ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಪ್ರಭಂಜನ್‌ ಕುಮಾರ್‌


Team Udayavani, Nov 16, 2019, 5:52 PM IST

16-November-31

ಬಳ್ಳಾರಿ: ನಗರ ಹೊರವಲಯದಲ್ಲಿನ ರೂಟ್ಸ್‌ ಪಬ್ಲಿಕ್‌ ಶಾಲೆಯಲ್ಲಿ “ಬ್ರೈನ್‌ ರೇನ್‌’ ಕಾರ್ಯಕ್ರಮ ಆಯೋಜಿಸಲಾಗಿದ್ದು ಶಾಲೆಯ ವಿದ್ಯಾರ್ಥಿಗಳು ವಿವಿಧ ರೀತಿಯ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಿದರು.

ಶಾಲೆಯ ಎಲ್‌ಕೆಜಿ, ಯುಕೆಜಿ, 1ನೇ ತರಗತಿಯಿಂದ ಹಿಡಿದು 9ನೇ ತರಗತಿವರೆಗಿನ ವಿದ್ಯಾರ್ಥಿಗಳು ತಮ್ಮದೇ ಆದ ಮಾದರಿಗಳನ್ನು ಸಿದ್ಧಪಡಿಸಿದ್ದರು. ನೀರಲ್ಲಿ ಹಡಗು ಹೇಗೆ ಚಲಿಸುತ್ತದೆ, ಸೋಲಾರ್‌ನಿಂದ ವಿದ್ಯುತ್‌ ಉತ್ಪಾದನೆ, ನೀರಿನಿಂದ ವಿದ್ಯುತ್‌ ಉತ್ಪಾದನೆ, ಗಗನಯಾತ್ರಿ ಕಲ್ಪನಾ ಚಾವ್ಲಾ ಸೇರಿದಂತೆ ಇನ್ನಿತರೆ ಶಿಕ್ಷಣ, ವೈದ್ಯಕೀಯ, ವಿಜ್ಞಾನ, ಪರಿಸರ, ಸೌರಮಂಡಲದಲ್ಲಿನ ಗ್ರಹಗಳ ಮಾದರಿ, ನಗರೀಕರಣ, ಗಣಿತ ಇನ್ನಿತರೆ ವಿಷಯಗಳ ಕುರಿತು ವಿದ್ಯಾರ್ಥಿಗಳು ತಮ್ಮದೇ ಆದ ಪರಿಕಲ್ಪನೆಯಡಿ ಮಾದರಿಯಡಿ ಸಿದ್ಧಪಡಿಸಿ ಪ್ರದರ್ಶಿಸಿದರು.

ಜತೆಗೆ ಅವುಗಳನ್ನು ವೀಕ್ಷಿಸುವವರಿಗೆ ಮಾದರಿಗಳ ಬಗ್ಗೆ ವಿದ್ಯಾರ್ಥಿಗಳು ವಿವರಿಸುತ್ತಿದ್ದ ರೀತಿ ಗಮನ ಸೆಳೆಯಿತು. ಪೊಲೀಸ್‌, ವೈದ್ಯ, ಶಿಕ್ಷಕರಂತೆ ಉಡುಪುಗಳನ್ನು ಧರಿಸಿದ್ದ ವಿದ್ಯಾರ್ಥಿಗಳು, ಸಮಾಜದಲ್ಲಿನ ಪೊಲೀಸರು, ವೈದ್ಯರು, ಶಿಕ್ಷಕರ ಪಾತ್ರ, ಅವರ ಕರ್ತವ್ಯಗಳ ಬಗ್ಗೆ ವಿವರಿಸಿದರು.

ಶಾಲೆ ಹೊರಗಡೆ ಮಳೆನೀರು ಕೊಯ್ಲು ಬಳಸಿ ಅಂತರ್ಜಲ ಹೆಚ್ಚಳದಿಂದ ರೈತರಿಗಾಗುವ ಅನುಕೂಲಗಳ ಬಗ್ಗೆ ಹಾಗೂ ಕೈಗಾರಿಕೆಗಳ ಬಗ್ಗೆ ಪರಿಸರ ಮೇಲಾಗುತ್ತಿರುವ ದುಷ್ಪರಿಣಾಮ, ಹೆಚ್ಚುತ್ತಿರುವ ತಾಪಮಾನ, ಮಳೆ ಕೊರತೆ ಇನ್ನಿತರೆ ವಿಷಯಗಳ ಕುರಿತು ವಿದ್ಯಾರ್ಥಿಗಳು ಮಾದರಿಗಳನ್ನು ಪ್ರದರ್ಶಿಸಿ ವಿವರಿಸಿದರು.

ಶಾಲೆ ಪ್ರಾಚಾರ್ಯ ಎಂ. ಪ್ರಭಂಜನ್‌ ಕುಮಾರ್‌, ಶಾಲೆಯಲ್ಲಿ ಮೊದಲ ಬಾರಿಗೆ ಬ್ರೈನ್‌ ರೈನ್‌ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬ್ರೈನ್‌ರೈನ್‌ ಎಂದರೆ ಮಕ್ಕಳಲ್ಲಿನ ಬುದ್ಧಿಯನ್ನು ಹೊರಸೂಸುವುದು. ಈ ನಿಟ್ಟಿನಲ್ಲಿ ಮಕ್ಕಳಲ್ಲಿನ ಪ್ರತಿಭೆಯನ್ನು ಶಿಕ್ಷಕರು ಹೊರ ತರುವಲ್ಲಿ ಹೆಚ್ಚಿನ ಶ್ರಮ ವಹಿಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ತನ್ನದೇ ಆದ ಪ್ರತಿಭೆ ಅಡಗಿರುತ್ತದೆ. ಅದನ್ನು ಶಿಕ್ಷರು ಹಾಗೂ ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದಾಗ ಅದು ಹೊರಬರುತ್ತದೆ. ಪಾಠದ ಜತೆಗೆ ತಮ್ಮ ಪ್ರತಿಭೆಯನ್ನು ಗುರುತಿಸಲು ವಿದ್ಯಾರ್ಥಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದರು.

ಶಾಲೆಯಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಮಾದರಿಗಳನ್ನು ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ವೀಕ್ಷಿಸಿ ಶ್ಲಾಘಿಸಿದರು. ಬಳಿಕ ಮಾತನಾಡಿದ ಅವರು, ಶಾಲೆಗಳಲ್ಲಿ ಕೇವಲ ಪಾಠಕ್ಕೆ ಮಾತ್ರ ಸೀಮಿವಾಗದೇ, ಮಕ್ಕಳ ನಾನಾ ಕಲೆಗಳನ್ನು ಹೊರ ಹಾಕುವಂತ ಕೆಲಸವಾಗಬೇಕು. ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸಂಬಂಧ ತಾಯಿ ಮಗುವಿನ ಸಂಬಂಧ ಇರಬೇಕು. ಮಕ್ಕಳಲ್ಲಿ ತಾರತಮ್ಯ ತೋರಿಸದೆ ಸಮಾನತೆಯಿಂದ ನೋಡಿಕೊಳ್ಳಬೇಕು ಎಂದರು.

ಅನುದಾನ ರಹಿತ ಶಾಲೆಗಳ ಸಂಘದ ಅಧ್ಯಕ್ಷ ಮರಿಸ್ವಾಮಿರೆಡ್ಡಿ, ಕಾರ್ಯದರ್ಶಿ ಬಸಿರೆಡ್ಡಿ, ರಮ್‌ಜಾನ್‌, ನಿರುಪಮಾ, ಶಾಲೆಯ ಸಂಸ್ಥಾಪಕಿ ಸುಜಾತಾ, ಎಂ.ನಾರಾಯಣರಾವ್‌, ಎಂ. ಜಯಸಿಂಹ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.