ಮಾರಾಟದ ಮನೆಯಲ್ಲಿ ಅನ್‌ಲಿಮಿಟೆಡ್‌ ಕಾಮಿಡಿ

ಚಿತ್ರ ವಿಮರ್ಶೆ

Team Udayavani, Nov 16, 2019, 5:01 AM IST

Mane-maratkide

“ಮನುಷ್ಯನ ಕನಸುಗಳಿಗಿಂತ, ಅವನು ಕಟ್ಟಿರುವ ಗೋಡೆಗಳಿಗೇ ಬೆಲೆ ಜಾಸ್ತಿ…’ ಹೀಗೆ ಈ ಡೈಲಾಗ್‌ ಹೇಳುವ ವ್ಯಕ್ತಿ, ಬೆಚ್ಚಿಬೀಳುವ ಘಟನೆಯೊಂದಕ್ಕೆ ಕಾರಣನಾಗಿರುತ್ತಾನೆ. ಅದರ ಹಿಂದೆ ನೋವು, ಪಶ್ಚತ್ತಾಪವೂ ಇರುತ್ತೆ. ಆ ಭಯಾನಕ ಘಟನೆ ಬಗ್ಗೆ ತಿಳಿಯುವ ಆಸಕ್ತಿ ಇದ್ದರೆ, ಈ ಚಿತ್ರ ನೋಡಬೇಕು. ಇದು ತೆಲುಗಿನ “ಆನಂದೋ ಬ್ರಹ್ಮ’ ಚಿತ್ರದ ಅವತರಣಿಕೆ. ರೀಮೇಕ್‌ ಆಗಿದ್ದರೂ, ಇಲ್ಲಿ ಆ ಛಾಯೆ ಕಾಣದಂತೆ ಸಿನಿಮಾದುದ್ದಕ್ಕೂ ಭರಪೂರ ನಗುವಿನಲ್ಲೇ ಪ್ರೇಕ್ಷಕರನ್ನು ತೇಲಾಡಿಸಬೇಕೆಂಬ ನಿರ್ದೇಶಕರ ಪ್ರಯತ್ನ ಇಲ್ಲಿ ಸಾಕಾರಗೊಂಡಿದೆ.

ಇದು ಕಾಮಿಡಿ-ಹಾರರ್‌ ಚಿತ್ರ. ಹಾಗಾಗಿ, ಇಲ್ಲಿ ಹಾರರ್‌ ಫೀಲ್‌ಗಿಂತ ಹಾಸ್ಯದ ಪಾಲೇ ಹೆಚ್ಚು. ದೆವ್ವಗಳೆಂದ ಮೇಲೆ ಭಯ ಸಹಜ. ಆದರೆ, ಇಲ್ಲಿ ತೆರೆ ಮೇಲೆ ಇರೋರಿಗೂ, ತೆರೆ ಮುಂದೆ ಇರೋರಿಗೂ ಆತ್ಮಗಳು ಉಣಬಡಿಸುವ ಹಾಸ್ಯದೌತಣದ ಅನುಭವ ಅನನ್ಯ. ನಿರ್ದೇಶಕರು ಸಾಕಷ್ಟು ರಿಸ್ಕ್ನಲ್ಲಿಯೇ ಕೆಲಸ ಮಾಡಿದ್ದಾರೆ ಎಂಬುದಕ್ಕೆ ತೆರೆಮೇಲಿನ “ಸಾಹಸ’ ಗೊತ್ತಾಗುತ್ತೆ. ಅದೆಷ್ಟೇ ರಿಸ್ಕ್ ತಗೊಂಡಿದ್ದರೂ, ನೋಡುಗರ ಮೊಗದಲ್ಲಿ ಮೂಡುವ ನಗುವಿನ ಮುಂದೆ ಏನೂ ಇಲ್ಲ.

ಇಲ್ಲಿ ನಗುವೊಂದೇ ಪ್ರಧಾನ. ಮಿಕ್ಕಿದ್ದು ಸಮಾಧಾನ. ಕಾಮಿಡಿ-ಹಾರರ್‌ ಸಿನಿಮಾಗಳು ಬಂದಿವೆಯಾದರೂ, ಹೇಳಿಕೊಳ್ಳುವಷ್ಟು ನಗುವಿಗೆ ಕಾರಣವಾಗಿರಲಿಲ್ಲ. ಇಲ್ಲಿ ನಗುವಿಗೆ ಹೆಚ್ಚು ಜಾಗವಿದೆ. ಹಾಗಾಗಿ, ಆರಂಭದಿಂದ ಅಂತ್ಯದವರೆಗೂ ನಗುವಿನ ಹೂರಣ ಹೊರತು ಬೇರೇನೂ ಇಲ್ಲ. ಮನರಂಜನೆಯ ಕೊರತೆ ಇಲ್ಲದಂತೆ ಚಿತ್ರ ಮಾಡಿರುವ ನಿರ್ದೇಶಕರು, ಆರಂಭದಲ್ಲಿ ಇನ್ನಷ್ಟು ಚಿತ್ರಕಥೆಯ ಜೊತೆಗೆ ವೇಗಕ್ಕೆ ಒತ್ತು ಕೊಡಬೇಕಿತ್ತು. ಇಲ್ಲಿ ಒಟ್ಟಿಗೆ ನಾಲ್ವರು ಹಾಸ್ಯ ನಟರರನ್ನು ನೋಡುವ ಅವಕಾಶವಿದೆ.

ಅವರಿದ್ದರೆ ಕೇಳಬೇಕೆ. ಪ್ರತಿಯೊಬ್ಬರಲ್ಲೂ ನಗಿಸುವ ಗುಣ ಹೇರಳವಾಗಿದೆ. ಎಲ್ಲರೂ ಜಿದ್ದಿಗೆ ಬಿದ್ದವರಂತೆ, ನಗಿಸುವಲ್ಲಿ ಯಶಸ್ವಿ. ಇಂತಹ ಚಿತ್ರಗಳಿಗೆ ಮಾತುಗಳ ಜೊತೆಗೆ ಹಾವ-ಭಾವ ಮುಖ್ಯ. ಅದು ಸಾಧ್ಯವಾಗಿರುವುದಕ್ಕೆ ಇಲ್ಲಿ ಅಪ್ಪಟ ಮನರಂಜನೆ ಸಿಕ್ಕಿದೆ. ನಗಿಸುವ ಗುಣಗಳು ಹೇರಳವಾಗಿರುವುದರಿಂದ, ಕೊಟ್ಟ ಕಾಸಿಗೆ ಮೋಸವಿಲ್ಲ. ನೋಡುಗರು ನಗದಿರಲು ಸಾಧ್ಯವೂ ಇಲ್ಲ. ಅಷ್ಟರ ಮಟ್ಟಿಗೆ ನಿರೂಪಣೆ, ಸಂಭಾಷಣೆ ಮತ್ತು ಹಿನ್ನೆಲೆ ಸಂಗೀತ ದೃಶ್ಯಗಳಿಗೆ ಸಾಥ್‌ ಕೊಟ್ಟಿವೆ.

ಎಲ್ಲಕ್ಕಿಂತಲೂ ಹೆಚ್ಚಾಗಿ ಇಲ್ಲಿ ದೆವ್ವಗಳನ್ನೇ ಹೆದರಿಸುವ ಹಾಸ್ಯ ನಟರ ಹಾವ-ಭಾವ ಚಿತ್ರದ ಆಕರ್ಷಣೆ. ವಿಶೇಷವೆಂದರೆ ಒಂದೇ ಮನೆಯಲ್ಲಿ ನಡೆಯುವ ಕಥೆಯಲ್ಲಿ ಸಣ್ಣದ್ದೊಂದು ಭಯ, ದೊಡ್ಡಮಟ್ಟದ ನಗು, ಮರುಕ ಹುಟ್ಟಿಸುವ ಘಟನೆ, ಕಾಡುವ ನೋವು ಇವೆಲ್ಲವನ್ನೂ ಕಾಣಬಹುದು. ಎಲ್ಲವನ್ನೂ ಅಷ್ಟೇ ಹದವಾಗಿ ಬೆರಸಿರುವುದರಿಂದ ಆ ಮನೆಯಲ್ಲಿ ಎಲ್ಲವೂ ರುಚಿಸುತ್ತವೆ. ಕಥೆ ತೀರಾ ಸಿಂಪಲ್‌. ಚಿತ್ರಕಥೆ ಮತ್ತು ಸಂಭಾಷಣೆ ಇಲ್ಲಿ ಜೀವಾಳ. ಪ್ರತಿ ಪಾತ್ರಗಳ ಅಭಿನಯ ಇಲ್ಲಿನ ಜೀವಾಳ. ಅದು ಶ್ರವಣ ನಿವಾಸ.

ತನ್ನ ಹೆತ್ತವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ದುಬೈನಲ್ಲಿ ವಾಸಿಸುವ ಮಗ ಇಂಡಿಯಾಗೆ ಬಂದು ತನ್ನ ಮನೆ ಮಾರಾಟ ಮಾಡಲು ಮುಂದಾಗುತ್ತಾನೆ. ಅಲ್ಲೊಂದಷ್ಟು ಕಾಣದ ಕೈಗಳು, ಮನೆಯಲ್ಲಿ ದೆವ್ವಗಳಿವೆ ಎಂಬ ಸುದ್ದಿ ಹಬ್ಬಿಸಿ, 5 ಕೋಟಿ ಬೆಲೆ ಬಾಳುವ ಮನೆಯನ್ನು 1 ಕೋಟಿಗೆ ಫಿಕ್ಸ್‌ ಮಾಡುತ್ತವೆ. ಆಗ ಅಲ್ಲಿ ಮಜವಾದ ಡ್ರಾಮ ಶುರುವಾಗುತ್ತೆ. ಅದೇ ಚಿತ್ರದ ಸಸ್ಪೆನ್ಸ್‌. ಆ ಮನೆಯಲ್ಲಿ ನಿಜಕ್ಕೂ ದೆವ್ವಗಳಿವೆಯಾ?

ಇದ್ದರೂ ಆ ಆತ್ಮಗಳು ಯಾಕೆ ಅಲ್ಲಿವೆ, ಆ ಮನೆಗೆ ಹೋದವರನ್ನು ಅವು ಬೆಚ್ಚಿಬೀಳಿಸುತ್ತವೆಯಾ, ಇಲ್ಲವೋ ಎಂಬ ಕುತೂಹಲವಿದ್ದರೆ, ಚಿತ್ರ ನೋಡಬೇಕು. ಸಾಧುಕೋಕಿಲ ಅವರು ಎಂದಿಗಿಂತಲೂ ತುಸು ಹೆಚ್ಚಾಗಿಯೇ ನಗಿಸುವ ಮೂಲಕ ಇಷ್ಟವಾಗುತ್ತಾರೆ. ಚಿಕ್ಕಣ್ಣ ಕೂಡ ವಿಶೇಷ ಗಮನ ಸೆಳೆಯುತ್ತಾರೆ. ಇಡೀ ಸಿನಿಮಾದಲ್ಲಿ ರವಿಶಂಕರ್‌ಗೌಡ ಅವರ ಪಾತ್ರದಲ್ಲಿ ಒಂದು ರೀತಿಯ ಮಜ ಅಡಗಿದ್ದರೆ, “ಕುರಿ’ ಪ್ರತಾಪ್‌ ಪಾತ್ರದಲ್ಲಿ ಹೊಸತನ ತುಂಬಿದೆ. ಇವರಿಬ್ಬರೂ ನಗಿಸುವಲ್ಲಿ ಜಿದ್ದಿಗೆ ಬಿದ್ದವರಂತೆ ನಟಿಸಿದ್ದಾರೆ.

ಹಾಗಾಗಿ, ಆ ಮನೆಯ ಆಕರ್ಷಣೆ ಇವರೆನ್ನಬಹುದು. ಉಳಿದಂತೆ ಆತ್ಮಗಳಾಗಿ ಶಿವರಾಮ್‌, ಶ್ರುತಿಹರಿಹರನ್‌, ಗಿರಿ ಮತ್ತು ಬೇಬಿ ಅಶ್ವಿ‌ತ ಇಷ್ಟವಾಗುತ್ತಾರೆ. ರಾಜೇಶ್‌ ನಟರಂಗ ಯಾರೂ ಊಹಿಸದ ಪಾತ್ರ ನಿರ್ವಹಿಸಿ ಸೈ ಎನಿಸಿಕೊಳ್ಳುತ್ತಾರೆ. “ನೀನಾಸಂ’ ಅಶ್ವತ್ಥ್ ಸೇರಿದಂತೆ ತೆರೆ ಮೇಲೆ ಮೂಡುವ ಪ್ರತಿ ಪಾತ್ರಕ್ಕೂ ವಿಶೇಷತೆ ಇದೆ. ಹಾರರ್‌ ಕಾಮಿಡಿ ಚಿತ್ರಗಳಿಗೆ ಹಿನ್ನೆಲೆ ಸಂಗೀತ ಮತ್ತು ಹಾಡು ಜೀವಾಳವಾಗಿರಬೇಕು. ಅದನ್ನು ಅಭಿಮನ್‌ ರಾಯ್‌ ನೀಗಿಸಿದ್ದಾರೆ. ಸುರೇಶ್‌ ಬಾಬು ಅವರ ಛಾಯಾಗ್ರಹಣ ಕೂಡ ನಗುವಿನ ಸೌಂದರ್ಯ ಹೆಚ್ಚಿಸಿದೆ.

ಚಿತ್ರ: ಮನೆ ಮಾರಾಟಕ್ಕಿದೆ
ನಿರ್ಮಾಣ: ಎಸ್‌.ವಿ.ಬಾಬು
ನಿರ್ದೇಶನ: ಮಂಜು ಸ್ವರಾಜ್‌
ತಾರಾಗಣ: ಸಾಧುಕೋಕಿಲ, ಚಿಕ್ಕಣ್ಣ, ರವಿಶಂಕರ್‌ಗೌಡ, ಕುರಿ ಪ್ರತಾಪ್‌, ರಾಜೇಶ್‌, ಶಿವರಾಂ, ಶ್ರುತಿಹರಿಹರನ್‌, ಗಿರಿ ಇತರರು.

* ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.