ಮುಳಿ ಹುಲ್ಲಿನ ಛಾವಣಿಯಲ್ಲಿ ಆರಂಭಗೊಂಡ ಶಾಲೆಗೀಗ 110 ವರ್ಷದ ಸಂಭ್ರಮ

ಜಿಲ್ಲಾ ಬೋರ್ಡ್‌ನ ಆಡಳಿತದಿಂದ ಆರಂಭಗೊಂಡ ಕಿಲೆಂಜಾರಿನ ಸ. ಕಿ. ಪ್ರಾ. ಶಾಲೆ

Team Udayavani, Nov 17, 2019, 4:47 AM IST

nn-25

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1909 ಶಾಲೆ ಆರಂಭ
20 ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ

ಕೈಕಂಬ: ಜಿಲ್ಲಾ ಬೋರ್ಡ್‌ನ ಆಡಳಿತಕ್ಕೆ ಒಳಪಟ್ಟ ದಾನಿಗಳ ಸಹಕಾರದಿಂದ ಕುಪ್ಪೆಪದವು ಕಿಲೆಂಜಾರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 1909ರಲ್ಲಿ ಆರಂಭಗೊಂಡಿತ್ತು. ಅನಂತರ ಹಿರಿಯ ಪ್ರಾಥಮಿಕ ಶಾಲೆಯಾಗಿ ಮುಂದುವರಿದು 2006-07ರಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿಗೊಂಡಿತು. ಸದ್ಯ ಈ ಶಾಲೆಯಲ್ಲಿ ಈಗ 1ರಿಂದ 8ನೇ ತರಗತಿಗಳು ನಡೆಯುತ್ತಿವೆ.

ಶತಮಾನೋತ್ಸವ ಕಟ್ಟಡ
1909ರಲ್ಲಿ ಆರಂಭಗೊಂಡ ಈ ಶಾಲೆಯಲ್ಲಿ 1ನೇ ತರಗತಿಯಿಂದ ಮುಳಿ ಹುಲ್ಲಿನ ಚಾವಣಿಯಲ್ಲಿ ಆರಂಭಿಸಲಾಗಿತ್ತು. ಶಾಲಾ ಆರಂಭದಲ್ಲಿ 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಮೊದಲ ಮುಖ್ಯೋಪಾಧ್ಯಾಯರಾಗಿ ಶಂಕರ ನಾರಾಯಣ ಭಟ್‌ ಅವರು ಸೇವೆ ಸಲ್ಲಿಸಿದ್ದರು. ಅನಂತರ 1ರಿಂದ 5ನೇ ತರಗತಿಯವರೆಗೆ ವಿಸ್ತೃತಗೊಂಡಿತು. ಮುಂದುವರಿದು 7ನೇ ತರಗತಿಗಳು ನಡೆದವು.

2007-08ರಿಂದ 8ನೇ ತರಗತಿ ಆರಂಭಗೊಂಡಿತು. 2009-10ರತನಕ ಇಲ್ಲಿ ಪ್ರೌಢಶಾಲಾ ತರಗತಿಗಳು ನಡೆದವು. ಬಳಿಕ ನೂತನವಾಗಿ ನಿರ್ಮಿಸಿದ ಪ್ರೌಢಶಾಲಾ ಕಟ್ಟಡದಲ್ಲಿ ತರಗತಿಗಳು ವರ್ಗಾವಣೆಗೊಂಡವು.

ಸುಮಾರು 1923ರಲ್ಲಿ ಈ ಶಾಲೆಯ ಹಳೆಕಟ್ಟಡ ನಿರ್ಮಾಣವಾಯಿತು ಎಂದು ಹೇಳಲಾಗುತ್ತಿದೆ.
ಶಾಲಾ ಶತಮಾನೋತ್ಸವದ ನೆನಪಿಗೆ ಹಳೆವಿದ್ಯಾರ್ಥಿ ಹಾಗೂ ಊರ ಹಾಗೂ ಪರವೂರಿನ ದಾನಿಗಳ ಸಹಕಾರದಿಂದ ಶತಮಾನೋತ್ಸವ ಕಟ್ಟಡವನ್ನು ನಿರ್ಮಿಸಿದ್ದಾರೆ.

ಪ್ರಸ್ತುತ 190 ವಿದ್ಯಾರ್ಥಿಗಳು ಈ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. 7ಮಂದಿ ಶಿಕ್ಷಕರಿದ್ದು, ಮುಖ್ಯ ಶಿಕ್ಷಕ ಹುದ್ದೆ ಖಾಲಿ ಇದೆ. ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಅಪೋಲಿನಾರಿಸ್‌ ಡಿ’ಸೋಜಾ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ದಾಮೋದರ ಗೌಡ, ಮೈನಾಜ್‌, ಸಪ್ರಭಾನು, ಆಯಿಷಾ, ವನಿತಾ ಕೆ., ಮೊದಲಾದವರು ರಾಷ್ಟ್ರೀಯ ,ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಹಾಗೂ ಬೆಂಗಳೂರು ಪ್ರಾಂತ್ಯದ ಆರ್ಚ್‌ ಬಿಷಪ್‌ ವಂ| ಬೆರ್ನಾರ್ಡ್‌ ಮೊರಾಸ್‌ ಈ ಶಾಲೆಯ ಹಳೆವಿದ್ಯಾರ್ಥಿ. ಈ ಶಾಲೆಗೆ ಹಲವು ರೀತಿಯ ಕೊಡುಗೆಗಳನ್ನು ನೀಡಿದವರಲ್ಲಿ ದಿ| ಶ್ರೀಪಾಲ ಶೆಟ್ಟಿ, ಜಿನ್ನಪ್ಪ ಮಾಸ್ಟ್ರೆ, ದಿ| ಧರ್ಮಪಾಲ ಅಗರಿ, ದಿ| ಕಾಂತಪ್ಪ ಶೆಟ್ಟಿ, ದಿ| ಹಿರಿಣ್ಯಾಕ್ಷ ಕೋಟ್ಯಾನ್‌, ಕೆ. ಪುರುಷೋತ್ತಮ್‌, ಟಿ.ರಾಮಚಂದ್ರ ಸಾಲ್ಯಾನ್‌ ಮುಂತಾದವರು ಪ್ರಮುಖರು.

8,000 ವಿದ್ಯಾರ್ಥಿಗಳು
ಕಿಲೆಂಜಾರು, ಮುತ್ತೂರು, ಕೊಳವೂರು, ತೆಂಕ ಎಡಪದವು, ಮೊಗರು, ಕಪೆì ಇರುವೈಲು, ಕರಿಯಂಗಳ ಗ್ರಾಮಗಳಿಂದ ವಿದ್ಯಾರ್ಥಿಗಳು ಈ ಶಾಲೆಗೆ ವಿದ್ಯಾಭ್ಯಾಸಕ್ಕೆ ಬರುತ್ತಿದ್ದರು. ಸುಮಾರು 8,000 ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಈಗ ಈ ಶಾಲೆ ಪರಿಸರದಲ್ಲಿ 5 ಸರಕಾರಿ ಶಾಲೆಗಳು, 3 ಖಾಸಗಿ ಶಾಲೆಗಳಿವೆ.

ಗ್ರಾಮೀಣ ಪ್ರದೇಶದಲ್ಲಿ ಇರುವ ಈ ಶಾಲೆಯ ಪರಿಸರದಲ್ಲಿ ಹಲವಾರು ಸರಕಾರಿ ಹಾಗೂ ಖಾಸಗಿ ಶಾಲೆಗಳಿವೆ. ಇಲ್ಲಿ ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ದಿ ಸಮಿತಿ, ಅನೇಕ ಸಂಘ,ಸಂಸ್ಥೆಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ .
-ಅಪೋಲಿನಾರಿಸ್‌ ಡಿ’ಸೋಜಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ

ಈ ಶಾಲೆ ಚರ್ಚ್‌, ಮಸೀದಿ, ದೇವಸ್ಥಾನದ ಸಮೀಪದ ಲ್ಲಿರುವುದು ಇಲ್ಲಿನ ವಿಶೇಷತೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಲಾಗುತ್ತಿತ್ತು.
-ನೀಲಯ ಎಂ. ಅಗರಿ, ಶಾಲೆಯ ಹಳೆ ವಿದ್ಯಾರ್ಥಿ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.