ದೋಟಿಹಾಳದಲ್ಲಿ ಭೀತಿ ಹುಟ್ಟಿಸಿದ ಚಿಕೂನ್ಗುನ್ಯಾ-ಡೆಂಘೀ
Team Udayavani, Nov 17, 2019, 12:51 PM IST
ದೋಟಿಹಾಳ: ಗ್ರಾಮದಲ್ಲಿ ಒಂದು ತಿಂಗಳ ಹಿಂದೇ ಗ್ರಾಮದಲ್ಲಿ ಚಿಕೂನ್ಗುನ್ಯಾ ಕಂಡುಬಂದಿದ್ದು, ರೋಗಿಗಳ ಸಂಖ್ಯೆ ಉಲ್ಬಣಗೊಂಡಿದೆ. ಇದರೊಂದಿಗೆ ಮೂರ್ನಾಲ್ಕು ಜನರಲ್ಲಿ ಶಂಕಿತ ಡೆಂಘೀ ಜ್ವರ ಕಂಡುಬಂದಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಒಂದು ವಾರದಿಂದ ಗ್ರಾಮದಲ್ಲಿ ಸುಮಾರು ಮೂರ್ನಾಲ್ಕು ಜನರಿಗೆ ಶಂಕಿತ ಡೆಂಘೀ ಜ್ವರ ಇರುವುದು ಕಂಡುಬಂದಿದೆ.
ಸದ್ಯ ಚಿಕೂನ್ ಗುನ್ಯಾ ರೋಗದಿಂದ ನರಳುತ್ತಿರುವ 50ಕ್ಕೂ ಹೆಚ್ಚು ಜನರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನಿಲ್ಲಲ್ಲು ಜಾಗವಿಲ್ಲದಷ್ಟು ರೋಗಿಗಳ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಚಿಕಿತ್ಸೆಗಾಗಿ ಇಲಕಲ್ಲ, ಕುಷ್ಟಗಿ, ಬಾಗಲಕೋಟೆ ನಗರಗಳ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಗ್ರಾಮದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ಸಾಂಕ್ರಾಮಿಕ ರೋಗಗಳಿಂದ ನರಳುತ್ತಿದ್ದಾರೆ ಎನ್ನುತ್ತಾರೆ ಗ್ರಾಮಸ್ಥರು..
ಶಂಕಿತ ಡೆಂಘೀ ಜ್ವರ: ಗ್ರಾಮದ ನಾಗರಾಜ ತಿಮ್ಮಪ್ಪ ಹನಮಕಟ್ಟಿ, ಕಾರ್ತಿಕ ನಾಗೇಶ ಪತ್ತಾರ ಎಂಬ ಬಾಲಕರಿಗೆ ಶಂಕಿತ ಡೆಂಘೀ ಇರುವ ಕುರಿತು ಕೊಪ್ಪಳದ ಕೆಎಸ್ ಆಸ್ಪತ್ರೆಯಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದ್ದರಿಂದಲೇ ಚಿಕೂನ್ಗುನ್ಯಾ ಹರಡಲು ಕಾರಣವಾಗಿದೆ. ಗ್ರಾಪಂ ಸ್ವತ್ಛತಾ ಕಾರ್ಯದಲ್ಲಿ ನಿರ್ಲಕ್ಷ ವಹಿಸಿದೆ. ಇಷ್ಟೊಂದು ಪ್ರಮಾಣದಲ್ಲಿ ಚಿಕೂನ್ಗುನ್ಯಾ ಹರಡಿದರೂ 2-3 ಬಾರಿ ಮಾತ್ರ ಫಾಗಿಂಗ್ ಮಾಡಿದ್ದಾರೆ. ಆದರೆ ಇದುವರೆಗೂ ಬ್ಲಿಚಿಂಗ್ ಪೌಡರ್ ಸಿಂಪರಣೆಯನ್ನೂ ಮಾಡಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸುತ್ತಾರೆ.
ಆರೋಗ್ಯ ಸಲಹೆ: ನೈರ್ಮಲ್ಯ ಕಾಪಾಡುವುದರಿಂದ ಕಾಯಿಲೆ ನಿಯಂತ್ರಿಸಬಹುದು. ಮನೆಯ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಆಗಾಗ ಸ್ವತ್ಛತಾ ಕಾರ್ಯ ಕೈಗೊಳ್ಳಬೇಕು. ಜ್ವರ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆ ಕಂಡುಬಂದರೆ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು ಎಂದು ಡಾ| ನೇತ್ರಾವತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ