ಮರ ಗಣತಿ ಅಭಿಯಾನಕ್ಕೆ ಚಾಲನೆ


Team Udayavani, Nov 18, 2019, 3:00 AM IST

maraganati

ಮೈಸೂರು: ಬೆಂಗಳೂರಿನ ವೃಕ್ಷ ಫೌಂಡೇಷನ್‌ ವತಿಯಿಂದ ನಡೆದ ಮರಗಳ ಗಣತಿ ಅಭಿಯಾನಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಸುತ್ತಳತೆ ಪಟ್ಟಿ ಹಿಡಿದು ಮರದ ಗಾತ್ರ ಅಳೆಯುವ ಮೂಲಕ ಚಾಲನೆ ನೀಡಿದರು. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಕುವೆಂಪು ಉದ್ಯಾನವನ ಬಳಿ ಭಾನುವಾರ ಬೆಳಗ್ಗೆ ಮರಗಳ ಗಣತಿಗೆ ಆರಂಭಿಸಲಾಯಿತು.

ಮರಳ ಸಂರಕ್ಷಣೆಯಲ್ಲಿ ತೊಡಗಿ: ಬೆಂಗಳೂರಿನಲ್ಲಿ ವೃಕ್ಷಗಳ ಗಣತಿ ಮಾಡಿ ಬಿಬಿಎಂಪಿಗೆ ವರದಿ ನೀಡಿರುವ ವೃಕ್ಷ ಫೌಂಡೇಷನ್‌ ಮೈಸೂರಿನಲ್ಲೂ ಮರಗಳ ಗಣತಿ ನಡೆಸಲು ಉದ್ದೇಶಿಸಿದೆ. ಈ ಅಭಿಯಾನಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮರದ ಗಾತ್ರ ಅಳೆದು, ಅದರ ಸುತ್ತಳತೆಯ ಮಾಹಿತಿ ಮೂಲಕ ಚಾಲನೆ ನೀಡಿದರಲ್ಲದೆ, ಮರಗಳ ಅಂಕಿ ಅಂಶಗಳು ದಾಖಲೀಕರಣ ಉತ್ತಮ. ಮರಗಳ ಸಂರಕ್ಷಣೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದರು.

ಮರಗಳ ಗಣತಿ ಅಗತ್ಯ: ಪಾಲಿಕೆ ಸದಸ್ಯ ಶಿವಕುಮಾರ್‌ ಮಾತನಾಡಿ, ನಗರದಲ್ಲಿ ಮರಗಳ ಗಣತಿ ಆರಂಭಿಸಿರುವುದು ಶ್ಲಾಘನೀಯ. ಗಣತಿ ನಂತರ ಮೈಸೂರಿನಲ್ಲಿ ಯಾವ ಯಾವ ಪ್ರಭೇದದ ಮರಗಳಿವೆ ಎಂಬ ಅಂಶ ತಿಳಿಯಲಿದೆ. ಅಲ್ಲದೆ ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಗಣತಿ ಅಗತ್ಯವಾಗಿದೆ. ಇನ್ನೂ ಯಾವ ಪ್ರಭೇದದ ಗಿಡಗಳು ಬೇಕು, ಎಷ್ಟು ಪ್ರಮಾಣದಲ್ಲಿ ಬೇಕು ಎಂಬುದನ್ನು ತಿಳಿಸಿದರೆ ಎಂದು ಹೇಳಿದರು.

ಎಲ್ಲ ತಳಿಯ ಮರಗಳ ಮಾಹಿತಿ: ವೃಕ್ಷ ಫೌಂಡೇಷನ್‌ ಸಂಸ್ಥಾಪಕ ವಿಜಯ್‌ ನಿಶಾಂತ್‌ ಮಾತನಾಡಿ, ಇಂದು ಬೆಂಗಳೂರಿನಲ್ಲಿ ಒಂದು ಬಡಾವಣೆಯಲ್ಲಿ ಪ್ರಾಯೋಗಿಕವಾಗಿ ಮರಗಳ ಗಣತಿ ನಡೆಸಿ ಬಿಬಿಎಂಪಿಗೆ ವರದಿ ಸಲ್ಲಿಸಲಾಗಿತ್ತು. ಇದರ ಮಹತ್ವವನ್ನು ಮನಗಂಡು ಹೈಕೋರ್ಟ್‌ ಬೆಂಗಳೂರಾದ್ಯಂತ ಮರಗಳ ಗಣತಿಯನ್ನು ನಡೆಸಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಸೂಚಿಸಿದೆ. ಇದಕ್ಕಾಗಿ ಬಿಬಿಎಂಪಿ 4 ಕೋಟಿ ರೂ. ಮೀಸಲಿಟ್ಟಿದೆ.

ಮೈಸೂರಿನಲ್ಲೂ ಮರಗಳ ಗಣತಿ ಮಾಡಿ, ದಾಖಲೀಕರಣ ಮಾಡಿದ ನಂತರ ಮೈಸೂರು ನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಗೆ ನೀಡಲಾಗುತ್ತದೆ. ಇದರಿಂದ ಯಾವ ಬಡಾವಣೆಯಲ್ಲಿ ಎಷ್ಟು ಮರವಿದೆ. ಯಾವ ತಳಿಯ ಮರ, ದುರ್ಬಲ ಮರಗಳು, ಆರೋಗ್ಯವಂತ ಮರಗಳ ಸಂಖ್ಯೆ ಸೇರಿದಂತೆ ಇನ್ನಿತರ ಮಾಹಿತಿ ಲಭ್ಯವಾಗಲಿದೆ.

ಇದಕ್ಕಾಗಿ ಆ್ಯಪ್‌ವೊಂದನ್ನು ಅಭಿವೃದ್ಧಿ ಪಡಿಸಿದ್ದು, ಅದರಲ್ಲಿ ಮರಗಳ ಮಾಹಿತಿಯನ್ನು ನಮೂದಿಸಿ, ಅವುಗಳ ಚಿತ್ರವನ್ನು ತೆಗೆದು ಅಪ್‌ಲೋಡ್‌ ಮಾಡಲಾಗುತ್ತದೆ. ಅಲ್ಲದೆ ಮರವಿರುವ ಲೋಕೆಷನ್‌ ನಮೂದಿಸುವುದರಿಂದ ಮೈಸೂರಿನಲ್ಲಿರುವ ಯಾವುದೇ ಮರವನ್ನು ಪಾಲಿಕೆ ಹಾಗೂ ಅರಣ್ಯ ಇಲಾಖೆ ಅನುಮತಿಯಿಲ್ಲದೆ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಆ್ಯಪ್‌ನಲ್ಲಿದೆ ಸಮಗ್ರ ಮಾಹಿತಿ: ಆ್ಯಪ್‌ನಲ್ಲಿ ಮರದ ಸುತ್ತಳತೆ, ಎತ್ತರ, ಆ ಮರದಲ್ಲಿ ಪಕ್ಷಿಗಳ ಗೂಡು ಇರುವ ಬಗ್ಗೆ, ಕೀಟಗಳ ವಾಸದ ಬಗ್ಗೆ, ಪಕ್ಷಿಗಳಿದ್ದರೆ ಯಾವ ಪ್ರಭೇದದ ಪಕ್ಷಿಯನ್ನು ಆಕರ್ಷಿಸುತ್ತವೆ ಎಂಬ ಮಾಹಿತಿಯನ್ನೂ ನಮೂದಿಸಲಾಗುತ್ತದೆ. ಗಣತಿಯಲ್ಲಿ ವಾರ್ಡ್‌ವಾರು, ಕ್ಷೇತ್ರವಾರು ಮರಗಳ ಅಂಕಿ ಅಂಶ ದೊರೆಯಲಿದೆ. ಅಲ್ಲದೆ ಪರಿಸರ ಸಮತೋಲನ ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಗುಣಮಟ್ಟದ ಆಮ್ಲಜನಕ ಇರುವ ಪರಿಸರ ಕೊಡುಗೆ ನೀಡಲು ನೆಡಬೇಕಾದ ಗಿಡ‌ಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ.

ಈಗಾಗಲೇ ಅರಣ್ಯ ಇಲಾಖೆ ಕೋಟಿ ವೃಕ್ಷ ಅಭಿಯಾನ ನಡೆಸಲು ಉದ್ದೇಶಿಸಿದ್ದು, ಯಾವ ಬಡಾವಣೆಗಳಲ್ಲಿ ಗಿಡ ನೆಡಬಹುದೆಂಬ ಮಾಹಿತಿಯೂ ಲಭ್ಯವಾಗಲಿದೆ ಎಂದು ಹೇಳಿದರು. ಆರ್‌ಎಫ್ಒ ಗೋವಿಂದರಾಜು, ವೃಕ್ಷ ಫೌಂಡೇಶನ್‌ ಸಹಾಯಕ ಸಂಸ್ಥಾಪಕ ಆರ್‌.ರವಿಕುಮಾರ್‌, ಎಸ್‌.ಶರೀಫ್, ಟಿ.ವಿ.ಚಾವೀನ್‌, ಇಂಡಿಯನ್‌ ವೈಲ್ಡ್‌ಲೈಫ್ ಎಕ್ಸ್‌ಪ್ರೋರರ್ನ ಭಾಗ್ಯಲಕ್ಷ್ಮೀ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.