ವಿಮೆ-ಅಧಿಕಾರಿಗಳ ವಿರುದ್ಧ ರೈತಾಕ್ರೋಶ


Team Udayavani, Nov 17, 2019, 11:38 AM IST

bg-tdy-3

ಸವದತ್ತಿ: ಬೆಳೆವಿಮೆ ಹಣಕ್ಕಾಗಿ ಒಂದು ತಿಂಗಳು ಕಾಲ ನಡೆಸಿದ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ತಾಲೂಕಾಡಳಿತ, ಸ್ಥಳೀಯ ತಹಶೀಲ್ದಾರ್‌ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ನೇತೃತ್ವದಲ್ಲಿ ಶನಿವಾರ ಸಭೆ ನಡೆಸಿತು.

ಆದರೆ, ಅಧಿಕಾರಿಗಳ ಉಡಾಫೆ ಉತ್ತರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ಉತ್ತಮ ಫಸಲು ಬಂದ ಜಮೀನುಗಳಿಗೆ ವಿಮೆ ಮೊತ್ತ ಜಮಾ ಆಗುತ್ತದೆ. ಆದರೆ ಬೆಳೆಹಾನಿಯಾಗಿರುವ ಜಮೀನುಗಳಿಗೆ ವಿಮೆ ಹಣ ಜಮೆಯಾಗುವುದಿಲ್ಲವೇಕೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಅದಕ್ಕೆ ಅಧಿಕಾರಿಗಳಉಡಾಫೆ ಉತ್ತರಕ್ಕೆ ಆಕ್ರೋಶಗೊಂಡ ರೈತರು, ಅಧಿಕಾರಿಗಳು ಮತ್ತು ವಿಮೆ ಕಂಪನಿ ಪ್ರತಿನಿಧಿ ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಹತ್ತು ವರ್ಷ ಕಳೆದರೂ ವಿಮೆಯ ಹಣ ಬಂದಿಲ್ಲ. ವಿಮಾ ಕಂಪನಿಯ ಪ್ರತಿನಿಧಿಯವರಿಗೆ ಈ ಕುರಿತು ಕೇಳಿದರೆ ನೀವು ವಿಮಾ ಹಣವನ್ನು ಸರಕಾರಕ್ಕೆ ತುಂಬಿದ್ದೀರಿ ಹೊರತು ನಮಗಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡುತ್ತಾರೆ. ತಾಲೂಕಾಡಳಿತದಿಂದ ರೈತರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನೀಡುವವರ್ಯಾರೆಂದು? ತಮ್ಮ ಆಕ್ರೋಶ ಹೊರಹಾಕಿದರು.

ಶಾಸಕ ಆನಂದ ಮಾಮನಿ ಮಾತನಾಡಿ, ರೈತರ ಕುರಿತಾಗಿ ನಡೆಯುತ್ತಿರುವ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ತಲಾಟಿಯಿಂದ ತಾಲೂಕಾಧಿಕಾರಿವರೆಗೆ ಯಾರೇ ಇರಲಿ, ರೈತರಿಗೆ ಅನ್ಯಾಯ ಮಾಡುವುದು ಕಂಡು ಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು. ರೈತರಿಗೆ ಸಿಗಬೇಕಾದ ಬೆಳೆವಿಮೆ ಮತ್ತುಇತರೆ ಸೌಲಭ್ಯಗಳು ಸಿಕ್ಕಿದ್ದರೆ ಇಂತಹ ಪರಿಸ್ಥಿತಿಗೆ ರೈತರು ತಲುಪುತ್ತಿರಲಿಲ್ಲ. ವಿಮೆ ಕಂಪನಿಯವರು ಸರ್ವೇಗೆ ಬಾರದೇ ರೈತರೊಂದಿಗೆ ಅನುಚಿತವಾಗಿನಡೆದುಕೊಳ್ಳುತ್ತಾರೆ. ಅವರೇನು ತಮ್ಮ ಮನೆಗಳಿಂದಕೊಡುವುದಿಲ್ಲ.

ಎಲ್ಲದಕ್ಕೂ ಒಂದು ಮಿತಿಯಿದೆ.ಅದರ ಸಮಯ ಕಳೆದುಕೊಂಡರೇ ಈಗಿರುವ ಪರಿಸ್ಥಿತಿಯೇ ಬದಲಾಗುತ್ತದೆ. ರೈತರೆಲ್ಲ ಬೆಳೆವಿಮೆ ಸಲುವಾಗಿ ಗುಂಪು-ಗುಂಪಾಗಿ ಪ್ರತಿಭಟನೆ ಮೇಲೆ ಪ್ರತಿಭಟನೆ ನಡೆಸಿದರು. ನಾವು ಕೂಡ ಅವರ ಬೇಡಿಕೆಗೆ ಬೆಂಬಲಿಸಿದೇವು. ಈ ಕುರಿತು ಜಿಲ್ಲಾಧಿ ಕಾರಿಗೆ ಮರುಪರಿಶೀಲಿಸಲು ತಿಳಿಸಲಾಗಿದೆ ಎಂದರು.

ಆನಂದ ಚೋಪ್ರಾ ಮಾತನಾಡಿ, ಧಾರವಾಡದಲ್ಲಿನ ವಿಮೆ ವ್ಯವಸ್ಥೆ ರೀತಿಯಲ್ಲಿಯೇ ಇಲ್ಲಿಯೂ ಪರಿಹಾರಕಲ್ಪಿಸುವ ವ್ಯವಸ್ಥೆಯಾಗಬೇಕು. ಅದನ್ನು ಬಿಟ್ಟು ಮತ್ತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಮಯ ಹಾಳು ಮಾಡುವುದು ಬೇಡ. ನೇರವಾಗಿ ರೈತರ ಖಾತೆಗೆ ಹಣ ನೀಡಿ ಎಂದರು.

ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿದರು. ತಹಶೀಲ್ದಾರ್‌ ಶಂಕರ ಗೌಡಿ, ಕೃಷಿ ಸಹಾಯಕ ನಿರ್ದೇಶಕ ಮಾರಡ್ಡಿ, ಎಪಿಎಂಸಿ ಅಧ್ಯಕ್ಷ ಜಗದೀಶ ಹನಶಿ, ವಿಮಾ ಕಂಪನಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.