥೆ ಹೇಳುತ್ತವೆ. ಇದನ್ನು ಅರಿತುಕೊಳ್ಳಲು ದೇಶ-ವಿದೇಶದ ಸಂಶೋಧನಾ ವಿದ್ಯಾರ್ಥಿಗಳು, ತಜ್ಞರು ಮತ್ತು ಪ್ರವಾಸಿಗರು ನಿತ್ಯ ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ, ಇವರಿಗೆ ಮಹತ್ವ, ಹಿನ್ನೆಲೆಯನ್ನು ತಿಳಿಸುವವರು ಯಾರೂ ಇಲ್ಲದಂತಾಗಿದೆ.

ಕೇಂದ್ರ ಪುರಾತತ್ವ ಇಲಾಖೆಯ ಅಧಿಧೀನದ ರಾಷ್ಟ್ರೀಯ ಸಂರಕ್ಷಿತ ಸ್ಮಾರಕವಾಗಿರುವ ಬೀದರನ ಬಹುಮನಿ ಕೋಟೆಯು ದಕ್ಷಿಣ ಭಾರತದಲ್ಲೇ ಸುಭದ್ರ ಹಾಗೂ ಭವ್ಯ ಕೋಟೆ. ಕೋಟೆ ಒಳಾಂಗಣದಲ್ಲಿ ಅದ್ಭುತ ಉದ್ಯಾನ ಹಸಿರು ಹೊದಿಸಿದಂತಾಗಿದ್ದು, ಮತ್ತಷ್ಟು ಮೆರಗನ್ನು ಹೆಚ್ಚಿಸಿದೆ. ಆದರ್ಶ ಸ್ಮಾರಕ ಪಟ್ಟಿ ಹಾಗೂ ವರ್ಲ್ಡ್ ಮೋನುಮೆಂಟ್‌ ಫಂಡ್‌ಗೆ ಆಯ್ಕೆಯಾಗಿರುವ ಬಹುಮನಿ ಕೋಟೆ ಹಲವು ಸ್ಮಾರಕಗಳನ್ನು ತನ್ನ ತೆಕ್ಕೆಯಲ್ಲಿ ಹಿಡಿದಿಟ್ಟುಕೊಂಡಿದೆ.

ಅಷ್ಟೇ ಅಲ್ಲ ಗವಾನ್‌ ಮದರಸಾ, ಬರೀದಶಾಹಿ ಗುಂಬಜ್‌ಗಳು, ಚೌಬಾರಾ, ಚೌಕಂಡಿ, ಅಷ್ಟೂರಿನ ಪಾಳು ಬಿದ್ದ ಗುಂಬಜ್‌ಗಳು, ಜಲಸಂಗಿ, ಉಮಾಪೂರ ಮತ್ತು ನಾರಾಯಣಪೂರದ ದೇವಸ್ಥಾನ ಸೇರಿದಂತೆ ಅನೇಕ ತಾಣಗಳು ತನ್ನದೇಯಾದ ಪರಂಪರೆ ಹೊಂದಿದ್ದು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಇವುಗಳನ್ನು ಹುಡುಕಿಕೊಂಡು ಬರುವ ಪ್ರವಾಸಿಗರು ವೀಕ್ಷಣೆಗಾಗಿ ಹರಸಾಹಸ ಪಡುತ್ತಿದ್ದಾರೆ. ಹೈದ್ರಾಬಾದ್‌ ಸಮೀಪದಲ್ಲಿರುವುದರಿಂದ ಅಲ್ಲಿನ ಮತ್ತು ಅಲ್ಲಿಗೆ ಬರುವ ವಿದೇಶಿಗರು ಬೀದರಗೆ ಭೇಟಿ ನೀಡುತ್ತಾರೆ. ಅಮೆರಿಕ, ಫ್ರಾನ್ಸ್‌, ಬೆಲ್ಜಿಯಂ, ಶ್ರೀಲಂಕಾ ಸೇರಿ ಹಲವು ದೇಶದ ಪ್ರವಾಸಿಗರ ತಂಡ ಬರುತ್ತದೆ.

ಕೈಯಲ್ಲೊಂದು ಮಾಹಿತಿ ಪುಸ್ತಕ, ಕೊರಳಲ್ಲಿ ಕ್ಯಾಮೆರಾ ಹಾಕಿಕೊಂಡು ನಗರದಲ್ಲಿ ಸುತ್ತಾಡುವ ಪ್ರವಾಸಿಗರಿಗೆ ಮಾಹಿತಿ ಕೊಡಬಲ್ಲ ಗೈಡ್‌ಗಳು ಇಲ್ಲದ ಕಾರಣ ಏನು ನೋಡಬೇಕೆಂಬ ಗೊಂದಲದಿಂದ ಪರದಾಡಿ, ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವೊಮ್ಮೆ ಹೈದರಾಬಾದನಿಂದ ಗೈಡ್‌ಗಳನ್ನು ಜತೆಯಲ್ಲಿ ಕರೆದುಕೊಂಡು ಬಂದರೂ ತಪ್ಪು ಮಾಹಿತಿ ನೀಡುತ್ತಿರುವ ಮಾತುಗಳು ಕೇಳಿಬಂದಿವೆ.

ಹಿಂದೆ ಜಿಲ್ಲಾ ಧಿಕಾರಿಯಾಗಿದ್ದ ಡಾ| ಪಿ.ಸಿ. ಜಾಫರ್‌ ಅವರು ಗೈಡ್‌ಗಳ ಕೊರತೆ ನೀಗಿಸಲು ಮುಂದಾಗಿದ್ದರು. ಎಸ್‌ಸಿ-ಎಸ್‌ಟಿಯ 50 ಯುವಕರಿಗೆ ಗೈಡ್‌ಗಳ ತರಬೇತಿ ಕಲ್ಪಿಸಿಕೊಟ್ಟು, ಆ ಮೂಲಕ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು. ಆದರೆ, ತರಬೇತಿ ಪಡೆದವರಲ್ಲಿ ಯಾರೂ ಗೈಡ್‌ಗಳಾಗಿ ವೃತ್ತಿ ನಡೆಸಲು ಆಸಕ್ತಿ ತೋರಲೇ ಇಲ್ಲ. ನಂತರ ಜಿಲ್ಲಾಡಳಿತ ಅಥವಾ ಪುರಾತತ್ವ ಇಲಾಖೆ ಆಗಲಿ ಇಂಥ ಯಾವುದೇ ಪ್ರಯತ್ನಕ್ಕೆ ಮುಂದಾಗಲಿಲ್ಲ. ಹಾಗಾಗಿ ಗೈಡ್‌ಗಳ ಕೊರತೆ ಹಾಗೆಯೇ ಮುಂದುವರೆದಿದೆ.

ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲ ಅವಕಾಶ ಹೊಂದಿರುವ ಬೀದರನಲ್ಲಿ ಗೈಡ್‌ಗಳ ಕೊರತೆಯೂ ಸಹ ತೊಡಕಾಡುತ್ತಿದೆ. ಅಧಿ ಕಾರಿಗಳ ನಿರ್ಲಕ್ಷ್ಯದಿಂದ ಬೀದರ ಕುರಿತು ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯೂ ಇದೆ. ಈಗಲೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ. ರಾಜ್ಯದ ಇತರ ಪಾರಂಪರಿಕ ತಾಣಗಳಂತೆ ಬೀದರನಲ್ಲೂ ಗೈಡ್‌ಗಳನ್ನು ನೇಮಿಸಬೇಕಿದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.