ಅಯೋಧ್ಯೆ ತೀರ್ಪು: ಸಾಂವಿಧಾನಿಕ ಪೀಠದ ನ್ಯಾಯಮೂರ್ತಿಯೊಬ್ಬರಿಗೆ ಝಡ್ ಸೆಕ್ಯುರಿಟಿ


Team Udayavani, Nov 17, 2019, 8:58 PM IST

Supreme-Court-of-India-650

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಅಯೋಧ್ಯೆ ತೀರ್ಪನ್ನು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿದ್ದ ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿರುವ ಕರ್ನಾಟಕದವರೇ ಆದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರಿಗೆ ಕೇಂದ್ರ ಸರಕಾರ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲು ನಿರ್ಧರಿಸಿದೆ. ನ್ಯಾಯಮೂರ್ತಿ ನಝೀರ್ ಅವರ ಕುಟುಂಬ ಸದಸ್ಯರಿಗೂ ಸಹ ಸೂಕ್ತ ಭದ್ರತೆಯನ್ನು ಒದಗಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಭದ್ರತೆ ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

ನ್ಯಾಯಮೂರ್ತಿ ನಝೀರ್ ಅವರಿಗೆ ಕೆಲವು ಮೂಲಭೂತ ಸಂಘಟನೆಗಳಿಂದ ಪ್ರಾಣಹಾನಿ ಬೆದರಿಕೆ ಇರುವ ಕಾರಣ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಮನೆಗಳಿಗೂ ಸಹ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಭದ್ರತೆಯನ್ನು ಒದಗಿಸಲಾಗಿದೆ.

ಜಸ್ಟಿಸ್ ಅಬ್ದುಲ್ ನಝೀರ್ ಮತ್ತು ಕರ್ನಾಟಕ ಹಾಗೂ ದೇಶದ ಇನ್ನಿತರ ಭಾಗಗಳಲ್ಲಿ ಇರುವ  ಅವರ ಕುಟುಂಬ ಸದಸ್ಯರಿಗೆ ತಕ್ಷಣವೇ ಅನ್ವಯವಾಗುವಂತೆ ‘ಝಡ್’ ಭದ್ರತೆಯನ್ನು ಸಂಬಂಧಿತ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು ಒದಗಿಸಲಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

ನ್ಯಾಯಮೂರ್ತಿ ನಝೀರ್ ಅವರು ಬೆಂಗಳೂರು ಅಥವಾ ಮಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಖೋಟಾದಡಿಯಲ್ಲಿ ಅವರಿಗೆ ಈ ಭದ್ರತೆ ಸಿಗಲಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಝಡ್ ವಿಭಾಗದಡಿಯಲ್ಲಿ ಬರುವ ಭದ್ರತೆಯಲ್ಲಿ ಅರೆಸೇನಾಪಡೆ ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಒಟ್ಟು 22 ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ.

ಅಯೋಧ್ಯೆಯಲ್ಲಿನ ರಾಮಜನ್ಮಭೂಮಿ ವಿವಾದದ ತೀರ್ಪು ಮಾತ್ರವಲ್ಲದೇ, ಜಸ್ಟೀಸ್ ಅಬ್ದುಲ್ ನಝೀರ್ ಅವರು ತ್ರಿವಳಿ ತಲಾಖ್ ಅಸಾಂವಿಧಾನಿಕ ಎಂದು ತೀರ್ಪು ನೀಡಿದ್ದ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಮೂರ್ತಿಗಳಲ್ಲಿ ಒಬ್ಬರಾಗಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.