ಆಮ್ನಿ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು
Team Udayavani, Nov 17, 2019, 5:54 AM IST
ವೇಣೂರು: ಶನಿವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಗೆ ರಾಜ್ಯ ಹೆದ್ದಾರಿ 70ರ ಶಾಂತಿನಗರದಲ್ಲಿ ಬೃಹದಾಕಾರದ ಮರವೊಂದು ಚಲಿಸುತ್ತಿದ್ದ ಆಮ್ನಿ ವಾಹನದ ಮೇಲೆ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.
ಮೂಡಬಿದಿರೆ-ವೇಣೂರು ಹೆದ್ದಾರಿಯಲ್ಲಿ ಅರ್ಧ ತಾಸು ಸಂಪರ್ಕ ಕಡಿತಗೊಂಡಿದ್ದು ಪ್ರಯಾಣಿಕರು ಸಮಸ್ಯೆ ಎದುರಿಸಿದರು. ಮರ ಬಿದ್ದ ಕಾರಣ 7 ವಿದ್ಯುತ್ ಕಂಬಗಳು ಉರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕಳೆದ ಬಾರಿ ಹೆದ್ದಾರಿ ವಿಸ್ತರಣೆ ವೇಳೆ ಅಪಾಯಕಾರಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರಲ್ಲದೇ ಇಂತಹ ಅಪಾಯಕಾರಿ ಮರಗಳನ್ನು ಸಂಬಂಧಪಟ್ಟ ಇಲಾಖೆ ಇನ್ನಾದರೂ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.