ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಸತ್ಯನ ಸಸ್ಪೆನ್ಸ್‌ ಸ್ಟೋರಿ!

ಚಿತ್ರ ವಿಮರ್ಶೆ

Team Udayavani, Nov 17, 2019, 6:03 AM IST

Relax-Satya

ಲೈಫ್ನಲ್ಲಿ ಸೆಟ್ಲ ಆಗಬೇಕು ಅಂದ್ರೆ ಹಣ ಇರಬೇಕು. ಆದ್ರೆ ಆ ಹಣ ಮಾಡೋಕೆ ತುಂಬ ಕಷ್ಟಪಡುವಂತಿರಬಾರದು. ಅತಿ ಸುಲಭ ಮಾರ್ಗದಲ್ಲಿ ಹಣ ಮಾಡೋದಕ್ಕೆ ಏನಾದರೊಂದು ಐಡಿಯಾ ಇರಬೇಕು. ಅಂಥದ್ದೊಂದು ಐಡಿಯಾ ಅಂದ್ರೆ, ಹಣ ಇದ್ದವರನ್ನ ಕಿಡ್ನ್ಯಾಪ್‌ ಮಾಡೋದು. ಐಡಿಯಾ ಸ್ವಲ್ಪ ಹಳೆಯದಾದ್ರೂ, ಕಿಡ್ನಾಪ್‌ ಮಾಡೋ ಸ್ಟೈಲ್‌ನಲ್ಲಿ ಹೊಸದೇನಾದ್ರೂ ಇದ್ದರೆ, ಆ ಕಿಡ್ನ್ಯಾಪ್‌ ಒಂದಷ್ಟು ಥ್ರಿಲ್ಲಿಂಗ್‌ ಆಗಿರುತ್ತದೆ.

ಅಂಥದ್ದೊಂದು ಕಿಡ್ನ್ಯಾಪ್‌ ಸ್ಟೋರಿಯ ರೋಚಕತೆಯನ್ನು ಕಣ್ತುಂಬಿಕೊಳ್ಳುವ ಮನಸ್ಸಿದ್ದರೆ, ನೀವು ಥಿಯೇಟರ್‌ನಲ್ಲಿ ಒಂದಷ್ಟು “ರಿಲ್ಯಾಕ್ಸ್‌’ ಆಗೋದಂತೂ “ಸತ್ಯ’. ಹೀರೋ-ವಿಲನ್‌ ಇಬ್ಬರೂ ಸೇರಿ ಹಣಕ್ಕಾಗಿ ಒಂದು ಹುಡುಗಿಯನ್ನು ಕಿಡ್ನ್ಯಾಪ್‌ ಮಾಡಲು ಪ್ಲಾನ್‌ ಮಾಡುತ್ತಾರೆ. ಆ ಪ್ಲಾನ್‌ ಅನ್ನು ಹೇಗೆ ಜಾರಿಗೊಳಿಸುತ್ತಾರೆ. ಕಿಡ್ನ್ಯಾಪ್‌ ಆಗುವ ಹುಡುಗಿ ಯಾರು, ಅವಳ ಹಿನ್ನೆಲೆ ಏನು ಅನ್ನೋದು ಸಸ್ಪೆನ್ಸ್‌.

ಕಿಡ್ನ್ಯಾಪ್‌ ನಂತರ ಮುಂದೇನಾಗುತ್ತದೆ, ನಿಜವಾಗಿಯೂ “ರಿಲ್ಯಾಕ್ಸ್‌” ಆಗೋದು ಯಾರು ಅನ್ನೋದು ಕ್ಲೈಮ್ಯಾಕ್ಸ್‌! ಇದು ಈ ವಾರ ತೆರೆಗೆ ಬಂದಿರುವ “ರಿಲ್ಯಾಕ್ಸ್‌ ಸತ್ಯ’ ಚಿತ್ರದ ಕಥಾಹಂದರ. ಒಂದು ಮಾಮೂಲಿ ಕಿಡ್ನ್ಯಾಪ್‌ ಸ್ಟೋರಿಯನ್ನು ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಅಂಶಗಳನ್ನು ಇಟ್ಟುಕೊಂಡು, ಎಷ್ಟರ ಮಟ್ಟಿಗೆ ರೋಚಕವಾಗಿ ಕಟ್ಟಿಕೊಡಬಹುದು ಎಂಬುದಕ್ಕೆ “ರಿಲ್ಯಾಕ್ಸ್‌ ಸತ್ಯ’ ಇತ್ತೀಚಿನ ತಾಜಾ ಉದಾಹರಣೆ.

ಸಂಪೂರ್ಣ ಚಿತ್ರದ ಕಥೆ ಕೇವಲ ನಾಲ್ಕೈದು ಪಾತ್ರಗಳ ಸುತ್ತ ಸುತ್ತುವುದರಿಂದ, ಕಲಾವಿದರ ಅಭಿನಯ ಮತ್ತು ನಿರೂಪಣೆಯೇ ಇಡೀ ಚಿತ್ರಕ್ಕೆ ಜೀವಾಳ. ಇನ್ನು ನಾಯಕ ಪ್ರಭು ಮುಂಧ್ಕುರ್‌ ಮತ್ತು ಖಳ ನಾಯಕ ಉಗ್ರಂ ಮಂಜು ಸವಾಲಿಗೆ ಬಿದ್ದವರಂತೆ, ತಮ್ಮ ಅಭಿನಯದ ಮೂಲಕ ಇಡೀ ಚಿತ್ರಕ್ಕೆ ಹೆಗಲಾಗಿದ್ದಾರೆ. ಇಬ್ಬರ ನಡುವಿನ ದೃಶ್ಯಗಳು, ಸಂಭಾಷಣೆ ನೋಡುಗರಿಗೆ ಅಲ್ಲಲ್ಲಿ ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಜೊತೆಗೆ, ಕಾಮಿಡಿಯ ಕಚಗುಳಿಯನ್ನೂ ಕೊಡುತ್ತದೆ. ಉಳಿದಂತೆ ಮಾನ್ವಿತಾ ಕಾಮತ್‌ ಅವರದ್ದು ಅಚ್ಚುಕಟ್ಟಾದ ಅಭಿನಯ.

ಚಿತ್ರದ ಮೊದಲಾರ್ಧ ಅಲ್ಲಲ್ಲಿ ಮಂದಗತಿಯಲ್ಲಿ ಸಾಗಿದರೂ, ಚಿತ್ರದ ಛಾಯಾಗ್ರಹಣ, ಹಿನ್ನೆಲೆ ಸಂಗೀತ ಅದೆಲ್ಲವನ್ನು ಮರೆ ಮಾಚುತ್ತದೆ. ಚಿತ್ರದ ತಾಂತ್ರಿಕ ಕಾರ್ಯಗಳು ಗಮನ ಸೆಳೆಯುತ್ತದೆ. ಕೆಲವೊಂದು ಸಣ್ಣ-ಪುಟ್ಟ ಲೋಪಗಳನ್ನು ಬದಿಗಿಟ್ಟು ನೋಡುವುದಾದರೆ, “ರಿಲ್ಯಾಕ್ಸ್‌ ಸತ್ಯ’ ಕೊಟ್ಟ ದುಡ್ಡಿಗೆ ಮೋಸವಿಲ್ಲದೆ ಮನರಂಜಿಸುತ್ತಾನೆ. ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರಗಳ ಒಲವಿರುವವರು ವಾರಾಂತ್ಯದಲ್ಲಿ “ರಿಲ್ಯಾಕ್ಸ್‌ ಸತ್ಯ’ನನ್ನು ಒಮ್ಮೆ ನೋಡಿಬರಲು ಅಡ್ಡಿಯಿಲ್ಲ.

ಚಿತ್ರ: ರಿಲ್ಯಾಕ್ಸ್‌ ಸತ್ಯ
ನಿರ್ದೇಶನ: ನವೀನ್‌ ರೆಡ್ಡಿ. ಜಿ
ನಿರ್ಮಾಣ: ರೆಡ್‌ ಡ್ರ್ಯಾಗನ್‌ ಫಿಲಂಸ್‌
ತಾರಾಗಣ: ಪ್ರಭು ಮುಂಧ್ಕುರ್‌, ಮಾನ್ವಿತಾ ಹರೀಶ್‌, ಉಗ್ರಂ ಮಂಜು, ಕಡ್ಡಿಪುಡಿ ಚಂದ್ರು ಮತ್ತಿತರರು.

* ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.