ದೇಶದ ಏಳ್ಗೆ ಮಕ್ಕಳ ಕೈಯಲ್ಲಿದೆ: ಬೆಳಗಲಿ
ಮಕ್ಕಳ ಆಸೆ-ನಿರ್ಧಾರಕ್ಕೆ ಬೆಲೆ ಕೊಡಿಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಲು ಕರೆ
Team Udayavani, Nov 16, 2019, 1:06 PM IST
ವಿಜಯಪುರ: ದೇಶದ ಏಳ್ಗೆ ಮಕ್ಕಳ ಕೈಯಲ್ಲಿದೆ. ನಾವೆಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಬೇಕಾಗಿದೆ. ದೇಶದ ಅಭಿವೃದ್ಧಿಗೆ ಪ್ರತಿಜ್ಞೆ ಮಾಡಬೇಕಿದೆ ಎಂದು ಇಟ್ಟಂಗಿಹಾಳ ಎಕ್ಸಲಂಟ್ ಶಾಲೆ ವಿದ್ಯಾರ್ಥಿ ಪ್ರತಿನಿಧಿ ಅಭಿನಂದನ ಬೆಳಗಲಿ ಹೇಳಿದರು.
ಇಟ್ಟಂಗಿಹಾಳದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೂ ದೇಶವನ್ನು ಸುಭದ್ರವಾಗಿ ಕಟ್ಟುವ ಕನಸುಗಳಿದ್ದು, ಅವುಗಳ ಸಾಕಾರಕ್ಕೆ ಪರಿಶ್ರಮ ಅಗತ್ಯ ಎಂದರು.
ವಿದ್ಯಾರ್ಥಿ ಪ್ರತಿನಿಧಿ ವರದಾ ನೀಲಮಣಿಗಾರ ಮಾತನಾಡಿ, ದೇಶದ ಮೊದಲ ಪ್ರಧಾನಿಯಾಗಿದ್ದ ಜವಹಾರಲಾಲ್ ನೆಹರು ಅವರು ಮಕ್ಕಳ ಮೇಲಿದ್ದ ತಮ್ಮ ಅಪಾರ ಪ್ರೀತಿಯನ್ನು ಮಕ್ಕಳ ದಿನಾಚರಣೆಗೆ ಮೀಸಲಿಡುವ ಮೂಲಕ ಮಕ್ಕಳಿಗೆ ವಿಶೇಷ ಗೌರವ ನೀಡಿದ್ದು, ನಾವೆಲ್ಲ ಕೃತಜ್ಞರಾಗಿರಬೇಕು. ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ ಎಂಬ ವಿಶ್ವಾಸ ಇರಿಸಿಕೊಂಡಿದ್ದ ನೆಹರು ಅವರು, ಮಕ್ಕಳ ದಿನಾಚರಣೆ ಮೂಲಕ ಭವಿಷ್ಯದ ನಾಗರಿಕರಲ್ಲಿ ವಿಶೇಷವಾಗಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದರು ಎಂದು ಬಣ್ಣಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿ ಪ್ರತಿನಿಧಿ ಸ್ನೇಹಾ ಯೆಚ್ಚಿ ಮಾತನಾಡಿ, ಮಕ್ಕಳು ತಂದೆ-ತಾಯಿ ಹಾಗೂ ಗುರುವಿನ ಮಾರ್ಗದರ್ಶನದಲ್ಲಿ ನಡೆಯಬೇಕು. ಉತ್ತಮ ಗುರಿ ಹೊಂದಿ ಸತತ ಪ್ರಯತ್ನದೊಂದಿಗೆ ಮುನ್ನಡೆಯಬೇಕು ಎಂದರು.
ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಮಂತ ಪಡಸಲಗಿ, ಪ್ರತೀಕ್ಷಾ ಗದ್ದಿಗಿಮಠ, ಅಭಿಷೇಕ ಹಡಲಸಂಗ, ಚೇತನಾ ಬಗಲಿ, ಪೂರ್ವಿ ತಳವಾರ, ಸಾಕ್ಷಿ ಹಿರೇಮಠ, ನೇಹಾ ಭುಯ್ನಾರ ಉಪಸ್ಥಿತರಿದ್ದರು.
ಆದರ್ಶ ನಗರ: ಮಕ್ಕಳು ಈ ದೇಶದ ಆಸ್ತಿ. ದೇಶದ ಅಭಿವೃದ್ಧಿ ಇಂದಿನ ಯುವಕರು ಮತ್ತು ಮಕ್ಕಳ ಮೇಲೆ ನಿಂತಿದೆ ಎಂದು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಆದರ್ಶನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳು ಧನಾತ್ಮಕ ವಿಚಾರ ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಿಂದ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯಾ ಬಿರಾದಾರ, ವಿಕಾಸ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ವಿಕಾಸ ಶಿಕ್ಷಣ ಸಂಸ್ಥೆ ಗೌರವ ಸದಸ್ಯ ರಾಜಶೇಖರ ಕೌಲಗಿ, ದಯಾನಂದ ಕೆಲೂರ ಮಾತನಾಡಿದರು.
ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಎಂ.ಐ. ಬಿರಾದಾರ, ಮೇಲ್ವಿಚಾರಕ ಎಂ.ಎಚ್. ಹುಗ್ಗೇನವರ, ಜೆ.ಆರ್. ಗುಡ್ಡದ, ಸುಜಾತಾ ಹ್ಯಾಳದ, ಪಿ.ಬಿ. ಕೊಳಮಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?