ನರೇಗಲ್ಲದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಎಂದು?


Team Udayavani, Nov 15, 2019, 1:16 PM IST

gadaga-tdy-3

ನರೇಗಲ್ಲ: ಗಜೇಂದ್ರಗಡ ತಾಲೂಕಿನಲ್ಲಿಯೇ ದೊಡ್ಡ ಪಟ್ಟಣವಾಗಿರುವ ನರೇಗಲ್ಲದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ.

ಇದಕ್ಕೆ ಹೊಂದಿಕೊಂಡಿರುವ ಮಜರೇ ಗ್ರಾಮಗಳಾದ ಕೊಚಲಾಪುರ, ದ್ಯಾಂಪುರ, ಮಲ್ಲಾಪುರ, ತೋಟಗಂಟಿ, ಕೋಡಿಕೊಪ್ಪ ಸೇರಿದಂತೆ ಐದು ಗ್ರಾಮಗಳು ಹಾಗೂ ಪಟ್ಟಣ ಸೇರಿದಂತೆ ತಾಲೂಕಿನಲ್ಲಿಯೇ ದೊಡ್ಡ ಪಟ್ಟಣ ಅಲ್ಲದೇ ವಾಣಿಜ್ಯ ವ್ಯಾಪಾರಿ ಕೇಂದ್ರವಾಗಿದೆ. ಇದು ದಿನದಿಂದ ಬೆಳೆಯುತ್ತಿರುವ ಪಟ್ಟಣವಾಗಿದೆ. ಇಂತಹ ಪಟ್ಟಣಕ್ಕೆ ರಸ್ತೆಗಳಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಹಾಗೂ ಪಟ್ಟಣದ ಮುಖ್ಯ ವ್ಯಾಪಾರಿ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳ ಅವಶ್ಯಕತೆಯಿದೆ.

ಪಟ್ಟಣಕ್ಕೆ ನಿತ್ಯ ರೋಣ ತಾಲೂಕಿನ ಅಬ್ಬಿಗೇರಿ, ಯರೇಬೇಲೇರಿ, ಡ.ಸ.ಹಡಗಲಿ, ನಾಗರಾಳ, ಗುಜಮಾಗಡಿ ಹಾಗೂ ಗಜೇಂದ್ರಗಡ ತಾಲೂಕಿಗೆ ಬರುವ ನಿಡಗುಂದಿ, ಹಾಲಕೇರಿ, ನಿಡಗುಂದಿಕೊಪ್ಪ, ಕಳಕಾಪುರ ಮತ್ತು ಗದಗ ತಾಲೂಕಿಗೆ ಬರುವ ಕೋಟುಮಚಗಿ, ನಾರಾಯಣಪುರ, ಕಣಗಿನಹಾಳ ಮತ್ತು ಯಲಬುರ್ಗಾ ತಾಲೂಕಿನ ದ್ಯಾಮಪುರ, ತೊಂಡಿಹಾಳ, ಬಂಡಿಹಾಳ, ಚಿಕ್ಕೇನಕೊಪ್ಪ, ಯರೇಹಂಚಿನಾಳ ಸೇರಿದಂತೆ ವಿವಿಧ ಗ್ರಾಮಗಳ ಜನತೆ ನಿತ್ಯ ನರೇಗಲ್ಲ ಪಟ್ಟಣಕ್ಕೆ ಸಂತೆ ಸೇರಿದಂತೆ ವಿವಿಧ ಕಾರ್ಯಗಳಿಗೆ ಬಂದು ಹೋಗುವುದರಿಂದ ಇದೊಂದು ವ್ಯಾಪಾರಿ ಕೇಂದ್ರವಾಗಿದೆ.  ಇಂತಹ ಪಟ್ಟಣದಲ್ಲಿ ಒಂದು ಸಿಸಿ ಕ್ಯಾಮರಾ ಇಲ್ಲದಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಎಲ್ಲೆಲ್ಲಿ ಬೇಕು ಸಿಸಿ ಕ್ಯಾಮರಾ: ಪಟ್ಟಣದ ಹಳೆಯ ಬಸ್‌ ನಿಲ್ದಾಣ, ಸಂತೆ ಬಜಾರ, ಹೊಸ ಬಸ್‌ ನಿಲ್ದಾಣ ಹತ್ತಿರ, ಅನ್ನದಾನೇಶ್ವರ ಕಾಲೇಜು ರಸ್ತೆ, ಕೋಟುಮಚಗಿ ರಸ್ತೆ, ಜಕ್ಕಲಿ ರಸ್ತೆ, ವೀರಪ್ಪಜ್ಜನ ಮಠದ ರಸ್ತೆ, ಪೋಸ್ಟ್‌ ಆಫೀಸ್‌ ಹತ್ತಿರ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಸೇರಿದಂತೆ ಪಟ್ಟಣದ ವಿವಿಧ ಕಡೆಗಳಲ್ಲಿ ಸೇರಿದಂತೆ ಪಟ್ಟಣದಲ್ಲಿ ಜನತೆ ಸೇರುವ ವಿವಿಧ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಯು ಅವಶ್ಯವಾಗಿದೆ ಎಂದು ಪಟ್ಟಣದ ಜನತೆಯ ಒತ್ತಾಯವಾಗಿದೆ.

ಕಾಳಜಿ ಬೇಕು: ಪಟ್ಟಣದಲ್ಲಿ ಸಾಕಷ್ಟು ಜನರು ಸೇರುವ ಪ್ರದೇಶಗಳಲ್ಲಿ ಮೊಬೈಲ್‌ ಹಾಗೂ ಹಣ ಕಳ್ಳತನವಾಗಿದೆ. ಆದರೆ ಯಾರು ಪೊಲೀಸ್‌ ಠಾಣಿಗೆ ಹೋಗಿ ಪ್ರಕರಣ ದಾಖಲಿಸಿಲ್ಲ. ಕಾರಣ ಇಂತಹ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿದರೇ ಕಳ್ಳರನ್ನು ಪತ್ತೆ ಹಚ್ಚುವುದು ಸುಲಭ. ಆದರೆ, ಸಿಸಿ ಕ್ಯಾಮರಾ ಇಲ್ಲದಿರುವುದು ಇಂತಹ ಕೃತ್ಯಗಳಿಗೆ ಸಹಾಯವಾಗಿದೆ.

ಪಟ್ಟಣದಲ್ಲಿ ಇತ್ತೀಚೆಗೆ ಯಾವುದೇ ಕಳ್ಳತನವಾಗಿಲ್ಲ. ಸುರಕ್ಷತೆಯ ದೃಷ್ಟಿಯಿಂದ ಇಲ್ಲಿನ ಪ್ರಮುಖ ರಸ್ತೆ ಹಾಗೂ ಓಣಿಗಳಲ್ಲಿ ಮುನ್ನೆಚ್ಚರಿಕೆಯಾಗಿ ಸಿಸಿ ಕ್ಯಾಮರಾ ಅಳವಡಿಸುವುದು ಅವಶ್ಯಕವಾಗಿದೆ. ಇದರಿಂದ ಪಟ್ಟಣದಲ್ಲಿ ನಡೆಯುವ ಟ್ರಾಫಿಕ್‌ ಹಾಗೂ ಸಣ್ಣ ಪುಟ್ಟ ಕಳ್ಳರನ್ನು ಹಿಡಿಯುವುದಕ್ಕೆ ಅನುಕೂಲವಾಗುತ್ತದೆ. ರಾಜೇಶ ಬಟಗುರ್ಕಿ, ಪಿಎಸ್‌ಐ.

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.