ಶಾಲೆ ಅಂಗಳದಲ್ಲಿ ವಿದ್ಯಾರ್ಥಿಗಳೇ ಬೆಳೆದ ಭತ್ತದ ಪೈರು ಕಟಾವು

ಕೊಯ್ಲು ಮಾಡಿ ಭತ್ತದ ಕಾಳು ಬೇರ್ಪಡಿಸಿ ಸಂತಸಪಟ್ಟ ಬಾಳಿಲ ಶಾಲೆಯ ವಿದ್ಯಾರ್ಥಿಗಳು

Team Udayavani, Nov 17, 2019, 4:57 AM IST

nn-16

ಬೆಳ್ಳಾರೆ: ಗ್ರಾಮೀಣ ಪ್ರದೇಶದಿಂದ ದೂರ ಸರಿಯುತ್ತಿರುವ ಕೃಷಿ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸುವ ವಿಶೇಷ ಪ್ರಯತ್ನವೊಂದು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದ್ದು, ಶಾಲೆಯ ಅಂಗಳದಲ್ಲಿ ತಾವೇ ನಾಟಿ ಮಾಡಿದ ಭತ್ತದ ಗದ್ದೆಯಲ್ಲಿ ಮಕ್ಕಳು ಕೊಯ್ಲು ಮಾಡಿ ಸಂಭ್ರಮಿಸಿದ್ದಾರೆ.

ಭತ್ತ ಕೊಯ್ಲು ಮಾಡಲು ಗದ್ದೆಗಿಳಿದ ವಿದ್ಯಾರ್ಥಿಗಳ ಉತ್ಸಾಹ ಕಂಡು ಹೆತ್ತವರೂ ಉತ್ಸಾಹದೊಂದಿಗೆ ಕೊಯ್ಲು ಹಾಡಿನೊಂದಿಗೆ ಮಕ್ಕಳ ಜತೆಯಾದರು. ಶಾಲೆಯ ಅಂಗಳದಲ್ಲೇ ವಿದ್ಯಾರ್ಥಿಗಳು ಭತ್ತವನ್ನು ಬೇರ್ಪಡಿಸಿದರು.

ಕೃಷಿಯೇ ಖುಷಿ
ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜತೆಗೆ ಕೃಷಿ ಪಾಠವನ್ನೂ ಕಲಿಸಿ, ಕೃಷಿಯತ್ತ ಒಲವು ಮೂಡಿಸಬೇಕೆನ್ನುವುದು ಇಲ್ಲಿನ ಎಸ್‌ಡಿಎಂಸಿ, ಆಡಳಿತ ಮಂಡಳಿ ಹಾಗೂ ಶಿಕ್ಷಕರ ನಿರ್ಣಯಕ್ಕೆ ವಿದ್ಯಾರ್ಥಿಗಳು ಸಾಥ್‌ ನೀಡುತ್ತಿದ್ದಾರೆ. ಪಾಠದ ಜತೆಗೆ ಇಲ್ಲಿನ ವಿದ್ಯಾರ್ಥಿಗಳು ಕೃಷಿ ಚಟುವಟಿಕೆಯಲ್ಲಿ ಖುಷಿಯಿಂದ ಭಾಗವಹಿಸುತ್ತಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಭತ್ತ ಬೇಸಾಯ ಮಾಡುತ್ತಿದ್ದಾರೆ. ಗದ್ದೆಯನ್ನು ಉತ್ತು, ಬಿತ್ತಿ, ನೇಜಿಗೆ ನೀರು, ಗೊಬ್ಬರ ಉಣಿಸಿ ಅವು ತೆನೆ ಅರಳಿಸುವುದನ್ನು ಕಂಡು ಸಂಭ್ರಮಿಸುತ್ತಾರೆ. ಹಿರಿಯರೊಂದಿಗೆ ಸೇರಿ ಕೊಯ್ಲು ಮಾಡಿ, ಭತ್ತ ಬೇರ್ಪಡಿಸುತ್ತಾರೆ.

ಇಲ್ಲಿನ ಗದ್ದೆ ಬೇಸಾಯವನ್ನು ಕಂಡ ಕೆಲವು ವಿದ್ಯಾರ್ಥಿಗಳು ತಮ್ಮ ಮನೆಯಲ್ಲೂ ಸಣ್ಣ ಗದ್ದೆಯ ರೀತಿಯಲ್ಲಿ ಭೂಮಿ ಹದ ಮಾಡಿ, ಭತ್ತ ನಾಟಿ ಮಾಡಿ ಭತ್ತ ಬೆಳೆಯುವ ಮೂಲಕ ಕೃಷಿ ಪ್ರೀತಿ ತೋರಿಸಿದ್ದಾರೆ.

ಆಟ-ಪಾಠ-ಊಟ
ಶಾಲೆಯ ಆಟಕ್ಕೆ ಯೋಗ್ಯವಲ್ಲದ ಮೂರು ಸೆಂಟ್ಸ್‌ ಜಾಗದಲ್ಲಿ ಗದ್ದೆ ಬೇಸಾಯ ನಡೆದಿದೆ. ಗದ್ದೆ ಉಳುಮೆಯಾಗಿ ನೇಜಿ ನಾಟಿಗೆ ಮೊದಲು ಇಲ್ಲಿನ ವಿದ್ಯಾರ್ಥಿಗಳು ಬಿಡುವಿನ ವೇಳೆಯಲ್ಲಿ ಕೆಸರು ಗದ್ದೆ ಆಟವಾಡಿ ಖುಷಿ ಪಟ್ಟಿದ್ದರು. ಗದ್ದೆಯಲ್ಲಿ ಮಕ್ಕಳಿಗೆ ನೇಗಿಲ ಯೋಗಿಯ ಪಾಠವಾದ ಬಳಿಕ ಗದ್ದೆ ನಾಟಿಯ ಮಾಹಿತಿ ಪಡೆದು ಭವಿಷ್ಯದ ಊಟಕ್ಕೆ ಸಿದ್ಧತೆ ಮಾಡಿದರು. ಹದ ಮಾಡಿದ ಗದ್ದೆಯಲ್ಲಿ ತಾವೇ ಹಿರಿಯರ ಜತೆ ಸೇರಿ ನಾಟಿ ಮಾಡಿದರು. ನಾಟಿ ಮಾಡಿದ ಭತ್ತದ ಆರೈಕೆ ಮಾಡಿ ಈಗ ಕೊಯ್ಲು ಮಾಡಿದ್ದಾರೆ. ಹೊಸ ಅಕ್ಕಿ ಊಟದ ತಯಾರಿಗೂ ವಿದ್ಯಾರ್ಥಿಗಳೇ ಬಾಣಸಿಗರಾಗಿ ಸಹಕರಿಸಿದ್ದು ವಿಶೇಷ. ಶಿಕ್ಷಕರು ಹಾಗೂ ಬಿಸಿಯೂಟ ಅಡುಗೆಯವರ ಮಾರ್ಗದರ್ಶನ, ಸಹಕಾರದೊಂದಿಗೆ ವಿದ್ಯಾರ್ಥಿಗಳೇ ಹೊಸ ಅಕ್ಕಿ ಊಟವನ್ನು ತಯಾರಿಸಿ ನೆರೆದವರಿಗೆ ಉಣಬಡಿಸಿದರು.

ಭತ್ತ, ತರಕಾರಿ ಕೃಷಿ
ಬಾಳಿಲದ ವಿದ್ಯಾಬೋಧಿನೀ ಶಾಲೆಯ ಗದ್ದೆಯಲ್ಲಿ ಒಂದು ಮುಡಿಯಿಂದ ಒಂದು ಕ್ವಿಂಟಾಲ್‌ ಅಕ್ಕಿ, ಸೌತೆಕಾಯಿ, ಅಲಸಂಡೆ, ಬೆಂಡೆ, ಬಸಳೆ ಇತ್ಯಾದಿ ತರಕಾರಿಗಳನ್ನು ಬೆಳೆಯಲಾಗುತ್ತದೆ. ವಿದ್ಯಾರ್ಥಿಗಳೇ ಇಲ್ಲಿನ ತರಕಾರಿ ತೋಟದ ಆರೈಕೆ ಮಾಡುತ್ತಾರೆ. ತರಗತಿಯ ಬಿಡುವಿನಲ್ಲಿ ಹಾಗೂ ರಜಾ ದಿನಗಳಲ್ಲಿ ಕೃಷಿ ಚಟುವಟಿಕೆಯ ಕಾರ್ಯ ನಿರ್ವಹಿಸುತ್ತಾರೆ.

ಖುಷಿ ಕೊಟ್ಟಿದೆ
ಆಟದ ಜತೆಗೆ ಕೃಷಿ ಪಾಠ ಪಡೆಯುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಇಲ್ಲಿನ ಕೃಷಿ ಚಟುವಟಿಕೆಗಳು ನಮ್ಮ ಜೀವನ ಪಾಠವಾಗಿದೆ. ಕೃಷಿ ಸಂಸ್ಕೃತಿ ಯನ್ನು ನಮ್ಮ ಮನೆಯಲ್ಲೂ ಮುಂದುವರಿಸುತ್ತೇವೆ. ಹಕ್ಕಿಗಳಿಗೂ ಆಹಾರವಾಗಿ ಉಳಿದ ಭತ್ತವನ್ನು ಕೊಯ್ಲು ಮಾಡಿ ಸಂಭ್ರಮಿಸಿದ್ದೇ ಖುಷಿ.
 - ಜೀವನ್‌, ಶಾಲಾ ವಿದ್ಯಾರ್ಥಿ ನಾಯಕ

ಜೀವನ ಪಾಠ
ಆಟ, ಪಾಠ ಊಟದ ಜತೆಗೆ ಒಂದಷ್ಟು ಜೀವನ ಪಾಠ ನೀಡಿ ಎಳವೆಯಲ್ಲಿಯೇ ಮಕ್ಕಳಿಗೆ ಭತ್ತ ಬೇಸಾಯದ ಒಲವು ಮೂಡಿಸುವ ಉದ್ದೇಶ ನಮ್ಮದು. ಚಿಕ್ಕ ಮಗುವೂ ಭತ್ತವನ್ನು ಕುತೂಹಲದಿಂದ ವೀಕ್ಷಿಸಿ ಊಟದ ಅನ್ನ ಹೇಗೆ ಆಗುತ್ತದೆ ಎನ್ನುವುದನ್ನು ಕೇಳಿ ತಿಳಿದುಕೊಳ್ಳುವುದನ್ನು ನೋಡಿದಾಗ ನಮ್ಮ ಶ್ರಮ ಸಾರ್ಥಕ ಎನಿಸುತ್ತದೆ.
– ಜಾಹ್ನವಿ ಕಾಂಚೋಡು, ಎಸ್‌ಡಿಎಂಸಿ ಅಧ್ಯಕ್ಷೆ

ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.