ಮಕ್ಕಳ ಸಹಾಯವಾಣಿ ಸಂಖ್ಯೆ ಪ್ರಚಾರಕ್ಕೆ ಡೀಸಿ ಚಾಲನೆ


Team Udayavani, Nov 17, 2019, 3:52 PM IST

rn-tdy-3

ರಾಮನಗರ: ಮಕ್ಕಳ ಸಹಾಯವಾಣಿ (ಸಂಖ್ಯೆ: 1098) ಬಗ್ಗೆ ಮಕ್ಕಳಾದಿಯಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುವ ವಾಹನಕ್ಕೆ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಚಾಲನೆ ನೀಡಿದರು.

ಶನಿವಾರ ಜಿಲ್ಲಾ ಸರ್ಕಾರಿ ಕಚೇರಿಯ ಸಂಕಿರ್ಣದ ಆವರಣದಲ್ಲಿ ಮಕ್ಕಳ ಸಹಾಯ ವಾಣಿ ಬಗೆಗಿನ ಬಿತ್ತಿ ಪತ್ರ ಮತ್ತು ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗಾಗಿಯೇ ಸಹಾಯವಾಣಿಯನ್ನು ಸರ್ಕಾರ ಸ್ಥಾಪಿಸಿದೆ. ಸಹಾಯವಾಣಿ ಸಂಖ್ಯೆ 1098ರ ಇಡೀ ದೇಶದಲ್ಲಿ ಲಭ್ಯವಿದ್ದು, ಉಚಿತ ವಾಗಿದೆ ಪೋಷಣೆ ಮತ್ತು ಸಂರಕ್ಷಣೆಯ ಅವಶ್ಯಕತೆ ಇರುವ ಮಕ್ಕಳು ಈ ಸಂಖ್ಯೆಯ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಯೋಜನೆಯಾಗಿ ದೇಶದ ಎಲ್ಲಾ ರಾಜ್ಯಗಳಲ್ಲಿ ಸ್ವಯಂ ಸೇವಾ ಸಂಘಟನೆಗಳ ಮೂಲಕ ಮಕ್ಕಳ ರಕ್ಷಣೆ ಕೆಲಸಗಳಲ್ಲಿಕಾರ್ಯ ನಿರ್ವಹಿಸುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಕಳೆದ ಮಾರ್ಚ್‌ 2016ರಿಂದ ಮಕ್ಕಳಸಹಾಯವಾಣಿಯ ಅಸ್ತಿತ್ವದಲ್ಲಿದೆ ಎಂದರು.

ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ: ಮಕ್ಕಳಸಹಾಯವಾಣಿ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ಕೊಟ್ಟ ಅಧಿಕಾರಿಗಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ನಿರ್ಲಕ್ಷಿಸುತ್ತಿರುವ ಮಾಹಿತಿ ದೊರೆತರೆ ಹಾಗೂ ಮನೆಯಿಂದ ಓಡಿ ಹೋದ ಮಕ್ಕಳ ಬಗ್ಗೆ, ವೈದ್ಯಕೀಯ ಸೇವೆ ಅವಶ್ಯಕತೆ ಇರುವ ಮಕ್ಕಳ ಬಗ್ಗೆ , ಮಕ್ಕಳಿಗೆ ಆಶ್ರಯ ಬೇಕಾದಲ್ಲಿ ಸಾರ್ವಜನಿಕರು ಸಹ ಇದೇ ಸಂಖ್ಯೆಯ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡ ಬಹುದು ಎಂದು ತಿಳಸಿದರು.

ನವೆಂಬರ್‌ 20ರವರೆಗೆ ಮಕ್ಕಳ ಸಹಾಯ ವಾಣಿಯ ಪ್ರಚಾರ ವಾಹನ ಸಂಚರಿಸಿ ಮಕ್ಕಳ ಹಕ್ಕುಗಳು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಗಟ್ಟುವ ಕಾನೂನು ಇತ್ಯಾದಿ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು. ಈ ಸಂಬಂಧ ಮಕ್ಕಳ ಸಹಾಯವಾಣಿಯ ಸ್ನೇಹ ಬಂಧು ಸಪ್ತಾಹ-2019ರ ಜಾಗೃತಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಉಮೇಶ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ದೇವಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಷಣ್ಮುಗ ಸುಂದರಂ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುರೇಂದ್ರ, ಕಾರ್ಮಿಕ ಕಲ್ಯಾಣಾಧಿಕಾರಿ ಶೇಖರ್‌ ಘಡದ್‌, ಮಕ್ಕಳ ವಿಶೇಷ ಪೊಲೀಸ್‌ ಘಟಕದ ರಮೇಶ್‌ ಹಾಗೂ ಇತರರು ಉಪಸ್ಥಿತರಿದ್ದರು.

ಸಂಚಾರ ಎಲ್ಲೆಲ್ಲಿ: ನವೆಂಬರ್‌ 18ರಂದು ಚನ್ನ ಪಟ್ಟಣ ತಾಲೂಕು, ನವೆಂಬರ್‌ 19ರಂದು ಕನಕಪುರ ತಾಲೂಕು, ನವೆಂಬರ್‌ 20ರಂದು ಮಾಗಡಿ ತಾಲೂಕಿನಲ್ಲಿ ಮಕ್ಕಳ ಸಹಾಯ ವಾಣಿಯ ಪ್ರಚಾರ ವಾಹನವು ಸಂಚರಿಸಲಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.